ಮಹಿಳೆ ಕೊಲೆ ಪ್ರಕರಣ: ಪ್ರಿಯಕರನೇ ಕೊಲೆಗಾರ
Team Udayavani, Jun 13, 2019, 3:00 AM IST
ಬೆಂಗಳೂರು: ಕೆಲದಿನಗಳ ಹಿಂದೆ ಎಚ್ಬಿಆರ್ ಲೇಔಟ್ನ ಪಾಳುಬಿದ್ದ ಕಟ್ಟಡದ ಶೌಚಗೃಹದಲ್ಲಿ ಅಪರಿಚಿತ ಮಹಿಳೆಯ ಶವದ ಮೂಲ ಪತ್ತೆಹಚ್ಚಿರುವ ಬಾಣಸವಾಡಿ ಠಾಣೆ ಪೊಲೀಸರು, ಮಹಿಳೆಯನ್ನು ಕೊಲೆಮಾಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಥಣಿಸಂದ್ರದ ನಿವಾಸಿ ನಳಿನಿ ಮೇರಿ (46) ಕೊಲೆಯಾದ ಮಹಿಳೆ. ಆಕೆಯ ಪ್ರಿಯಕರ ರಮೇಶ್ ಮೇ 31ರಂದು ನಳಿನಿಯನ್ನು ಶೌಚಗೃಹದಲ್ಲಿ ಕೊಲೆಗೈದು ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮೇ 31ರಂದು ಬೆಳಗ್ಗೆ 9 ಗಂಟೆಗೆ ಕಾಚರಕನಹಳ್ಳಿಯಲ್ಲಿ ಕೆಲಸ ಹುಡುಕಿಕೊಂಡು ಬರುವುದಾಗಿ ಹೇಳಿ ತೆರಳಿದ್ದ ನಳಿನಿ ಕೆಲ ದಿನ ಕಳೆದರೂ ಮನೆಗೆ ವಾಪಸ್ಸಾಗಿರಲಿಲ್ಲ. ಹೀಗಾಗಿ ತಾಯಿ ನಾಪತ್ತೆ ಬಗ್ಗೆ ಅವರ ಪುತ್ರ ಹೆಣ್ಣೂರು ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು.
ಜೂ.11ರ ಮಧ್ಯಾಹ್ನ ಎಚ್ಬಿಆರ್ ಲೇಔಟ್ನ ಪಾಳುಬಿದ್ದ ಶೌಚಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವಪತ್ತೆಯಾಗಿತ್ತು. ಈ ಕುರಿತು ತನಿಖೆ ಚುರುಕುಗೊಳಿಸಿದ ಬಾಣಸವಾಡಿ ಠಾಣೆ ಪೊಲೀಸರು ನಾಪತ್ತೆಯಾಗಿದ್ದ ನಳಿನಿ ಎಂಬುದನ್ನು ಪತ್ತೆಹಚ್ಚಿದ್ದರು. ಜತೆಗೆ, ಆಕೆಯ ಜತೆ ರಮೇಶ್ ಅನೈತಿಕ ಸಂಬಂಧ ಹೊಂದಿದ್ದ ಬಗ್ಗೆ ಮಾಹಿತಿ ಕಲೆಹಾಕಿದ್ದರು.
ಅನುಮಾನದ ಮೇರೆಗೆ ರಮೇಶ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ. ನಳಿನಿ ಜತೆ ಉತ್ತಮ ಒಡನಾಟ ಹೊಂದಿದ್ದೆ. ಆದರೆ, ಆಕೆ ಬೇರೆಯವರ ಜತೆ ಒಡನಾಟ ಹೊಂದಿದ್ದಳು. ಈ ನನ್ನ ಗಮನಕ್ಕೆ ಬಂದಿತ್ತು.
ಈ ಹಿನ್ನೆಲೆಯಲ್ಲಿ ಆಕೆಯನ್ನು ಎಚ್ಬಿಆರ್ ಲೇಔಟ್ನ ಪಾಳುಬಿದ್ದ ಕಟ್ಟಡದ ಶೌಚಗೃಹಕ್ಕೆ ಕರೆಸಿ ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್