ಮಹಿಳಾ ಸಂಘಟನೆ ಪ್ರತಿಭಟನೆ ಇಂದು
Team Udayavani, Apr 4, 2019, 3:00 AM IST
ಬೆಂಗಳೂರು: ದೇಶದಾದ್ಯಂತ ಇರುವ ಮಹಿಳೆಯರು ಮತ್ತು ಅಳಿವಿನ ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳು ಹಾಗೂ ಸಾಂವಿಧಾನಿಕ ಹಕ್ಕುಗಳ ಮೇಲೆ ದಾಳಿ ನಡೆಸುತ್ತಿರುವವರ ವಿರುದ್ಧ ವಿವಿಧ ಮಹಿಳಾ ಸಂಘಟನೆ ವತಿಯಿಂದ ಏ.4 (ಗುರುವಾರ) ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿಪರ ಚಿಂತಕಿ ಕವಿತಾ ಲಂಕೇಶ್ ಹೇಳಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಬ್ಯಾಂಕ್ ಬಳಿ ಗುರುವಾರ ಬೆಳಗ್ಗೆ 11ಕ್ಕೆ ಮಹಿಳಾ ನಡಿಗೆ ಭಾರತ ಎಂಬ ಘೋಷ ವಾಕ್ಯದೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಕೇಂದ್ರದಲ್ಲಿ ಕಳೆದ 5 ವರ್ಷಗಳಿಂದ ಆಡಳಿತ ನಡೆಸಿದ ಮೋದಿ ನೇತೃತ್ವದ ಸರ್ಕಾರ ಮಹಿಳೆಯರು, ಮಕ್ಕಳು, ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ದಲಿತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಗೋರಕ್ಷಣೆಯ ನೆಪದಲ್ಲಿ ಸಾಮೂಹಿಕ ಹತ್ಯೆಗಳನ್ನು ನಡೆಸುವುದಲ್ಲದೆ, ಭಯ ಮತ್ತು ಅಸುರಕ್ಷಿತ ವಾತಾವರಣ ನಿರ್ಮಿಸಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.
ಕೃಷಿ ಕಾರ್ಮಿಕರು, ಯುವಕರು, ಮಹಿಳೆಯರು, ಲೈಂಗಿಕ ಅಲ್ಪಸಂಖ್ಯಾತರು ಮತ್ತು ದಲಿತರು ತಮ್ಮ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸಿದ್ದರೂ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತಾಳಿದೆ. ಪೊಳ್ಳು ಭರವಸೆಗಳನ್ನು ಜನರಿಗೆ ನೀಡಿ ಅದನ್ನು ಈಡೇರಿಸದೆ ಜನರಿಗೆ ವಂಚಿಸಿದೆ. ಇಂತಹ ಸರ್ಕಾರ ನಮಗೆ ಬೇಕೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ
ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!
Bengaluru Road: ಮಳೆ ನಿಂತ ನಂತರ ರಸ್ತೆ ಗುಂಡಿ ದುರಸ್ತಿ ಶುರು
ಹೊಯ್ಸಳ ಪೊಲೀಸರನ್ನು ಕಳ್ಳ ಕಳ್ಳ ಎಂದು ಬೆನ್ನಟ್ಟಿದ ಸಾರ್ವಜನಿಕರು!
Bengaluru: 13 ವರ್ಷದ ಅಪ್ರಾಪ್ತ ಸಹೋದರನಿಂದಲೇ 3 ತಿಂಗಳ ಗರ್ಭಿಣಿಯಾದ ತಂಗಿ!