ತ್ಯಾಜ್ಯ ಸಮಸ್ಯೆ ಪರಿಹಾರಕ್ಕೆ ಸ್ತ್ರೀಶಕ್ತಿ ಮೊರೆ


Team Udayavani, Sep 7, 2019, 3:09 AM IST

tyajya

ಬೆಂಗಳೂರು: ರಾಜಧಾನಿಯಲ್ಲಿ ಸವಾಲಾಗಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆ ಪರಿಹಾರಕ್ಕೆ ಸ್ತ್ರೀ ಶಕ್ತಿ ಸಂಘಟನೆಗಳ ಮೊರೆ ಹೋಗಿದೆ. ಈ ಸಂಬಂಧ ಮಹಿಳಾ ಸ್ವ ಸಹಾಯ ಗುಂಪುಗಳ ಜತೆ ಮಾತುಕತೆ ನಡೆಸಿದ್ದು, ಅ.1ರಿಂದ ಸ್ತ್ರೀ ಶಕ್ತಿ ಸಂಘಟನೆಗಳು ಒಣ ತ್ಯಾಜ್ಯ ಸಂಗ್ರಹಿಸಲಿವೆ. ಈ ಪ್ರಯತ್ನ ಯಶಸ್ವಿಯಾದರೆ ತ್ಯಾಜ್ಯ ವಿಲೇವಾರಿಗೆ ಸ್ತ್ರೀ ಶಕ್ತಿ ಸಂಘಟನೆ ಬಳಸಿಕೊಂಡ ಮೊದಲ ಪಾಲಿಕೆ ಎಂಬ ಹೆಗ್ಗಳಿಕೆಗೂ ಬಿಬಿಎಂಪಿ ಪಾತ್ರವಾಗಲಿದೆ.

ನಗರದಲ್ಲಿ ಒಣ ಹಾಗೂ ಹಸಿ ಕಸ ಪ್ರತ್ಯೇಕಿಸಲು ಹಾಗೂ ಸಂಗ್ರಹಿಸಲು ಈಗಾಗಲೇ ಏಳು ಸಾವಿರಕ್ಕೂ ಅಧಿಕ ಚಿಂದಿ ಆಯುವವರನ್ನು ಬಿಬಿಎಂಪಿ ಗುರುತಿಸಿದ್ದು, ಇವರಿಂದ 145 ವಾರ್ಡ್‌ಗಳಲ್ಲಿ ಮಾತ್ರ ಒಣ ಕಸ ಸಂಗ್ರಹಿಸಲಾಗುತ್ತಿದೆ. ಉಳಿದ 54 ವಾರ್ಡ್‌ಗಳಿಗೆ ಮಹಿಳಾ ಸ್ವ ಸಹಾಯ ಗುಂಪುಗಳ ನೆರವು ಪಡೆಯುವ ಉದ್ದೇಶವಿದೆ.

ಒಣ ಕಸ ಸಂಗ್ರಹಿಸಲು ಮಹಿಳಾ ಸ್ವ ಸಹಾಯ ಗುಂಪುಗಳ ಸದಸ್ಯರ ಜತೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮ್ಯಾಪಿಂಗ್‌ ಪ್ರಕ್ರಿಯೆ ನಡೆಯುತ್ತಿದೆ. ಕೆಲ ವಾರ್ಡ್‌ಗಳ ವಿಸ್ತೀರ್ಣ, ಜನಸಂಖ್ಯೆ ಹೆಚ್ಚಿದ್ದು, ಶೀಘ್ರವೇ ಯಾವ ರಸ್ತೆಗೆ ಯಾರು ಒಣ ಕಸ ಸಂಗ್ರಹಿಸಬೇಕೆಂದು ತಿಳಿಸಲಾಗುವುದು ಎಂದು ಘನತ್ಯಾಜ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತ ರಂದೀಪ್‌ ತಿಳಿಸಿದ್ದಾರೆ.

308 ಕೋಟಿ ರೂ.ಗೆ ಟೆಂಡರ್‌: ಸೆ.1ರಿಂದಲೇ ಹೊಸ ಟೆಂಡರ್‌ ಜಾರಿಯಾಗಬೇಕಾಗಿತ್ತು. ಆದರೆ, ಸರ್ಕಾರ ಬಜೆಟ್‌ ತಡೆಹಿಡಿದ ಕಾರಣ ವಿಳಂಬವಾಗಿದೆ. ಈಗಾಗಲೇ ಗುತ್ತಿಗೆದಾರರಿಗೆ ಕಾರ್ಯಾದೇಶ ಪತ್ರ ನೀಡುತ್ತಿದ್ದು, ಒಂದು ತಿಂಗಳೊಳಗೆ ಕಸ ಸಂಗ್ರಹಣೆ ಕಾರ್ಯ ಆರಂಭಿಸಬೇಕೆಂದು ಪಾಲಿಕೆ ಆದೇಶಿಸಿದೆ.

ಹೊಸ ಟೆಂಡರ್‌ ಪ್ರಕಾರ ಹಸಿ ತ್ಯಾಜ್ಯ ವಿಲೇವಾರಿಗೆ 308 ಕೋಟಿ ರೂ.ಗಳನ್ನು ಪಾಲಿಕೆ ವ್ಯಯಿಸಲಿದೆ. ಒಣ ಕಸ ಸಂಗ್ರಹಣೆಗೆ ಹಣ ಖರ್ಚು ಮಾಡದೇ ಚಿಂದಿ ಆಯುವವರು ಮತ್ತು ಮಹಿಳಾ ಸ್ವ ಸಹಾಯ ಗುಂಪುಗಳ ಮೊರೆಹೋಗಿದ್ದು, ಒಣ ಕಸ ಮಾರಾಟದಿಂದ ಬರುವ ಹಣ ಅವರೇ ಪಡೆಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಣಿಜ್ಯ ಮಳಿಗೆಗಳ ತ್ಯಾಜ್ಯ ಸಂಗ್ರಹಣೆಗೆ ಅವಕಾಶ: ಪಾಲಿಕೆ ವ್ಯಾಪ್ತಿಯ ಮನೆಗಳಲ್ಲಿ ಒಣ ಕಸ ಸಂಗ್ರಹಿಸಲು ಅನುಮತಿ ಸಿಕ್ಕಿದೆ. ಆದರೆ, ಮನೆಯ ಒಣ ಕಸ ಸಂಗ್ರಹದಿಂದ ನಮಗೆ ಆದಾಯ ಬರುವುದಿಲ್ಲ. ಆದ್ದರಿಂದ ವಾಣಿಜ್ಯ ಕಸ ಸಂಗ್ರಹಿಸಲು ಅನುಮತಿ ನೀಡಬೇಕೆಂದು ಮನವಿ ನೀಡಲಾಗಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ಗರುಡಾಚಾರ್‌ ಪಾಳ್ಯ ವಾರ್ಡ್‌ನಲ್ಲಿ 25,600 ಮನೆಗಳಿದ್ದು, 1.5ರಿಂದ 2ಟನ್‌ ಒಣ ಕಸ ಸಂಗ್ರಹವಾಗುತ್ತಿದೆ. ಅದರಲ್ಲಿ ಪುನರ್‌ ಬಳಕೆಯಾಗುವ ಕಸ 50 ಕೆ.ಜಿ. ಮಾತ್ರ. ಆದ್ದರಿಂದ ಪಾಲಿಕೆ ಆಟೋ ಜತೆ ನಿರ್ವಹಣೆ ವೆಚ್ಚ ನೀಡಬೇಕೆಂದು ಮನವಿ ಮಾಡಲಾಗಿದೆ ಎಂದು ಮಹದೇವಪುರ ಮಹಿಳಾ ಒಕ್ಕೂಟದ ಕಾರ್ಯದರ್ಶಿ ನಾಗರತ್ನ ತಿಳಿಸಿದ್ದಾರೆ.

ಮನೆಗಳಲ್ಲಿ ಒಣ ಕಸ ಸಂಗ್ರಹಿಸಲು ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಪಾಲಿಕೆಯಿಂದ ಆಟೋ ನೀಡಲಾಗುವುದು. ಈ ಕಸವನ್ನು ಮಾರಾಟ ಮಾಡಿ ಅದರಿಂದ ಬರುವ ಹಣ ಅವರೇ ಪಡೆಯಬಹುದು. ಸ್ತ್ರೀ ಶಕ್ತಿ ಸಂಘಟನೆಗಳು ಒಣ ಕಸ ಸಂಗ್ರಹ ಮಾಡುವುದರಿಂದ ಕೇಂದ್ರ, ರಾಜ್ಯ ಮತ್ತು ಪಾಲಿಕೆಯ ಹಲವು ಯೋಜನೆಗಳ ನೆರವು ಪಡೆಯಲು ಅರ್ಹತೆ ಪಡೆಯಲಿವೆ.
-ರಂದೀಪ್‌, ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ)

ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಒಣಕಸ ಸಂಗ್ರಹ ಅನುಮತಿ ನೀಡಲು ಚಿಂತಿಸಲಾಗಿದ್ದು, ಅವರಿಗೆ ಪಾಲಿಕೆಯಿಂದ ವೇತನ ನೀಡುವುದಿಲ್ಲ. ಒಣಕಸ ಮಾರಾಟದಿಂದ ಬಂದ ಹಣ ಪಡೆಯಬಹುದು. ಇದರಿಂದ ಅವರ ಗುಂಪು ಮತ್ತು ಜೀವನಮಟ್ಟ ಸುಧಾರಣೆಯಾಗಲಿದೆ. ಆ.1ರಿಂದ ಸ್ತ್ರೀ ಶಕ್ತಿ ಸಂಘಟನೆಗಳು ಒಣ ಕಸ ಸಂಗ್ರಹಿಸಲಿವೆ.
-ಗಂಗಾಂಬಿಕೆ, ಮೇಯರ್‌

* ಮಂಜುನಾಥ್‌ ಗಂಗಾವತಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.