ಕೊಳಗೇರಿ ಮಕ್ಕಳಿಗಾಗಿ ಮನೆ ಬಾಗಿಲಿಗೆ ಬಸ್ ಶಾಲೆ
Team Udayavani, Sep 13, 2022, 12:28 PM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊಳಗೇರಿಯ ಅಂಗನವಾಡಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಫ್ರೀ ಥಿಂಕಿಂಗ್ ಫೌಂಡೇಷನ್, ಬಿಬಿಎಂಪಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ವಂಡರ್ ಆನ್ ವ್ಹೀಲ್ಸ್ (ಮನೆ ಬಾಗಿಲಿಗೆ ಶಾಲೆ) ವಾಹನಕ್ಕೆ ಸೋಮವಾರ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ ನೀಡಿದರು.
ಬಿಬಿಎಂಪಿ ವತಿಯಿಂದ ತನ್ನ ಎಲ್ಲ ವಲಯಗಳಲ್ಲೂ 10 ಬಸ್ಗಳಲ್ಲಿ ಸ್ಕೂಲ್ ಆನ್ ವ್ಹೀಲ್ ವಾಹನಗಳ ಮೂಲಕ ಶಾಲೆಗಳಿಂದ ಹೊರಗುಳಿದ ಮಕ್ಕಳಿಗೆ ಶಿಕ್ಷಣ ನಿಡಲಾಗುತ್ತಿದೆ. ಅದರ ಜತೆಗೆ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮಾಂಟೆಸ್ಸರಿ ಮಕ್ಕಳಿಗಾಗಿ ಮೇ 25ರಂದು ವಂಡರ್ ಆನ್ ವ್ಹೀಲ್ ಬಸ್ ಸೇವೆ ಆರಂಭಿಸಲಾಗಿತ್ತು. ಅದರ ಜತೆಗೆ ಇದೀಗ ಪೂರ್ವ ವಲಯದಲ್ಲೂ ವಂಡರ್ ಆನ್ ವ್ಹೀಲ್ ವಾಹನ ಸೇವೆಗೆ ಚಾಲನೆ ನೀಡಲಾಗಿದ್ದು, ಕೊಳಗೇರಿಯಲ್ಲಿ ವಾಸಿಸುವ 2.5ರಿಂದ 6 ವರ್ಷದ ಮಕ್ಕಳು ವಾಹನಗಳಲ್ಲಿ ಬಂದು ಕಲಿಕೆ ಮಾಡಬಹುದಾಗಿದೆ.
ವಂಡರ್ ಆನ್ ವ್ಹೀಲ್ ವಾಹನದಲ್ಲಿ ಕಲಿಕಾ ಸಾಮಗ್ರಿಗಳು, ಇಬ್ಬರು ಶಿಕ್ಷಕರು, ಒಬ್ಬ ಗ್ರೂಪ್ ಡಿ ನೌಕರ, ಬಿಳಿ ಹಲಗೆ, ಮಕ್ಕಳನ್ನು ಆಕರ್ಷಿಸುವ ಚಿತ್ರಗಳು, ಕುಡಿಯುವ ನೀರು ಸೇರಿ ಇನ್ನಿತರ ಮೂಲಸೌಲಭ್ಯಗಳು ಇರಲಿವೆ. ಬಿಬಿಎಂಪಿ ವಿಶೇಷ ಆಯುಕ್ತ ಡಾ. ರಾಮ್ಪ್ರಸಾತ್ ಮನೋಹರ್, ಶಿಕ್ಷಣ ವಿಭಾಗದ ಸಹಾಯಕ ಆಯುಕ್ತ ಉಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಉಷಾ, ಫ್ರೀ ಥಿಂಕಿಂಗ್ ಫೌಂಡೇಷನ್ ಸಂಸ್ಥೆಯ ಮುಖ್ಯಸ್ಥ ಸುನೋಜ್ ಫಿಲಿಪ್ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ