ಸಮಾಜ ಒಳಿತಿಗಾಗಿ ದುಡಿಯಿರಿ


Team Udayavani, Feb 11, 2019, 6:16 AM IST

samaja.jpg

ಬೆಂಗಳೂರು: ಸಮಾಜದಿಂದ ಆಶ್ರಯ ಪಡೆದುಕೊಂಡವರು ತಮ್ಮ ಏಳ್ಗೆಯ ನಂತರ ಸಮಾಜದ ಒಳಿತಿಗಾಗಿ ದುಡಿಯಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಬನಶಂಕರಿ 2ನೇ ಹಂತದ ಕನಕ ಬಡಾವಣೆಯಲ್ಲಿ ಭಾನುವಾರ ಭುವನೇಶ್ವರಿ ಒಕ್ಕಲಿಗರ ಮಹಿಳಾ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಮರವು ಭೂಮಿಯಿಂದ ಕೆಲ ಅಂಶ ಪಡೆದು ಮಾನವ ಸಮುದಾಯಕ್ಕೆ ಎಲ್ಲವನ್ನೂ ನೀಡುತ್ತದೆ. ನಮ್ಮ ಕಾರ್ಯಗಳೂ ಅದೇ ರೀತಿ ಇರಬೇಕು ಎಂದು ತಿಳಿಸಿದರು.

ಸಾಮಾಜಿಕ ಕಾರ್ಯಗಳು ಯಾವತ್ತೂ ಜಾತಿ ಆಧಾರಿತವಾಗಿರಬಾರದು. ಸಮುದಾಯ ನೆಪವಷ್ಟೇ, ಯಾವತ್ತೂ ಸಮುದಾಯವನ್ನು ಮೀರಿ ಸಾಮಾಜಿಕ ಸೇವೆ ನಡೆಯಬೇಕು. ಹೀಗೆ ಮಾಡಿದಾಗ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದರು. ಆದಿಚುಂಚನಗಿರಿ ಸಂಸ್ಥಾನ ಕೇವಲ ಒಕ್ಕಲಿಗ ಜಾತಿಗೆ ಸೀಮಿತವಾಗಿಲ್ಲ. ಎಲ್ಲ ಧರ್ಮದವರು ಶ್ರೀಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಎಲ್ಲರನ್ನೂ ಮಹಾಸಂಸ್ಥಾನ ಮಾತಾ ವಾತ್ಸಲ್ಯದಿಂದ ನೋಡುತ್ತದೆ ಎಂದು ನುಡಿದರು.

ಮಹಿಳೆ ಸಮರ್ಥಳು: ಮೇಯರ್‌ ಗಂಗಾಂಬಿಕೆ ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ತೋರುತ್ತಿದ್ದು ಪುರುಷರಷ್ಟೇ ಸಮರ್ಥರು ಎಂಬುವುದನ್ನು ತೋರ್ಪಡಿಸುತ್ತಿದ್ದಾರೆ. ಸೇವಾ ಕ್ಷೇತ್ರದಲ್ಲೂ ಮತ್ತಷ್ಟು ಉತ್ತಮ ಕೆಲಸ ಮಾಡಲಿ ಎಂದು ಆಶಿಸಿದರು.

ಮೇಯರ್‌ ಪಟ್ಟ ನನಗೆ ಒಲಿದು ಬಂದಾಗ ಕೇವಲ 2 ಬಾರಿ ಆಯ್ಕೆಯಾದ ಇವರು ಉತ್ತಮ ಆಡಳಿತ ನೀಡುತ್ತಾರಾ? ಎಂಬ ಅನುಮಾನ ಹಲವರಲ್ಲಿತ್ತು. ಆದರೆ ಹಿಂಜರಿಕೆಯನ್ನು ಮೆಟ್ಟಿನಿಂತು ಅಧಿಕಾರ ನಡೆಸುತ್ತಿದ್ದು, ಜನ ಮೆಚ್ಚುವ ಕೆಲಸ ಮಾಡುವುದಾಗಿ ಹೇಳಿದರು.

ಅದಮ್ಯ ಚೇತನ ಸಂಸ್ಥೆ ಗೆ 25 ಸಾವಿರ ರೂ.: ಪ್ರಸ್ತಾವಿಕವಾಗಿ ಮಾತನಾಡಿದ ಸಂಘದ ಅಧ್ಯಕ್ಷೆ ಮಹಾದೇವಮ್ಮ, ಸಂಘದ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸಚಿವರಾಗಿದ್ದ ಅನಂತಕುಮಾರ್‌ ಅವರ ಆರ್ಥಿಕ ನೆರವಿದೆ. ಅದಮ್ಯ ಚೇತನ ಸಂಸ್ಥೆಯು ಹಸಿದ ಮಕ್ಕಳಿಗೆ ಬಿಸಿಯೂಟ ನೀಡುತ್ತಿದ್ದು, ಆ ಸಂಸ್ಥೆಗಾಗಿ ಸಂಘದಿಂದ 25 ಸಾವಿರ ರೂ. ನೀಡುವುದಾಗಿ ಹೇಳಿದರು. ಮಾಜಿ ಉಪ ಮೇಯರ್‌ ಎಲ್‌.ಶ್ರೀನಿವಾಸ್‌, ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ, ಅದಮ್ಯ ಚೇತನ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

chChamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Chamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ

DHONI JADEJA IPL FINAL

IPL: ಧೋನಿಯ ಬಗ್ಗೆ ಜಡೇಜಾ ಟ್ವೀಟ್‌… ʻಮಾಹಿ ಭಾಯಿ…ನಿಮಗಾಗಿ..ʼ- ಏನಿದು?

ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

New Delhi: ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

Maharashtra; ಕಾಂಗ್ರೆಸ್​ ಸಂಸದ ಬಾಲು ಧನೋರ್ಕರ್ ನಿಧನ

Maharashtra; ಕಾಂಗ್ರೆಸ್​ ಸಂಸದ ಬಾಲು ಧನೋರ್ಕರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಶೇ.50 ಮಂದಿ ತಂಬಾಕು ಬಳಕೆ

ರಾಜ್ಯದಲ್ಲಿ ಶೇ.50 ಮಂದಿ ತಂಬಾಕು ಬಳಕೆ

ವಿದೇಶಿ ಮಹಿಳೆ ಬಳಿ 30 ಕೋಟಿ ಮೌಲ್ಯದ ಡ್ರಗ್ಸ್‌!

ವಿದೇಶಿ ಮಹಿಳೆ ಬಳಿ 30 ಕೋಟಿ ಮೌಲ್ಯದ ಡ್ರಗ್ಸ್‌!

ಹಣದ ವಿಚಾರಕ್ಕೆ ಹತ್ಯೆ: 7 ಜನ ಸೆರೆ

ಹಣದ ವಿಚಾರಕ್ಕೆ ಹತ್ಯೆ: 7 ಜನ ಸೆರೆ

ಯುವಿಸಿಇ ಸಿಬ್ಬಂದಿಗೆ ಎರಡು ತಿಂಗಳ ಬಳಿಕ ಸಂಬಳ

ಯುವಿಸಿಇ ಸಿಬ್ಬಂದಿಗೆ ಎರಡು ತಿಂಗಳ ಬಳಿಕ ಸಂಬಳ

ಜಿ.ಪಂ., ತಾ.ಪಂ. ಚುನಾವಣೆ: ಕಾಲಾವಕಾಶ ಕೋರಿಕೆ

ಜಿ.ಪಂ., ತಾ.ಪಂ. ಚುನಾವಣೆ: ಕಾಲಾವಕಾಶ ಕೋರಿಕೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

chChamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Chamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ

DHONI JADEJA IPL FINAL

IPL: ಧೋನಿಯ ಬಗ್ಗೆ ಜಡೇಜಾ ಟ್ವೀಟ್‌… ʻಮಾಹಿ ಭಾಯಿ…ನಿಮಗಾಗಿ..ʼ- ಏನಿದು?