ವಯಸ್ಸಾದ ಮಾವಿನ ಮರಗಳ ಪುನಃಶ್ಚೇತನಕ್ಕೆ ಕಾರ್ಯಾಗಾರ


Team Udayavani, Aug 3, 2017, 11:46 AM IST

mango.jpg

ಬೆಂಗಳೂರು: ಅಧಿಕ ಇಳುವರಿ ಮತ್ತು ಗುಣಮಟ್ಟದ ಮಾವು ಅಭಿವೃದ್ಧಿಪಡಿಸುವ ಉದ್ದೇಶದಿಂದ ಮಾವಿನ ಮರಗಳ ಪುನಃಶ್ಚೇತನಕ್ಕಾಗಿ ವೈಜ್ಞಾನಿಕ ತರಬೇತಿ ಮತ್ತು ಕಾರ್ಯಾಗಾರವನ್ನು ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಡೆಸಲಿದೆ.

ಮಾವು ಬೆಳೆಗಾರರು ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಉತ್ಪಾದನೆ ಹೆಚ್ಚಿಸಬೇಕು ಎಂಬ ಉದ್ದೇಶದಿಂದ ಕಾರ್ಯಕ್ರಮವನ್ನು ನಿಗಮ ಆಯೋಜಿಸುತ್ತಿದೆ. ರಾಜ್ಯದ ಸುಮಾರು ಶೇ.95ರಷ್ಟು ಮಳೆಯಾಶ್ರೀತ ಮಾವಿನ ತೋಟಗಳಿವೆ. ಪ್ರಸ್ತುತ ಹಳೆಯ ತೋಟಗಳು ಹೆಚ್ಚು ಇದ್ದು, ಪುನಃಶ್ವೇತನದ ಅವಶ್ಯಕತೆ ಇದೆ. ಈ ಕುರಿತು ಮಾವು ಬೆಳೆಗಾರರನ್ನು ಸಂಪರ್ಕಿಸಿ, ತರಬೇತಿ ಮತ್ತು ಕಾರ್ಯಗಾರ ನಡೆಸುತ್ತಿರುವುದಾಗಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

ಬೆಳಗಾವಿ, ಹಾವೇರಿ, ಕೊಪ್ಪಳ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಶ್ರೀನಿವಾಸಪುರ, ಮುಳಬಾಗಿಲು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ಮಾವು ಬೆಳೆಗಾರರನ್ನು ಸಂಪರ್ಕಿಸಿ ಇಳುವರಿ ಹೆಚ್ಚಿಸಲು ಮಾಹಿತಿ ನೀಡಲಾಗುವುದು. ಹಳೆಯ ಮಾವಿನ ಮರಗಳಲ್ಲಿ ಅನಾವಶ್ಯಕವಾಗಿ ಬೆಳೆದ ರೆಂಬೆ-ಕೊಂಬೆಗಳನ್ನು ಕತ್ತರಿಸುವುದು. ಮಣ್ಣು ಮತ್ತು ನೀರಿನ ಸಂರಕ್ಷಣೆ ಹೆಚ್ಚಿಸುವುದು, ಕಾಂಡಕ್ಕೆ ರಕ್ಷಕ ಪೇಸ್ಟ್‌ನ್ನು ಬಳಸುವುದು ಹಾಗೂ ಕೀಟರೋಗ ನಿವಾರಣೆ ಮಾಡುವುದು ಪುನಶ್ಚೇತನ ಕಾರ್ಯಕ್ರಮದ ಪ್ರಮುಖ ವಿಷಯವಾಗಿದೆ ಎಂದು ಅವರು ಹೇಳಿದರು.

ಹೊಸ ತಳಿ ಕಸಿ: ಜೂನ್‌ ಅಂತ್ಯದ ವೇಳೆಗೆ ಈ ವರ್ಷದ ಮಾವು ಕೊಯ್ಲು ಮುಗಿದಿದ್ದು, ಜುಲೈನಿಂದಲೇ ಪುನಃಶ್ಚೇತನ ಕಾರ್ಯ ಕೈಗೊಳ್ಳಲಾಗಿದೆ. ಆಗಸ್ಟ್‌ ತಿಂಗಳ ಅಂತ್ಯದೊಳಗೆ ಪುನಃಶ್ಚೇತನ ಕಾರ್ಯ ಪೂರ್ಣಗೊಳಿಸಿದರೆ, ಅಕ್ಟೋಬರ್‌, ನವೆಂಬರ್‌ ವೇಳೆಗೆ ಮಾವು ಹೂವು ಬಿಡಲು ಪ್ರಾರಂಭಿಸುತ್ತದೆ. ಉಳಿಸಿಕೊಳ್ಳಲು ಸಾಧ್ಯವಿರುವ ಮರಗಳ ರೆಂಬೆಗಳನ್ನು ಸಂಪೂರ್ಣವಾಗಿ ಕತ್ತರಿಸಿ, ಅದೇ ತಳಿಯ ಮಾವು ಬೇಕಿದ್ದರೆ, ಅದನ್ನೇ ಚಿಗುರಲು ಬಿಡಬಹುದು. ಒಂದು ವೇಳ ಆ ತಳಿಯ ಮಾವು ಬೇಡವಾದರೆ ಕೊಂಬೆಗಳನ್ನು ಕತ್ತರಿಸಿ ಅದಕ್ಕೆ ಕಸಿ ಮಾಡಬಹುದು. ಮರಗಳು ಮುದಿಯಾಗಿದ್ದು, ಒಣಗಿದ್ದರೆ ಬುಡಸಮೇತ ತೆಗೆಸಿ, ಹೊಸ ಸಸಿಗಳನ್ನು ನೆಡಲಾಗುವುದು ಎಂದರು. 

ನರೇಗಾ ನೆರವು: ಪ್ರಾರಂಭಿಕ ವರ್ಷದಲ್ಲಿ 10 ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಟ್ಟಿದೆ. ಆರ್‌ಕೆವಿವೈ ಮತ್ತು ನರೇಗಾದ ನೆರವಿನೊಂದಿಗೆ ಮಾವು ಪುನಃಶ್ಚೇತನ ಕಾರ್ಯ ನಡೆಯಲಿದೆ. ರೈತರು ಹಾಗೂ ಬೆಳೆ ಆಯ್ಕೆಯ ಕುರಿತು ಮಾರ್ಗಸೂಚಿ ತಯಾರಿಸಲಾಗುತ್ತಿದೆ. ಮಾವಿನ ಸಸಿ ನೆಟ್ಟು 15 ವರ್ಷ ಮೇಲ್ಪಟ್ಟಿರಬೇಕು. ಸರಿಯಾದ ಫಸಲು ಕೊಡದಿರಬೇಕು. ಅಂತಹ ಮಾವನ್ನು ಪುನಃಶ್ಚೇತನಗೊಳಿಸಲು ರೈತರಿಗೆ ಅಗತ್ಯ ಆರ್ಥಿಕ ನೆರವು ನೀಡಲಾಗುವುದು. ಈಗಾಗಲೇ ಬೆಳೆ ವ್ಯಾಪ್ತಿಯ ಪ್ರಮಾಣವನ್ನೂ ಗುರುತಿಸಲಾಗಿದೆ ಎಂದು ಗೋಪಾಲಕೃಷ್ಣ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ನಿಗಮದ ಉಪಾಧ್ಯಕ್ಷ ರಾಜ್‌ಕುಮಾರ್‌, ವ್ಯವಸ್ಥಾಪಕ ನಿರ್ದೇಶಕ ಕದಿರೇಗೌಡ ಇದ್ದರು. 

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.