ವಿಶ್ವ ಯಕೃತ್ ದಿನ: 15 ವರ್ಷದಲ್ಲಿ 543 ಮಂದಿಗೆ ಲಿವರ್ ಕಸಿ


Team Udayavani, Apr 19, 2022, 4:55 PM IST

world liver day 2022: Liver transplant for 543 people in 15 years

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ 40ರಿಂದ 50 ವರ್ಷದೊಳಗಿನವರಲ್ಲಿ ಹೆಚ್ಚಾಗಿ ಯಕೃತ್‌ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, ಶೇ.75ರಷ್ಟು ಹಾನಿಗೊಳಗಾದ ಯಕೃತ್‌ ಗೆ ಕಸಿಯೊಂದೇ ಪರ್ಯಾಯ ಮಾರ್ಗವಿದ್ದು, ರಾಜ್ಯದಲ್ಲಿ ಕಳೆದ ಮೂರು ತಿಂಗಳಲ್ಲಿ 25 ಮಂದಿಗೆ ಯಕೃತ್‌ (ಲಿವರ್‌) ಕಸಿ ಮಾಡಲಾಗಿದೆ.

ದೇಶದಲ್ಲಿ ಯಕೃತ್‌ ಸಮಸ್ಯೆಯಿಂದ ಬಳಲುತ್ತಿರುವವಲ್ಲಿ ಪ್ರತಿವರ್ಷ 2.64ಲಕ್ಷ ಮಂದಿ ಮೃತಪಡುತ್ತಿದ್ದಾರೆ. ರಾಜ್ಯದಲ್ಲಿ ತೀವ್ರ ತರಹದ ಲಿವರ್‌ ಸಮಸ್ಯೆಯಿಂದ ಬಳಲುತ್ತಿರುವ ಸುಮಾರು 4,000 ರಿಂದ 6,000 ಮಂದಿ ಸರಿಯಾದ ಸಂದರ್ಭದಲ್ಲಿ ಲಿವರ್‌ ಕಸಿ ಹಾಗೂ ಚಿಕಿತ್ಸೆ ಪಡೆಯದೇ ಮೃತಪಡುತ್ತಿದ್ದಾರೆ.

ಮಾನವ ದೇಹದಲ್ಲಿ ಯಕೃತ್‌ ಅತಿದೊಡ್ಡ ಅಂಗ. ದಿನದ 24 ಗಂಟೆಯೂ ಕೆಲಸ ಮಾಡುತ್ತದೆ. ರಕ್ತ ಹೆಪ್ಪುಗಟ್ಟುವಿಕೆ, ರೋಗನಿರೋಧಕ ಶಕ್ತಿ ಹೆಚ್ಚುವ ನಿಟ್ಟಿನಲ್ಲಿ ಕೆಲಸ ಮಾಡುವ ಯಕೃತ್‌, ದೇಹಕ್ಕೆ ಅಗತ್ಯವಾದ ಕಬ್ಬಿಣಾಂಶ ಮತ್ತು ಇತರೆ ಪೌಷ್ಟಿಕಾಂಶಗಳನ್ನು ಸಂಗ್ರಹಿಸುತ್ತದೆ. ಅನಾರೋಗ್ಯ, ಶಸ್ತ್ರಚಿಕಿತ್ಸೆ ಮುಂತಾದ ಆಘಾತಗಳಿಂದ ಚೇತರಿಸಿಕೊಳ್ಳುವ ಸಾಮರ್ಥ್ಯ ಯಕೃತ್‌ಗಿದೆ. ಶೇ.75ರಷ್ಟು ಯಕೃತ್‌ ಕೋಶ ಹಾನಿಯಾದರೆ ಕಷ್ಟವಾಗುತ್ತದೆ.

ಯಕೃತ್ತಿನ ಆರೋಗ್ಯ ಕೆಡಿಸುವಲ್ಲಿ ಮದ್ಯಪಾನಕ್ಕೆ ಮೊದಲ ಸ್ಥಾನ. ಉಳಿದಂತೆ, ವೈರಾಣು ಜ್ವರ, ಅತೀಯಾದ ಬೊಜ್ಜು, ವಿಷಕಾರಿ ಅಂಶ ಸೇವನೆ ಸೇರಿದಂತೆ ಇತರೆ ಯಕೃತ್‌ ಹಾನಿಗೆ ಕಾರಣವಾಗಲಿದೆ. ಯಕೃತ್‌ ಸಮಸ್ಯೆಯಿಂದ ಬಳಲುತ್ತಿರುವ ರೋಗಿಯ ಚರ್ಮ ಹಾಗೂ ಉಗುರು ಹಳದಿ ಬಣ್ಣಕ್ಕೆ ಪರಿವರ್ತನೆ, ವಾಕರಿಕೆ, ಖನಿಜಾಂಶದ ಕೊರತೆ, ನಿಶ್ಶಕ್ತಿ, ಆಯಾಸ, ಅಜೀರ್ಣ ಪ್ರಕ್ರಿಯೆಗಳು ಯಕೃತ್‌ ವೈಫ‌ಲ್ಯದ ಲಕ್ಷಣಗಳಾಗಿವೆ ಎಂದು ವೈದ್ಯರು ಹೇಳುತ್ತಾರೆ.

ರಾಜ್ಯದಲ್ಲಿ 2007ರಿಂದ 2022ರ ಮಾರ್ಚ್‌ ವರೆಗೆ ಒಟ್ಟು 543 ಮಂದಿಗೆ ಲಿವರ್‌ ಕಸಿ ಮಾಡಲಾಗಿದೆ. ರಾಜ್ಯ ಆರೋಗ್ಯ ಇಲಾಖೆ ಪ್ರಸ್ತುತ ಅಂಗ ದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದ್ದು, ಜನರು ಮರಣಾನಂತರ ಅಂಗಗಳನ್ನು ದಾನ ಮಾಡಲು ಜನರು ಮುಂದಾಗುತ್ತಿದ್ದಾರೆ. ಇದರಿಂದಾಗಿ ಮುಂದೆ ಮೃತ ವ್ಯಕ್ತಿಯ ಯಕೃತ್‌ ಸೇರಿದಂತೆ ಇತರೆ ಉಪಯುಕ್ತದ ಅಂಗಗಳು ಅರ್ಹ ರೋಗಿಗಳ ಬಾಳಿಗೆ ಬೆಳಕಾಗಲಿದೆ.

ಅತಿಯಾದ ಮದ್ಯ ಸೇವನೆ, ಹೆಪಟೈಟಿಸ್‌-ಬಿ ಮತ್ತು ಸಿ ಯಕೃತ್‌ನ ಕಾಯಿಲೆಗೆ ಸಾಮಾನ್ಯ ಕಾರಣಗಳಾಗಿವೆ. ಜತೆಗೆ ಅಧಿಕ ತೂಕವಿರುವ ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಅಧಿಕ ಕೊಲೆಸ್ಟ್ರಾಲ್‌ನಿಂದ ಬಳಲುತ್ತಿರುವ 40ರಿಂದ 50ವರ್ಷದವಲ್ಲಿ ಹೆಚ್ಚಾಗಿ ಯಕೃತ್‌ ಸಮಸ್ಯೆಗೆ ಒಳಗಾಗುತ್ತಿದ್ದಾರೆ.

ಡಾ. ಅತೀಫ್ ಅಹಮದ್‌

ಗ್ಯಾಸ್ಟ್ರೊ ಎಂಟರಾಲಜಿ ತಜ್ಞ, ಸ್ಪೆಶಲಿಸ್ಟ್‌ ಆಸ್ಪತ್ರೆ ಬೆಂಗಳೂರು.

ಟಾಪ್ ನ್ಯೂಸ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

UV Fusion: ನಿಷ್ಕಲ್ಮಶ ಮನ ನಮ್ಮದಾಗಲಿ

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

2-uv-fusion

UV Fusion: ಆರಾಮಕ್ಕಿರಲಿ  ವಿರಾಮ…

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.