‘ಯೋಗದಿಂದ ಒತ್ತಡರಹಿತ ಜೀವನ’
Team Udayavani, Jun 22, 2018, 10:07 AM IST
ಮಹಾನಗರ: ವಿಶ್ವಕ್ಕೇ ಭಾರತ ನೀಡಿದ ಅತಿದೊಡ್ಡ ಕೊಡುಗೆ ಯೋಗ. ಯೋಗದಿಂದ ಒತ್ತಡರಹಿತ ಜೀವನ ನಡೆಸಲು ಸಾಧ್ಯ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು. ಟಿ. ಖಾದರ್ ಅವರು ಹೇಳಿದರು. ದ.ಕ. ಜಿಲ್ಲಾಡಳಿತ ಮತ್ತು ಆಯುಷ್ ಇಲಾಖೆ ವತಿಯಿಂದ ನಗರದ ಮಂಗಳಾ ಸ್ಟೇಡಿಯಂನ ಯು. ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅವರು ಗುರುವಾರ ಉದ್ಘಾಟಿಸಿದರು.
ಆಯುಷ್ಯ ವೃದ್ಧಿ
ವಿಶ್ವಮಾನ್ಯತೆ ಪಡೆದಿರುವ ಯೋಗವನ್ನು ಅನೇಕ ರಾಷ್ಟ್ರಗಳು ಒಪ್ಪಿಕೊಂಡು ಪಾಲಿಸುತ್ತಿವೆ. ಆರೋಗ್ಯ ವರ್ಧನೆಯೊಂದಿಗೆ ಒತ್ತಡ ನಿವಾರಣೆ, ಮನೋನಿಗ್ರಹಕ್ಕೂ ಯೋಗ ಪೂರಕ. ಪ್ರಾಣಯಾಮ, ದೀರ್ಘ ಉಸಿರಾಟದಿಂದ ಆಯುಷ್ಯ ವೃದ್ಧಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಆರ್. ಪಿ.ನಾಯ್ಕ, ದ.ಕ. ಜಿ. ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸ್ಥಾಯೀ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಮಂಗಳೂರು ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು, ಜಿ.ಪಂ. ಸಿಇಒ ಡಾ| ಎಂ.ಆರ್. ರವಿ, ಅಪರ ಜಿಲ್ಲಾಧಿಕಾರಿ ವೈಶಾಲಿ, ವೆನ್ಲಾಕ್ ಆಸ್ಪತ್ರೆ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿ ಎಚ್.ಆರ್., ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿ’ಸೋಜಾ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ| ಮಹಮ್ಮದ್ ಇಕ್ಬಾಲ್ ಸ್ವಾಗತಿಸಿದರು. ನಿವೃತ್ತ ಅಧಿಕಾರಿ ಡಾ| ದೇವದಾಸ್ ಪುತ್ರನ್ ವಂದಿಸಿದರು. ಡಾ| ಶೋಭಾರಾಣಿ ನಿರೂಪಿಸಿದರು. ಬಳಿಕ ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ ಅವರ ನೇತೃತ್ವದಲ್ಲಿ ಯೋಗ ಪ್ರಾತ್ಯಕ್ಷಿಕೆ ನಡೆಯಿತು.
ಏಕಾಗ್ರತೆಗೆ ಯೋಗ ಸಹಕಾರಿ
ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ಮನಸ್ಸಿನ ಏಕಾಗ್ರತೆಗೆ ಯೋಗ ಸಹಕಾರಿಯಾಗುತ್ತದೆ. ಯೋಗಕ್ಕೆ ಜಾತಿ, ಧರ್ಮದ ಹಂಗಿಲ್ಲ. ವ್ಯಕ್ತಿತ್ವ ವಿಕಸನಕ್ಕೆ ಯೋಗ ಪೂರಕ ಎಂದರು. ಯೋಗ ಪ್ರಾತ್ಯಕ್ಷಿಕೆಯ ಕ್ಯಾಲೆಂಡರ್ನ್ನು ಬಿಡುಗಡೆಗೊಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ