ತ್ರಿವಿಧ ದಾಸೋಹಿಗೆ ಬರಹ, ಪ್ರವಚನಗಳಿಂದಲೇ ನಮನ


Team Udayavani, Oct 13, 2019, 3:06 AM IST

trividha

ಬೆಂಗಳೂರು: ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಹಾಗೂ ಸಿದ್ಧಗಂಗಾ ಮಠದ ಕಾರ್ಯಗಳ ಕುರಿತು ಬರಹ ಮತ್ತು ಪ್ರವಚನಗಳಿಂದ ನಾಡಿನಾದ್ಯಂತ ಬೆಳಕು ಚೆಲ್ಲಿದವರಲ್ಲಿ ಪಂಡಿತ ಚನ್ನಪ್ಪ ಎರೇಸೀಮಿ ಇಂದಿಗೂ ಅಗ್ರಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದು ತುಮಕೂರು ಸಿದ್ಧಗಂಗಾ ಮಠದ ಪೀಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ನಡೆದ ಪಂಡಿತ ಚನ್ನಪ್ಪ ಎರೇಸೀಮೆ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಶ್ರೀಗಳು ಮತ್ತು ಚನ್ನಪ್ಪ, ಮಠದ ಕಾರ್ಯ ಚಟುವಟಿಕೆ ಹಾಗೂ ಪ್ರವಚನ ಸೇರಿದಂತೆ ಎಲ್ಲ ಕಾರ್ಯಗಳಲ್ಲಿ ಜತೆಯಾಗಿರುತ್ತಿದ್ದರು. ಶ್ರೀಗಳ ಸುವರ್ಣಮಹೋತ್ಸವಕ್ಕಾಗಿ ಚನ್ನಪ್ಪ ಸಿದ್ಧಪಡಿಸಿದ್ದ “ಸಿದ್ಧಗಂಗಾ ಶ್ರೀ’ ಅಭಿನಂದನೆ ಗ್ರಂಥವೇ ಇಂದಿಗೂ ಶಿವಕುಮಾರ ಶ್ರೀಗಳ ಕುರಿತು ಬರೆಯುವವರು ಹಾಗೂ ಸಂಶೋಧನೆ ವಿದ್ಯಾರ್ಥಿಗಳಿಗೆ ಆಧಾರವಾಗಿದೆ ಎಂದು ಹೇಳಿದರು. ಮಠದ ಕುರಿತು ಬರಹಗಳಿಲ್ಲದ ಸಂದರ್ಭದಲ್ಲಿ ಮಠದ ಪರಂಪರೆ ಕುರಿತು ಬರೆಯುತ್ತಿದ್ದರು. ಕಿರಣ ಎಂಬ ನಿಯತಕಾಲಿಕೆ ಹಾಗೂ ಪ್ರವಚನಗಳ ಮೂಲಕ ಆರೇಳು ದಶಕಗಳ ಹಿಂದೆಯೇ ಮಠದ ಹಾಗೂ ಶಿವಕುಮಾರ ಶ್ರೀಗಳ ಕಾರ್ಯಚಟುವಟಿಕೆ, ದಾಸೋಹಗಳ ಕುರಿತ ಮಾಹಿತಿ ನಾಡಿನೆಲ್ಲೆಡೆ ಪಸರಿಸುವಂತೆ ಮಾಡಿದರು ಎಂದು ಹೇಳಿದರು.

ಕನ್ನಡ ಸಾಹಿತ್ಯ ಲೋಕಕ್ಕೂ ಚನ್ನಪ್ಪರ ಕೊಡುಗೆ ಅಪಾರ. ಉದ್ದಾನೇಶ ಚರಿತೆ, ಬಸವರಾಜ ವಿಜಯಂನಂತಹ ಮಹಾನ್‌ ಕೃತಿಗಳಿಗೆ ವ್ಯಾಖ್ಯಾನ ನೀಡಿದ್ದರು. ಹಳೆಗನ್ನಡದ ಕ್ಲಿಷ್ಟಕರ ಬರಹಗಳನ್ನು ಸಲೀಸು ಮಾಡಿ, ಲಕ್ಷಾಂತರ ಓದುಗರಿಗೆ ಬೆಳಕಾಗಿದ್ದರು. ಚನ್ನಪ್ಪ ಶಿಕ್ಷಕರು. ಅವರ ಶಿಷ್ಯರು ಇಂದಿಗೂ ನಾಡಿನ ವಿವಿಧೆಡೆ ಸಾಹಿತ್ಯ ಹಾಗೂ ಭಾಷೆಯ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು. ಬೇಲಿಮಠ ಶಿವರುದ್ರ ಸ್ವಾಮೀಜಿ ಮಾತನಾಡಿ, ಉಪಾಧ್ಯಾಯ, ವೈದ್ಯ, ವಕೀಲರಿಗೆ ನಿವೃತ್ತಿ ಎಂಬುದೇ ಇಲ್ಲ. ಶ್ರೇಷ್ಠ ಉಪಾಧ್ಯಾಯರಾಗಿದ್ದ ಪಂಡಿತ ಚನ್ನಪ್ಪ ಎರೇಸೀಮೆ ಅವರು ಹಳೆಗನ್ನಡ ಅರಗಿಸಿಕೊಂಡು ಎಲ್ಲರಿಗೂ ಸರಳವಾಗಿ ಉಣಬಡಿಸುತ್ತಿದ್ದಾರೆ. ಷಡಕ್ಷರರ ಕುರಿತ ಸಾಕಷ್ಟು ಪಾಂಡಿತ್ಯ ಹೊಂದಿದ್ದ ಚನ್ನಪ್ಪ, ಕಸಾಪ ಜತೆಗೆ ಷಡಕ್ಷರರ ರಚನೆಗಳನ್ನು ಆಧುನಿಕ ಭಾಷೆಗೆ ಭಾಷಾಂತರಿಸಲು ಮುಂದಾಗಿದ್ದರು ಎಂದು ಹೇಳಿದರು.

ಸಂಶೋಧಕ ಎಂ.ಚಿದಾನಂದಮೂರ್ತಿ ಮಾತನಾಡಿ, ಚನ್ನಪ್ಪನವರು ಸಾಕಷ್ಟು ಜನರಿಗೆ ಮಾರ್ಗದರ್ಶಿ ಹಾಗೂ ನಂದಾ ದೀವಿಗೆಯಂತಿದ್ದರು. ಶಿವಕುಮಾರ ಸ್ವಾಮೀಜಿಯವರ ಆತ್ಮೀಯರಾಗಿ ಬದಕಿದ್ದ, ಅವರ ನೆನಪು ಸುಖದ ಸಮುದ್ರ. ಅವರಲ್ಲಿ ಸಂಶೋಧಕ, ಕವಿ ಸಂಗಮಿಸಿದ್ದು, ವಚನ ಸಾಹಿತ್ಯ ಹಾಗೂ ಹಳೆಗನ್ನಡ ಕುರಿತು ಶ್ರೇಷ್ಠ ಸಂಶೋಧನೆ ನಡೆಸಿ, ಸಾಕಷ್ಟು ಬೆಳಕು ಚೆಲ್ಲಿದ್ದರು. ಅವರ ಕಾಲದಲ್ಲಿ ಪಿಎಚ್‌ಡಿ ಹಾಗೂ ಡಿ.ಲಿಟ್‌ ಪದವಿಗಳು ಇರಲಿಲ್ಲ. ಇಂದು ಅವರು ಬದುಕಿದ್ದರೆ ಅವರಿಗೆ ಹೆಮ್ಮೆಯಿಂದ ನಾಲ್ಕೈದು ವಿಶ್ವವಿದ್ಯಾಲಯಗಳು ಡಿ.ಲಿಟ್‌ ಕೊಡುತ್ತಿದ್ದವು ಎಂದರು.

ಈ ವೇಳೆ “ಪಂಡಿತ ಚನ್ನಪ್ಪ ಎರೇಸೀಮೆ ಪ್ರಶಸ್ತಿ’ಯನ್ನು ಅವರ ಶಿಷ್ಯನಾದ ಕನ್ನಡ ನಿಘಂಟು ಸಂಪಾದಕ ಹೀ.ಚಿ.ಶಾಂತವೀರಯ್ಯ ಅವರಿಗೆ ನೀಡಲಾಯಿತು. ವಸತಿ ಸಚಿವ ವಿ.ಸೋಮಣ್ಣ “ಪಂಡಿತ ಚನ್ನಪ್ಪ ಎರೇಸೀಮೆ ಅವರ ಸಾಹಿತ್ಯ ಸಂಚಯ’ ಬಿಡುಗಡೆಗೊಳಿಸಿದರು. ಜತೆಗೆ ಚನ್ನಪ್ಪ ಎರೇಸೀಮೆ ಅವರ ಆತ್ಮಕಥೆ “ನನ್ನ ಕಥೆ’ ಪರಿಷ್ಕೃತ ಆವೃತ್ತಿ, ಅನುವಾದ “ಬಸವರಾಜ ವಿಜಯ’ ಮರುಮುದ್ರಣ ಹಾಗೂ ಉದ್ದಾನೇಶ ಚರಿತೆ ಕೃತಿಗಳನ್ನು ಬಿಡುಗಡೆಗೊಳಿಸಲಾಯಿತು. ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ವಸತಿ ಸಚಿವ ವಿ.ಸೋಮಣ್ಣ, ಸಾಹಿತಿ ಡಾ.ಗೊ.ರು.ಚನ್ನಬಸಪ್ಪ, ರಾಮನಗರ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯವಿಭವಸ್ವಾಮಿ ಉಪಸ್ಥಿತರಿದ್ದರು.

ಪಂಡಿತ ಚನ್ನಪ್ಪ ಎರೇಸೀಮೆ ಅವರು ನಡೆದು ಬಂದ ದಾರಿ, ಅವರ ಆದರ್ಶಗಳು ಇಂದಿಗೂ ನನಗೆ ಸ್ಫೂರ್ತಿಯಾಗಿವೆ. ಅವರ ಚಿಂತನೆಗಳು, ದೂರದೃಷ್ಟಿ, ಕರ್ನಾಟಕಕ್ಕೆ ಅವರು ನೀಡಿರುವ ಕೊಡುಗೆಯನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು.
-ವಿ.ಸೋಮಣ್ಣ, ವಸತಿ ಸಚಿವ

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.