ಬಂಗಾರಕ್ಕಿಂತ ಬರವಣಿಗೆ ಅಂದರೆ ಪ್ರೀತಿ


Team Udayavani, Jun 3, 2019, 3:06 AM IST

bangara]

ಬೆಂಗಳೂರು: ಶಾನುಭೋಗರು ಬಳಸುವ ಡೆಸ್ಕ್ ಮತ್ತು ಬಿಳಿ ಹಾಳೆ ಮೇಲಿನ ಬರವಣಿಗೆ ನನಗಿಷ್ಟ. ಒಡವೆ, ಬಂಗಾರಕ್ಕಿಂತಲೂ ಬರವಣಿಗೆ ಅಂದರೆ ನನಗೆ ಪ್ರೀತಿ ಎಂದು ಸಾಹಿತಿ ಡಾ.ಸುಧಾ ಮೂರ್ತಿ ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಭಾನುವಾರ ಕರ್ನಾಟಕ ಲೇಖಕಿಯರ ಸಂಘ ನೀಡುವ 2019ನೇ ಸಾಲಿನ “ಅನುಪಮಾ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಸಾಹಿತ್ಯ ಸೇವೆಗಾಗಿ ನನಗೆ ಹಲವು ಕಡೆಗಳಲ್ಲಿ ಸನ್ಮಾನಗಳು ದೊರೆತಿವೆ. ಆದರೆ ಕನ್ನಡಿಗರು ಸನ್ಮಾನಿಸಿದಾಗ ಆಗುವ ಖುಷಿ, ಸಂತೋಷ ಹೇಳಲಾಗದು ಎಂದರು.

ಕನ್ನಡ ಸೇರಿದಂತೆ ದೇಶ-ವಿದೇಶದಾದ್ಯಂತ ನನ್ನ ಪುಸ್ತಕದ ಓದುಗರು ಇದ್ದಾರೆ. ಇಂಗ್ಲಿಷ್‌ನಲ್ಲಿ ನಾನು ಪುಸ್ತಕ ಬರೆದರೆ ಕೇಲವೆ ದಿನಗಳಲ್ಲಿ 13 ಭಾಷೆಗಳಿಗೆ ಭಾಷಾಂತರವಾಗುತ್ತದೆ. ಆದರೆ ತಾಯಿ ಭಾಷೆ ಕನ್ನಡದಲ್ಲಿ ಬರೆದಷ್ಟು ಖುಷಿ, ಇಂಗ್ಲಿಷ್‌ ಬರವಣಿಗೆಯಲ್ಲಿ ಸಿಗುವುದಿಲ್ಲ. ತಾಯಿ ಭಾಷೆ ಹೃದಯದ ಭಾಷೆಯಾಗಿದೆ. ಆಂಗ್ಲ ಭಾಷೆಗಿಂತ ಕನ್ನಡ ಭಾಷೆ ಅಂದರೆ ನನಗೆ ಎಲ್ಲಿಲ್ಲದ ಅಕ್ಕರೆ ಎಂದು ಹೇಳಿದರು.

ಲೇಖಕರಿಗೆ ಲಾಭ-ನಷ್ಟದ ಬಗ್ಗೆ ಅರಿವಿರುವುದಿಲ್ಲ.ಹೃದಯದ ಭಾವನೆ ಮಾತನಾಡಿದಾಗ ಆ ಭಾವನೆಗೆ ನಮಗಿಷ್ಟವಾದ ರೀತಿಯಲ್ಲಿ ಜೀವ ನೀಡಬೇಕು. ಅಂತಹ ಸಾಹಿತ್ಯ ಓದುಗರನ್ನು ಬೇಗ ತಲುಪುತ್ತದೆ. ಕಥೆ, ಕಾದಂಬರಿಯಲ್ಲಿ ಬರುವ ಪಾತ್ರಗಳು ತಮ್ಮ ಪಾತ್ರಗಳೇ ಎಂದು ಕೊಂಡು ಓದುಗರು ಓದಿನಲ್ಲಿ ಮುಳುಗತ್ತಾರೆ ಎಂದರು.

ಶಾಲಾ-ಕಾಲೇಜು ದಿನಗಳಲ್ಲೇ ಅನುಪಮಾ ನಿರಂಜನ ಅವರ ಕಾದಂಬರಿಗಳನ್ನು ಓದುತ್ತಿದ್ದೆ. ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದ್ದ ಅವರ ಕಾದಂಬರಿಗಳು ನನ್ನ ಮೇಲೆ ಬಹಳಷ್ಟು ಪ್ರಭಾವ ಬೀರಿವೆ. ನನ್ನ ನೆಚ್ಚಿನ ಕಾದಂಬರಿಗಾರ್ತಿ ಹೆಸರಿನಲ್ಲಿ ದೊರೆತಿರುವ ಪ್ರಶಸ್ತಿ, ಎಲ್ಲಾ ಪ್ರಶಸ್ತಿಗಳಿಗಿಂತಲೂ ದೊಡ್ಡದು ಎಂದರು.

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮನು ಬಳಿಗಾರ್‌ ಮಾತನಾಡಿ, ಸುಧಾಮೂರ್ತಿ ಅವರನ್ನು ಹಲವು ವರ್ಷಗಳಿಂದ ಬಲ್ಲೆ.ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿದರೂ ಅವರಲ್ಲಿರುವ ಸರಳತನ ನಮಗೆ ಮಾದರಿ ಎಂದರು.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ್‌ ಮಾತನಾಡಿ, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ಸುಧಾಮೂರ್ತಿ ಅವರನ್ನು ಗೌರವಿಸುವುದೇ ಒಂದು ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದರು. ಕವಯಿತ್ರಿ ಡಾ.ಟಿ.ಸಿ.ಪೂರ್ಣಿಮಾ ಇದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.