ಯಡಿಯೂರಪ್ಪಗೆ ಮತ್ತೆ “ಭೂ’ ಕಂಟಕ


Team Udayavani, Aug 19, 2017, 6:35 AM IST

BSY-19-2017.jpg

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನಲ್ಲಿ ಡಾ. ಶಿವರಾಮ ಕಾರಂತ ಬಡಾವಣೆ ನಿರ್ಮಾಣದ ವೇಳೆ ಭೂ ಮಾಲೀಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಡಿನೋಟಿಫಿಕೇಶನ್‌ ಮಾಡಿರುವ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧಎರಡು ಪ್ರತ್ಯೇಕ ಎಫ್ಐಆರ್‌ ದಾಖಲಿಸಿಕೊಂಡಿರುವ ಭ್ರಷ್ಟಾಚಾರ ನಿಗ್ರಹ ದಳ, ಈ ಸಂಬಂಧ ಶನಿವಾರ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಹಾಗೂ ಮತ್ತಿತರರಿಗೆ ನೋಟಿಸ್‌ ಜಾರಿಗೊಳಿಸಿದೆ.

ಎಸಿಬಿ ನೋಟಿಸ್‌ ಜಾರಿ ಹಿನ್ನೆಲೆಯಲ್ಲಿ ಶನಿವಾರ ಪ್ರಕರಣಗಳ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಖುದ್ದು ಯಡಿಯೂರಪ್ಪ ಹಾಗೂ ಇತರೆ ಆರೋಪಿತ ಅಧಿಕಾರಿಗಳು ಹಾಜರಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಎರಡನೇ ಎಫ್ಐಆರ್‌ನಲ್ಲೇನಿದೆ?: ಡಾ.ಶಿವರಾಮ ಕಾರಂತ ಬಡಾವಣೆಗೆ ಸ್ವಾಧೀನ ಪಡಿಸಿಕೊಂಡಿದ್ದ ಯಶವಂತಪುರ ಹೋಬಳಿ ಸೋಮಶೆಟ್ಟಿ ಗ್ರಾಮದ ಸರ್ವೇ ನಂಬರ್‌ 22/2ರಲ್ಲಿರುವ 18ಗುಂಟೆ ಹಾಗೂ ಸರ್ವೇ ನಂಬರ್‌ 24/ 1 ಎಕರೆ 8 ಗುಂಟೆ ಜಮೀನನ್ನು ಭೂ ಮಾಲೀಕರ ಕೋರಿಕೆಯಂತೆ, ಡಿನೋಟಿಫೈ ಸಮಿತಿಯ ಅಭಿಪ್ರಾಯವನ್ನೂ ಪಡೆಯದೆ ಈ ಭೂಮಿಯನ್ನು ಭೂ ಸ್ವಾಧೀನ ಪಡಿಸಿಕೊಳ್ಳುವ ಕ್ರಮದಿಂದ ಹಿಂದೆ ಸರಿದು, ಅಂದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ, ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಭೂ ಮಾಲೀಕರಿಗೆ ಅನುಕೂಲವಾಗುವಂತೆ ಡಿನೋಟಿಫಿಕೇಶನ್‌ ಮಾಡಿ ಕೊಟ್ಟು ಬಿಡಿಎಗೆ ನಷ್ಟವುಂಟು ಮಾಡಿದ್ದಾರೆಂಬ ಆರೋಪದ ಅನ್ವಯ ಎಫ್ಐಆರ್‌ ದಾಖಲಿಸಕೊಳ್ಳಲಾಗಿದೆ.

ಈ ಅಕ್ರಮಕ್ಕೆ ಸಹಕರಿಸಿದ ಬಿಡಿಎ ಅಂದಿನ ವಿಶೇಷ ಭೂ ಸ್ವಾಧೀನಾಧಿಕಾರಿ ಎಚ್‌.ಬಸವರಾಜೇಂದ್ರ, ಭೂ ಸ್ವಾಧೀನ ಉಪ ಆಯುಕ್ತರಾಗಿದ್ದ ಗೌರಿ ಶಂಕರ ಎಸ್‌.ಎನ್‌., ನಗರಾಭಿವೃದ್ಧಿ ಇಲಾಖೆಯ ಅಂದಿನ ಅಧೀನ ಕಾರ್ಯದರ್ಶಿ ಪ್ರೇಮಚಂದ್ರ, ಅಂದಿನ ಉಪಕಾರ್ಯದರ್ಶಿ ಬಸವರಾಜು, ನಗರಾಭಿವೃದ್ಧಿ ಇಲಾಖೆಯ ಅಪರ ಕಾರ್ಯದರ್ಶಿ ಸುಭೀರ್‌ ಹರಿಸಿಂಗ್‌ ಸೇರಿ ಏಳು ಮಂದಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ತಡೆ ಕಾಯ್ದೆ ಹಾಗೂ ಐಪಿಸಿಯ ವಿವಿಧ ಕಲಂಗಳ ಅಡಿಯಲ್ಲಿ ಎಫ್ಐಆರ್‌ ದಾಖಲಿಸಿಕೊಂಡು ತನಿಖೆ ಮುಂದುವರಿಸಿದೆ.

18 ದೂರುಗಳ ಪರಿಶೀಲನೆ ಬಿ.ಎಸ್‌.ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಹೆಸರಘಟ್ಟ – ಯಲಹಂಕ ವ್ಯಾಪ್ತಿಯಲ್ಲಿ ಶಿವರಾಮ
ಕಾರಂತ ಬಡಾವಣೆ ನಿರ್ಮಾಣಕ್ಕೆ ಬಿಡಿಎ 3546 ಎಕರೆ ಜಮೀನು ಸ್ವಾಧೀನ ಪಡಿಸಿಕೊಂಡಿತ್ತು. ಈ ಪೈಕಿ ಯಡಿಯೂರಪ್ಪ ಕಾನೂನು ಬಾಹಿರವಾಗಿ 257. 25 ಗುಂಟೆ ಎಕರೆ ಡಿನೋಟಿμಕೇಶನ್‌ ಮಾಡಿದ್ದಾರೆಂದು ಡಾ. ಡಿ.ಅಯ್ಯಪ್ಪ ಎಂಬುವವರು ಆರೋಪಿಸಿದ್ದರು. ಕಾನೂನು ಬಾಹಿರವಾಗಿ ಡಿನೋಟಿಫಿಕೇಶನ್‌ ಮಾಡಿರುವ ಸಂಬಂಧ ಒಟ್ಟು 20 ದೂರುಗಳು ದಾಖಲಾಗಿದ್ದು, ಈ ಪೈಕಿ ಎರಡಲ್ಲಿ ಎಫ್ಐಆರ್‌ ದಾಖಲಿಸಿಕೊಳ್ಳಲಾಗಿದೆ. ಉಳಿದ 18 ದೂರುಗಳನ್ನೂ ಕೂಲಂಕಶವಾಗಿ ಪರಿಶೀಲಿಸುತ್ತಿದ್ದು ಬಿಎಸ್‌ವೈ ಅಧಿಕಾರ ದುರ್ಬಳಕೆ ಹಾಗೂ ನಿಯಬಾಹಿರವಾಗಿ ಡಿನೋಟಿಫಿಕೇಶನ್‌ ಮಾಡಿರುವ ಬಗ್ಗೆ ಲೋಪ ಕಂಡು ಬಂದರೆ ಎಫ್ ಐಆರ್‌ಗಳನ್ನು ದಾಖಲಿಸಿಕೊಳ್ಳಲಾಗುವುದು ಎಂದು ಎಸಿಬಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.