ನಾಳೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣವಚನ


Team Udayavani, May 16, 2018, 8:29 PM IST

bsy-5.jpg

ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಗುರುವಾರ ಬೆಳಿಗ್ಗೆ 9.00ಕ್ಕೆ ಸರಿಯಾಗಿ ಬಿ.ಎಸ್‌. ಯಡಿಯೂರಪ್ಪ ಆವರು ಭಾರತೀಯ ಜನತಾ ಪಕ್ಷದಿಂದ ಕರ್ನಾಟಕದ 23ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ಬಾರಿಯ ವಿಧಾನಸಭಾ ಚುನಾವಣಾ ಫ‌ಲಿತಾಂಶದಲ್ಲಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಆತೀದೊಡ್ಡ ಪಕ್ಷವಾಗಿ ಮೂಡಿಬಂದಿರುವ ಭಾರತೀಯ ಜನತಾ ಪಕ್ಷವನ್ನು ಸರಕಾರ ರಚಿಸುವಂತೆ ಮಾನ್ಯ ರಾಜ್ಯಪಾಲರು ಆಹ್ವಾನ ನೀಡಿರುವ ವಿಷಯವನ್ನು ಅವರ ಅದೇಶ ಪ್ರತಿಯೊಂದಿಗೆ ಕರ್ನಾಟಕದಲ್ಲಿ ಬಿ.ಜೆ.ಪಿ. ಉಸ್ತುವಾರಿಯಾಗಿರುವ ಮುರಳೀಧರ ರಾವ್‌ ಅವರು ಸುದ್ದಿಗೋಷ್ಠಿಯಲ್ಲಿ ಖಚಿತಪಡಿಸಿದರು. ಇನ್ನು ಬಿ.ಜೆ.ಪಿ.ಗೆ ಅಗತ್ಯವಿರುವ ಬಹುಮತವನ್ನು ಸಾಬೀತುಪಡಿಸಲು 15 ದಿನಗಳ ಕಾಲಾವಕಾಶವನ್ನೂ ಸಹ ರಾಜ್ಯಪಾಲರು ತನ್ನ ಆದೇಶದಲ್ಲಿ ನೀಡಿದ್ದಾರೆ. ಗುರುವಾರದಂದು ಯಡಿಯೂರಪ್ಪ ಅವರು ಮಾತ್ರವೇ ಪ್ರಮಾಣವಚನ ಸ್ವೀಕರಿಸಲಿದ್ದು, ಸದನದಲ್ಲಿ ಬಹುಮತವನ್ನು ಸಾಬೀತುಗೊಳಿಸಿದ ಬಳಿವಷ್ಟೇ ಪೂರ್ಣಪ್ರಮಾಣದ ಸಂಪುಟ ವಿಸ್ತರಣೆಯನ್ನು ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುರಳೀಧರ ರಾವ್‌ ಅವರು ತಿಳಿಸಿದರು.


ಈ ಕುರಿತಾಗಿ ರಾಜ್ಯಪಾಲರ ಆದೇಶವನ್ನು ಅನುಸರಿಸಿ ಗುಪ್ತಚರ ಇಲಾಖೆಯ ಪೊಲೀಸ್‌ ಮಹಾನಿರ್ದೇಶಕರು ಬೆಂಗಳೂರು ನಗರ, ಮೈಸೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡ ಮತ್ತು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ತುರ್ತು ಪತ್ರವೊಂದನ್ನು ಬರೆದಿದ್ದು, ಅದರಂತೆ, ಬಾರತೀಯ ಜನತಾ ಪಕ್ಷಕ್ಕೆ ನೂತನ ಸರಕಾರವನ್ನು ರಚಿಸಲು ಆಹ್ವಾನವನ್ನು ನೀಡಿರುವ ಹಿನ್ನಲೆಯಲ್ಲಿ, ಗುರುವಾರ ಬೆಳಿಗ್ಗೆ ಬಿ.ಎಸ್‌. ಯಡಿಯೂರಪ್ಪ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮ ಆಯೋಜನೆಗೊಂಡಿರುವುದರಿಂದ ಪ್ರಮಾಣವಚನ ಸ್ವೀಕರಿಸುವ ಸ್ಥಳದಲ್ಲಿ ಮತ್ತು ವಿಧಾನಸೌಧ ಹಾಗೂ ರಾಜ್ಯಾದ್ಯಂತ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳುವಂತೆ ಈ ಪತ್ರದಲ್ಲಿ ಸೂಚಿಸಲಾಗಿದೆ.

ಟ್ವೀಟ್ ಮಾಡಿದರು ಬಳಿಕ ತೆಗೆದು ಹಾಕಿದರು

ಪ್ರಾರಂಭದಲ್ಲಿ ಈ ಸಂಬಂಧ ರಾಜ್ಯಪಾಲರ ಆದೇಶದ ಪ್ರತಿ ಹೊರಬಿದ್ದಿಲ್ಲವಾದರೂ, ಬಿಜೆಪಿ ನಾಯಕ ಸುರೇಶ್‌ ಕುಮಾರ್‌ ಅವರು ಈ ಕುರಿತಾಗಿ ತನ್ನ ಟ್ವಿಟರ್‌ ಆಕೌಂಟ್‌ ನಲ್ಲಿ ಪೋಸ್ಟ್‌ ಹಾಕಿದ್ದು, ಇದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಸುರೇಶ್‌ ಕುಮಾರ್‌ ಅವರು ತಮ್ಮ ಈ ಟ್ವೀಟ್‌ ಅನ್ನು ತೆಗೆದು ಹಾಕಿದ್ದಾರೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.