ಪದವಿ ಕಾಲೇಜುಗಳಲ್ಲಿ ಯೋಗ ಕಡ್ಡಾಯ


Team Udayavani, Aug 3, 2018, 11:51 AM IST

padavi.jpg

ಬೆಂಗಳೂರು: ರಾಜ್ಯದ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣದಲ್ಲಿ ಪ್ರಸಕ್ತ ವರ್ಷದಿಂದ ಯೋಗ ಕೋರ್ಸ್‌, ತರಗತಿಗಳನ್ನು ಕಡ್ಡಾಯವಾಗಿ ಆರಂಭಿಸಬೇಕೆಂದು ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

ರಾಜ್ಯದ ಎಲ್ಲ ವಿವಿಗಳ ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ವಿಭಾಗದ ಅಧಿಕಾರಿಗಳೊಂದಿಗೆ ಬುಧವಾರ ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್‌ಸಿಸಿ ಮಾದರಿಯಲ್ಲಿ ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಕಾಲೇಜು ಹಾಗೂ ವಿವಿಗಳ ವ್ಯಾಪ್ತಿಯ ಪದವಿ, ಸ್ನಾತಕೋತ್ತರ ಕಾಲೇಜುಗಳಲ್ಲಿ ಯೋಗ ತರಗತಿ, ಕೋರ್ಸ್‌ಗಳನ್ನು ಆರಂಭಿಸಬೇಕೆಂದು ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.

ಕೆಲ ಕಾಲೇಜುಗಳಲ್ಲಿ ಈಗಾಗಲೇ ಯೋಗ ಕೋರ್ಸ್‌ಗಳು ನಡೆಯುತ್ತಿವೆ. ಕೆಲವೆಡೆ ಡಿಪ್ಲೊಮಾ ಕೋರ್ಸ್‌ ಕೂಡ ಶುರುವಾಗಿವೆ. ಹೊಸ ಕೋರ್ಸ್‌ನಂತೆ ಯೋಗ ಕೋರ್ಸ್‌, ತರಗತಿಯನ್ನೂ ಈ ವರ್ಷ ಕಾಲೇಜುಗಳಲ್ಲಿ ಆರಂಭಿಸುವಂತೆ ಸೂಚಿಸಲಾಗಿದೆ. ಕೋರ್ಸ್‌, ತರಗತಿಗಳು ಯಾವ ರೀತಿ ನಡೆಯಬೇಕು ಎಂಬುದನ್ನು ನಿರ್ಧರಿಸಲು ಸಮಿತಿ ರಚಿಸಲಾಗಿದೆ ಎಂದರು.

ಈ ವರ್ಷ ರಾಜ್ಯದ ಪ್ರತಿ ವಿಶ್ವವಿದ್ಯಾಲಯವು 5 ಹಳ್ಳಿಗಳನ್ನು ದತ್ತು ಪಡೆದು ಪರಿಸರ, ಸ್ವತ್ಛತೆ, ಶಿಕ್ಷಣದ ಜತೆಗೆ ಮಹಿಳೆಯರು, ಯುವಕರು, ವಿದ್ಯಾವಂತರು, ಹಿರಿಯರನ್ನು ಒಟ್ಟುಗೂಡಿಸಿ ಅವರು ನಿರ್ವಹಿಸುತ್ತಿರುವ ಉದ್ಯೋಗಳನ್ನು ಪ್ರೋತ್ಸಾಹಿಸುವಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಸರ್ಕಾರಿ ಇಲಾಖೆಗಳನ್ನು ಇದರೊಂದಿಗೆ ಜೋಡಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಮಂಗಳೂರು ವಿವಿಯಲ್ಲಿ ಸಂಶೋಧನಾ ಅಭ್ಯರ್ಥಿಗಳ ಸಂಖ್ಯೆ 330ರಿಂದ 1,115ಕ್ಕೆ ಏರಿಕೆಯಾಗಿದೆ. ವಿವಿಯ ಸಂಶೋಧನಾ ಕೇಂದ್ರಗಳಲ್ಲಿ ಈವರೆಗಿನ ಸಂಶೋಧನಾ ಪ್ರಬಂಧಗಳ ದೊಡ್ಡ ಸಂಗ್ರಹವಿದೆ ಎಂದು ಹೇಳಿದರು. ರಾಜ್ಯದ ಎಲ್ಲ ವಿವಿ ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ವಿಭಾಗದ ಅಧಿಕಾರಿಗಳೊಂದಿಗೆ ಎರಡು ದಿನ ಸಭೆ ನಡೆಸಲಾಗಿದ್ದು, ಅಗತ್ಯವಿರುವ ಸೇವೆಗಳ ಬಗ್ಗೆಯೂ ಮಾಹಿತಿ ಪಡೆಯಲಾಗಿದೆ ಎಂದರು.

15 ದಿನದಲ್ಲಿ ಮಾಹಿತಿ ನೀಡಲು ಸೂಚನೆ: ರಾಜ್ಯದ ಎಲ್ಲ ವಿವಿಗಳಲ್ಲಿನ ಸಮಸ್ಯೆಗಳು, ಅಗತ್ಯವಾಗಿ ಬೇಕಿರುವ ಸೌಲಭ್ಯ, ಅನುದಾನದ ಬಗ್ಗೆ ಆ. 15ರೊಳಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ವಿವಿಗಳಲ್ಲಿ ಬಯೋಮೆಟ್ರಿಕ್‌ ವ್ಯವಸ್ಥೆಯಿದೆಯೇ, ಪ್ರಯೋಗಾಲಯ, ಅಗತ್ಯ ಕೊಠಡಿ, ಕಟ್ಟಡಗಳಿವೆಯೇ ಎಂಬ ಬಗ್ಗೆ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದು ಹೇಳಿದರು.

5,000 ಪ್ರಾಧ್ಯಾಪಕರ ನೇಮಕ: ಸುಮಾರು 5,000 ಪ್ರಾಧ್ಯಾಪಕರ ನೇಮಕಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ಹಣಕಾಸು ಇಲಾಖೆಯೂ ಅನುಮೋದನೆ ನೀಡಿದೆ. ನೇಮಕ ಪ್ರಕ್ರಿಯೆ ಮುಗಿದ ಕೂಡಲೇ ಸೂಕ್ತ ತರಬೇತಿ ಕೊಡಿಸಿ ಸೇವೆಗೆ ಬಳಸಿಕೊಳ್ಳಲಾಗುವುದು.

ಕನ್ನಡ ವಿಷಯ ತಜ್ಞರು ಕೆಲವೆಡೆ ವಿಜ್ಞಾನ ಕಲಿಸುತ್ತಿದ್ದಾರೆ. ವಿಜ್ಞಾನ ವಿಷಯ ತಜ್ಞರು ಕೆಲ ಕಾಲೇಜುಗಳಲ್ಲಿ ಭಾಷಾ ವಿಷಯ ಬೋಧಿಸುತ್ತಿದ್ದಾರೆ. ಇದು ನಿಲ್ಲಬೇಕು. ಸಂಬಂಧಪಟ್ಟ ವಿಷಯ ತಜ್ಞರು ಆಯಾ ವಿಷಯದ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವಂತೆ ಸೂಚಿಸಲಾಗಿದೆ ಎಂದು ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.