ಜ. 7ರಂದು ಯೋಗಿ ಆದಿತ್ಯನಾಥ್ ಬೆಂಗಳೂರಿಗೆ?
Team Udayavani, Jan 4, 2018, 6:20 AM IST
ಬೆಂಗಳೂರು: ಬಿಜೆಪಿ ನವಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ಅಂಗವಾಗಿ ಜ. 7ರಂದು ಬೆಂಗಳೂರಿನಲ್ಲಿ ಮೂರನೇ ಸಮಾವೇಶ ನಡೆಯಲಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಮಾವೇಶಕ್ಕೆ ಆಗಮಿಸುವ ಸಾಧ್ಯತೆ ಇದೆ.
ವಿಜಯನಗರ ಎಂ.ಸಿ.ಲೇಔಟ್ನ ಬಿಜಿಎಸ್ ಆಟದ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಇದಕ್ಕೆ ಯೋಗಿ ಆದಿತ್ಯನಾಥ್ ಅವರನ್ನು ಆಹ್ವಾನಿಸಲಾಗಿದೆ. ಅವರು ಆಗಮಿಸುವುದು ಬಹುತೇಕ ಖಚಿತವಾಗಿದ್ದು, ಗುರುವಾರ ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ.
ಈಗಾಗಲೇ ಬಿಜಿಎಸ್ ಆಟದ ಮೈದಾನದಲ್ಲಿ ಸಮಾವೇಶಕ್ಕೆ ಬೇಕಾದ ಸಿದ್ಧತೆಗಳು ಆರಂಭವಾಗಿದ್ದು, ಗುರುವಾರ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿ.ಸೋಮಣ್ಣ ಸಿದ್ಧತೆಗಳ ಪರಿಶೀಲನೆ ಮಾಡಲಿದ್ದಾರೆ.
ಪರಿವರ್ತನಾ ಯಾತ್ರೆ ಅಂಗವಾಗಿ ಬೆಂಗಳೂರಿನಲ್ಲಿ ನಾಲ್ಕು ಸಮಾವೇಶಗಳನ್ನು ನಡೆಸಲು ಮೊದಲು ತೀರ್ಮಾನಿಸಲಾಗಿತ್ತು. ನಂತರದಲ್ಲಿ ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಒಂದರಂತೆ ಮೂರು ಸಮಾವೇಶಗಳನ್ನು ನಡೆಸಬೇಕು ಎಂದು ನಿರ್ಧರಿಸಲಾಯಿತು. ಆದರೆ, ಮೊದಲ ಎರಡು ಸಮಾವೇಶಕ್ಕೆ ಹೆಚ್ಚಿನ ಜನ ಬೆಂಬಲ ವ್ಯಕ್ತವಾಗಿರುವುದರಿಂದ ಬೆಂಗಳೂರಿನಲ್ಲಿ ನಾಲ್ಕು ಸಮಾವೇಶ ನಡೆಸಬೇಕು ಎಂಬ ಬೇಡಿಕೆ ಬಂದಿದ್ದು, ಡಿ. 9ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೆಂಗಳೂರಿಗೆ ಬರುವ ಸಂದರ್ಭದಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…