ಬಾಲಕ ಮೋಸ ಮಾಡಿದಕಾರಣಕ್ಕೆ ಯುವತಿ ಆತ್ಮಹತ್ಯೆ


Team Udayavani, Jun 28, 2018, 3:28 PM IST

suicide10.jpg

ಬೆಂಗಳೂರು: ತನಗಿಂತ ಚಿಕ್ಕ ವಯಸ್ಸಿನ ಅಪ್ರಾಪ್ತನನ್ನು ಪ್ರೀತಿಸಿ, ಆತ ಮೋಸ ಮಾಡಿದ ಎಂಬ ಕಾರಣಕ್ಕೆ ಬೇಸರಗೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಶವಂತ ಪುರ
ಸುಬೇದಾರ್‌ ಪಾಳ್ಯದ ತ್ರೀವೇಣಿ ರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಸುಬೇದಾರ್‌ ಪಾಳ್ಯ ನಿವಾಸಿ ಅಮೃತಾ (19) (ಹೆಸರು ಬದಲಿಸಲಾಗಿದೆ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈ ಸಂಬಂಧ 17 ವರ್ಷದ ಬಾಲಕನನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಬಾಲಕ ಮತ್ತು ಅಮೃತಾ ಕಳೆದೊಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು. ಇದರಿಂದ ಬೇಸತ್ತ ಅಮೃತಾ, ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆ ಮಹ ಡಿಗೆ ಹೋಗಿ ವಿಷ
ಸೇವಿಸಿದ್ದಾಳೆ. ಮಹಡಿ ಮೇಲೆ ಅರೆಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದ ಪುತ್ರಿಯನ್ನು ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫ‌ಲಿಸದೆ ಬುಧವಾರ ಬೆಳಗ್ಗೆ 5 ಗಂಟೆಗೆ ಅಮೃತಾ ಮೃತಪಟ್ಟಿ ರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಗರದ ಹೊರವಲಯದ ನೆಲಗೆದರನ ಹಳ್ಳಿ ಮೂಲದ ಬಾಲಕ, ಮೊದಲ ವರ್ಷದ ಡಿಪ್ಲೊಮಾ ಓದುತ್ತಿದ್ದಾನೆ. ಒಂದು ವರ್ಷದ ಹಿಂದೆ ಆತನಿಗೆ ಅಮೃತಾಳ ಪರಿಚಯ ವಾಗಿದ್ದು, ಪರಿಚಯ ಪ್ರೀತಿಗೆ ತಿರುಗಿತ್ತು. ಈ ವಿಚಾರ ಗೊತ್ತಾದ ಇಬ್ಬರ ಪೋಷಕರೂ ಮಕ್ಕಳನ್ನು ಕರೆಸಿ ವಿದ್ಯಾಭ್ಯಾಸ ಮುಗಿದ ಬಳಿಕ ಮದುವೆ ಮಾಡಿಸುವುದಾಗಿ ಹೇಳಿದ್ದರು. 

ಕಳೆದ ಶನಿವಾರ ಅಮೃತಾಳನ್ನು ತನ್ನ ಸಹೋದರಿ ಮನೆಗೆ ಕರೆದೊಯ್ದಿದ್ದ ಬಾಲಕ, ಆಕೆಯ ಮೈ-ಕೈ ಮುಟ್ಟಿದ್ದ. ಇದನ್ನು ವಿರೋಧಿಸಿದ ಅಮೃತಾ ತಕ್ಷಣ ಮನೆಗೆ ವಾಪಸಾಗಿದ್ದಳು. ಮಾರನೇ ದಿನ ಅಮೃತಾ, ಬಾಲಕನಿಗೆ ಕರೆ ಮಾಡಿದಾಗ ಆತ ಪ್ರತಿಕ್ರಿಯಿಸದ ಕಾರಣ ಆಕೆ ಬೇಸರಗೊಂಡಿದ್ದಳು ಎನ್ನಲಾಗಿದೆ.

ಈ ನಡುವೆ ಮಂಗಳವಾರ ಬೆಳಗ್ಗೆ ಅಮೃತಾಗೆ ಕರೆ ಮಾಡಿದ ಬಾಲಕ, “ನೀನು ನನಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ನಾನು ಹೇಳಿದಂತೆ ಕೇಳುತ್ತಿಲ್ಲ. ನಿನ್ನನ್ನು ಮದುವೆ ಯಾಗಲು ಸಾಧ್ಯವಿಲ್ಲ. ನೀನು ನನ್ನೊಂದಿಗೆ ಮಾತನಾಡಬೇಡ. ನಾನು ಬೇರೆ ಯುವತಿ ಜತೆ ವಿವಾಹವಾಗುತ್ತೇನೆ’ ಎಂದು ಹೇಳಿದ್ದಲ್ಲದೆ, ಅವಾಚ್ಯವಾಗಿ ನಿಂದಿಸಿದ್ದಾನೆ. ಇದ ರಿಂದ ಮನನೊಂದ ಅಮೃತಾ ಗಿಡಕ್ಕೆ ಸಿಂಪಡಿ ಸುವ ಔಷಧ ಕುಡಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾಳೆ. ಅಮೃತಾ ಪೋಷಕರು ನೀಡಿದ ದೂರು ಆಧರಿಸಿ ಬಾಲಕನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಹಲ್ಲೆಗೆ ಯತ್ನ: ಪ್ರಕರಣ ಸಂಬಂಧ ಬಾಲಕ ನನ್ನು ಠಾಣೆಗೆ ಕರೆತರುವ ವೇಳೆ ಪೊಲೀಸ್‌ ಠಾಣೆ ಎದುರು ಜಮಾಯಿಸಿದ್ದ ಅಮೃತಾ ಸಂಬಂಧಿಕರು ಆತನ ಮೇಲೆ ಹಲ್ಲೆಗೆ ಮುಂದಾದರು. ಮತ್ತೂಂದೆಡೆ ಬಾಲಕನ ಪೋಷಕರು ಮತ್ತು ಸಂಬಂಧಿಕರು ಕೂಡ ಸೇರಿದರು. ಪೊಲೀಸರು ಎರಡೂ ಕಡೆಯವರನ್ನು ಸಮಾಧಾನಪಡಿಸಿ ವಾತಾವರಣ ತಿಳಿಗೊಳಿಸಿದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.