ಪತ್ನಿ ತೊರೆದು ಪ್ರೇಯಸಿ ಜತೆಗಿದ್ದ ಯುವಕ ನೇಣಿಗೆ ಶರಣು
Team Udayavani, Feb 20, 2023, 1:10 PM IST
ಬೆಂಗಳೂರು: ಪತ್ನಿಯನ್ನು ತೊರೆದು ಪ್ರಿಯತಮೆ ಜತೆಗೆ ಬಂದ ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ಜ್ಞಾನಭಾರತಿ ಠಾಣಾ ವ್ಯಾಪ್ತಿಯ ವಿಶ್ವೇಶ್ವರ ಲೇಔಟ್ ನಲ್ಲಿ ನಡೆದಿದೆ.
ಕೊಮ್ಮಘಟ್ಟದ ವೀರಭದ್ರ ನಗರದ ನಾಗೇಶ್ ಆತ್ಮಹತ್ಯೆ ಮಾಡಿಕೊಂಡ ಯುವಕ. 6 ವರ್ಷದ ಹಿಂದೆ ಮಧುಶ್ರೀ ಅವರನ್ನು ನಾಗೇಶ್ ವಿವಾಹವಾಗಿದ್ದ. ಕೊಮ್ಮಘಟ್ಟದ ವೀರಭದ್ರ ನಗರದಲ್ಲಿ ದಂಪತಿ ವಾಸಿಸುತ್ತಿದ್ದರು. ಈ ವೇಳೆ ಸಹನಾ ಎಂಬವರ ಪರಿಚಯವಾಗಿತ್ತು.ಪರಿಚಯ ಪ್ರೀತಿಗೆ ತಿರುಗಿತ್ತು. ಈ ವಿಚಾರ ತಿಳಿದ ಪತ್ನಿ ಮಧುಶ್ರೀ ಪತಿಯ ಜತೆಗೆ ಜಗಳ ಮಾಡಿದ್ದಳು.
ಇದರಿಂದ ಬೇಸತ್ತು ಹೆಂಡತಿ ಬಿಟ್ಟು ಸಹನಾಳ ಜತೆ ಫೆ.10ರಂದು ನಾಗೇಶ್ ಮನೆ ಬಿಟ್ಟು ಪರಾರಿಯಾಗಿದ್ದ. ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿ ಜ್ಞಾನಭಾರತಿ ಠಾಣಾ ವ್ಯಾಪ್ತಿಯ ವಿಶ್ವೇಶ್ವರ ಲೇಔಟ್ನಲ್ಲಿ ವಾಸಿಸುತ್ತಿದ್ದ. ಭಾನುವಾರ ಬೆಳಗ್ಗೆ ವಿಶ್ವೇಶ್ವರ ಲೇಔಟ್ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ