ಜಲಮಂಡಳಿ ನಿರ್ಲಕ್ಷ್ಯಕ್ಕೆ ಯುವಕ ದುರ್ಮರಣ
Team Udayavani, Mar 4, 2023, 1:23 PM IST
ಬೆಂಗಳೂರು: ಮಾರತ್ತಹಳ್ಳಿ ಪಣತ್ತೂರು ಸಮೀಪದಲ್ಲಿ ಬೆಂಗಳೂರು ಜಲಮಂಡಳಿ ನಿರ್ಲಕ್ಷ್ಯಕ್ಕೆ ಬೆಸ್ಕಾಂ ನೌಕರ ಹಾಗೂ ಯುವ ಕಲಾವಿದ ಸಾವನ್ನಪ್ಪಿದ್ದಾನೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹಾರನಹಳ್ಳಿ ಮೂಲದ ಗಿರಿನಗರದ ನಿವಾಸಿ ವಿವೇಕ್ ಮೌರ್ಯ (26) ಮೃತಪಟ್ಟ ಯುವಕ.
ವಿವೇಕ್ ಕೆಲಸ ಮುಗಿಸಿಕೊಂಡು ಶುಕ್ರವಾರ ಮಾರತ್ತಹಳ್ಳಿಯ ಪಣತ್ತೂರು ಸಮೀಪ ಬೈಕ್ನಲ್ಲಿ ಬರುತ್ತಿದ್ದ. ಆ ಪ್ರದೇಶದಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ಬಿಡಬ್ಲ್ಯುಎಸ್ಎಸ್ಬಿ ರಸ್ತೆಗೆ ಎತ್ತರವಾಗಿ ನಿರ್ಮಿಸಿಸುತ್ತಿದ್ದ ಚೇಂಬರ್ ಮೇಲೆ ಬೈಕ್ ಹತ್ತಿಸಿ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ.
ವಿವೇಕ್ ಮೌರ್ಯ ದೇಶ ವಿದೇಶಗಳ ಹಲವೆಡೆ ಸಂಗೀತ ಕಾರ್ಯಕ್ರಮ ನೀಡಿದ್ದ. ಬೆಸ್ಕಾಂನಲ್ಲೂ ಕೆಲಸ ಮಾಡುತ್ತಿದ್ದ ವಿವೇಕ್ಗೆ 9 ತಿಂಗಳ ಹಿಂದೆ ಮದುವೆಯಾಗಿತ್ತು. ಜಲಮಂಡಳಿ ನಿರ್ಲಕ್ಷ್ಯದಿಂದ ಯುವಕ ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಕಳೆದ 1 ತಿಂಗಳಲ್ಲಿ ಇದೇ ಸ್ಥಳದಲ್ಲಿ ಹಲವು ಅಪಘಾತವಾಗಿದ್ದರೂ ಸಂಬಂಧಿಸಿದ ಇಲಾಖೆಗಳು ನಿರ್ಲಕ್ಷ್ಯ ವಹಿಸಿದೆ ಎಂದು ಸಾರ್ವಜನಿಕರಿಂದ ಆರೋಪ ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ