ಕಾಂಗ್ರೆಸ್ ಅತೃಪ್ತರ ವಿರುದ್ಧ ಯುವ ಶಾಸಕರ ಸಭೆ ನಾಳೆ
Team Udayavani, Jun 10, 2018, 6:45 AM IST
ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದು ಅಸಮಾಧಾನಗೊಂಡಿರುವ ಶಾಸಕರ ಬಗ್ಗೆ ಕಿಡಿ ಕಾರಿರುವ
ಕಾಂಗ್ರೆಸ್ ಶಾಸಕ ಬೈರತಿ ಬಸವರಾಜು, ಸೋಮವಾರ 40ಕ್ಕೂ ಹೆಚ್ಚು ಯುವ ಶಾಸಕರು (ಒಂದು ಅಥವಾ ಎರಡು
ಬಾರಿ ಗೆದ್ದವರು) ಸಭೆ ಸೇರಿ ಅತೃಪ್ತರಿಗೆ ಸ್ಪಷ್ಟ ಸಂದೇಶ ರವಾನಿಸುವುದಾಗಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಶನಿವಾರ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ನಡೆಸಿದ ಬೆಂಗಳೂರು ಅಭಿವೃದ್ಧಿ ಕುರಿತ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಮಂತ್ರಿ ಸ್ಥಾನ ಸಿಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸುವುದು ಅಥವಾ ಅತೃಪ್ತಿ ತೋರಿಸುವುದು ಸರಿಯಲ್ಲ. ಅತೃಪ್ತ ಶಾಸಕರ ಹಿಂದೆ ಬೇರೆ ಯಾವ ಶಾಸಕರೂ ಇಲ್ಲ. ಗೆದ್ದವರು ಯಾರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದರು.
ಸಚಿವ ಸ್ಥಾನಕ್ಕಾಗಿ ಕಚ್ಚಾಡುವುದು ಸರಿಯಲ್ಲ. ಈ ವಿಚಾರದಲ್ಲಿ ಪಕ್ಷ ತೆಗೆದುಕೊಳ್ಳುವ ತೀರ್ಮಾ ನಕ್ಕೆ ಎಲ್ಲರೂ ಬದ್ಧ
ರಾಗಿರಬೇಕು. ಈ ಹಿನ್ನೆಲೆಯಲ್ಲಿ ಸೋಮವಾರ 40ಕ್ಕೂ ಹೆಚ್ಚು ಶಾಸಕರು ಸಭೆ ಸೇರಿ ಸಚಿವ ಸ್ಥಾನಕ್ಕೆ ಕಚ್ಚಾಡುವವರಿಗೆ ಸ್ಪಷ್ಟ ಸಂದೇಶ ನೀಡಲಿದ್ದು, ಆ ಸಂದೇಶ ಯಾವುದು ಎಂಬುದು ಆ ದಿನವೇ ಗೊತ್ತಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ