![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಯುವತಿ ನೇಣಿಗೆ ಶರಣು: ಪ್ರಿಯಕರನ ಬಂಧನ
Team Udayavani, Aug 20, 2018, 12:41 PM IST
![arrest3.jpg](https://www.udayavani.com/wp-content/uploads/2018/08/20/arrest3-557x465.jpg)
ಬೆಂಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು ಯುವತಿಯೊಬ್ಬರು ಕಬ್ಬನ್ ಪಾರ್ಕ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಡಿಸೋಜಾ ಲೇಔಟ್ನ ಸಂತೋಷಿ (21) ಆತ್ಮಹತ್ಯೆ ಶರಣಾದವಳು. ಶನಿವಾರ ರಾತ್ರಿ ಕಬ್ಬನ್ ಪಾರ್ಕ್ನ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ಪಾರ್ಕ್ ಪ್ರವೇಶಿಸಿದ ಸಂತೋಷಿ, ಸಿದ್ದಲಿಂಗಯ್ಯ ವೃತ್ತದ ಬಳಿ ಮರವೊಂದಕ್ಕೆ ತನ್ನ ವೇಲ್ನಿಂದ ನೇಣು ಬಿಗಿದುಕೊಂಡಿದ್ದಾಳೆ.
ಭಾನುವಾರ ಬೆಳಗ್ಗೆ 5.30ಕ್ಕೆ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಮೃತ ಯುವತಿಯ ಪೋಷಕರು ನೀಡಿದ ದೂರಿನ ಮೇರೆಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಯುವತಿಯ ಪ್ರಿಯಕರ ನರೇಶ್ (28) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೇಪಾಳ ಮೂಲದ ಸಂತೋಷಿ, ದ್ವಿತೀಯ ಪಿಯುಸಿ ವ್ಯಾಸಂಗ ಮುಗಿಸಿ ಎರಡು ವರ್ಷದಿಂದ ನಗರದ ಸ್ಪಾ ಒಂದರಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು. ಈಕೆಯ ತಂದೆ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದಾರೆ. ಈ ಮಧ್ಯೆ ಅದೇ ಸ್ಪಾದಲ್ಲಿ ಕೆಲಸ ಮಾಡುತ್ತಿದ್ದ ನರೇಶ್ ಜತೆ ಸಂತೋಷಿಗೆ ಪ್ರೇಮಾಂಕುರವಾಗಿತ್ತು. ಇದನ್ನು ತಿಳಿದ ಸ್ಪಾ ಮುಖ್ಯಸ್ಥರು, ಇಬ್ಬರನ್ನೂ ಕೆಲಸದಿಂದ ತೆಗೆದಿದ್ದರು.
ಇದಾದ ಬಳಿಕ ಮದುವೆ ವಿಚಾರದಲ್ಲಿ ಇಬ್ಬರ ಮಧ್ಯೆ ಹಲವು ಬಾರಿ ಜಗಳವಾಗಿತ್ತು. “ನಿನ್ನ ನಡವಳಿಕೆ ಸರಿಯಿಲ್ಲ. ಹೀಗಾಗಿ ನಿನ್ನನ್ನು ಮದುವೆಯಾಗಲು ಸಾಧ್ಯವಿಲ್ಲ’ ಎಂದು ನರೇಶ್ ಹೇಳಿದ್ದ. ಇದನ್ನು ಸಂತೋಷಿ ತನ್ನ ಪೋಷಕರಿಗೂ ತಿಳಿಸಿದ್ದಳು. ಶನಿವಾರ ಬೆಳಗ್ಗೆ ಮತ್ತೆ ನರೇಶ್ನನ್ನು ಭೇಟಿಯಾಗಿದ್ದ ಸಂತೋಷಿ, ಮದುವೆ ವಿಷಯ ಪ್ರಸ್ತಾಪಿಸಿದ್ದು,
ಆತ ಹಿಂದಿನಂತೆಯೇ ಕಾರಣ ಹೇಳಿ ನಿರಾಕರಿಸಿದ್ದ. ಮದುವೆಯಾಗಲು ಸಾಧ್ಯವೇ ಇಲ್ಲ ಎಂದು ಕಡಾಖಂಡಿತವಾಗಿ ಹೇಳಿ ಆಕೆಯನ್ನು ಮನೆ ಬಳಿ ಬಿಟ್ಟಿದ್ದ. ಈ ವೇಳೆ ಸಂತೋಷಿ ಪೋಷಕರು ನರೇಶ್ನನ್ನು ಕರೆದು ಪುತ್ರಿಯನ್ನು ಮದುವೆಯಾಗುವಂತೆ ಕೇಳಿಕೊಂಡರೂ ಒಪ್ಪದೆ ಅಲ್ಲಿಂದ ಹೊರಹೋಗಿದ್ದ.
ಇದಾದ ಬಳಿಕ ಸಂಜೆಯವರೆಗೂ ಮನೆಯಲ್ಲಿ ಮೌನವಾಗಿ ಕೂತಿದ್ದ ಸಂತೋಷಿ, ಸಂಜೆ ಮನೆಯಿಂದ ಹೊರಟಿದ್ದು, ರಾತ್ರಿ ವೇಳೆ ಕಬ್ಬನ್ ಪಾರ್ಕ್ ಬಳಿ ಬಂದು ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಒಳಗಡೆ ಹೋಗಿದ್ದಾಳೆ. ನಂತರ ತಾನು ಹಾಕಿಕೊಂಡು ಬಂದಿದ್ದ ವೇಲ್ನಲ್ಲೇ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಭದ್ರತಾ ವ್ಯವಸ್ಥೆ ಲೋಪ!: ರಾತ್ರಿ 8 ಗಂಟೆ ಬಳಿಕ ಕಬ್ಬನ್ ಪಾರ್ಕ್ನಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧವಿದೆ. ಹೀಗಿದ್ದರೂ ಯುವತಿ ಪಾರ್ಕ್ ಒಳಗಡೆ ಬಂದಿದ್ದು ಹೇಗೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಪಾರ್ಕ್ಗೆ ಅಳವಡಿಸಿರುವ ಮೆಷ್ (ಜಾಲರಿ) ಅಲ್ಲಲ್ಲಿ ಮುರಿದು ಹೋಗಿದ್ದು, ಅದರ ಮೂಲಕ ಸಂತೋಷಿ ಒಳಗಡೆ ಬಂದು ಆತ್ಮಹತ್ಯೆ ಮಾಡಿಕೊಂಡಿರಬಹುದು. ಹೀಗಾಗಿ ಆಕೆ ಪಾರ್ಕ್ ಒಳಗೆ ಬಂದಿರುವುದು ಭದ್ರತಾ ಸಿಬ್ಬಂದಿ ಗಮನಕ್ಕೆ ಬಂದಿಲ್ಲ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.