ಹಿಂದೂಸ್ಥಾನಿ ಸಂಗೀತದಿಂದ ಯುವ ಸಮುದಾಯ ವಿಮುಖ


Team Udayavani, Sep 11, 2017, 11:54 AM IST

hindustani.jpg

ಬೆಂಗಳೂರು: ದೇಶದ ಸತ್ವವುಳ್ಳ ಹಾಗೂ ಪರಂಪರೆಯ ಮೂಲ ಭಾಗವಾಗಿರುವ ಹಿಂದೂಸ್ಥಾನಿ ಸಂಗೀತವನ್ನು ಕಡೆಗಣಿಸುತ್ತಿರುವುದು ವಿಷಾದನೀಯ ಎಂದು ಪದ್ಮಶ್ರೀ ಪುರಸ್ಕೃ ಸಾಹಿತಿ  ಡಾ.ಕೆ.ಎಸ್‌.ನಿಸಾರ್‌ ಆಹ್ಮದ್‌ ವಿಷಾದ ವ್ಯಕ್ತಪಡಿಸಿದ್ದಾರೆ.

ಉಸ್ತಾದ್‌ ಬಾಲೇಖಾನ್‌ ಮೆಮೋರಿಯಲ್‌ ಟ್ರಸ್ಟ್‌ ಹಾಗೂ ಇನ್ಫೋಸಿಸ್‌ ಫೌಂಡೇಶನ್‌ ನಗರದ ಜೆಎಸ್‌ಎಸ್‌ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಂಡಿತ್‌ ಗಣಪತಿ ಭಟ್‌ ಹಾಸಂಗಿ ಅವರಿಗೆ ಇನ್ಫೋಸಿಸ್‌- ಉಸ್ತಾದ್‌ ಬಾಲೇಖಾನ್‌ ಸ್ಮರಣಾರ್ಥ ಪ್ರಶಸ್ತಿ ಪ್ರಧಾನ ಮಾಡಿ ಅವರು ಮಾತನಾಡಿದರು.

ದೇಶದ ಪರಂಪರೆಯನ್ನು ನಾವೇ ಕಡೆಗಣಿಸುತ್ತಿರುವುದು ಬೇಸರದ ಸಂಗತಿ. ನಮ್ಮ ಸಂಗೀತ ಹಾಗೂ ಪರಂಪರೆಯ ಬಹಳಷ್ಟು ಭಾಗಗಳ ಪರಿಚಯ ಇಂದಿನ ಯುವಜನಾಂಗಕ್ಕೆ ಇಲ್ಲ. ಪಾಶ್ಚಿಮಾತ್ಯ ಸಂಗೀತಕ್ಕೆ ಮಾರು ಹೋಗಿರುವ ಇವರಿಗೆ ಅಂತಃಸತ್ವವುಳ್ಳ ಹಿಂದೂಸ್ಥಾನಿ ಸಂಗೀತ ಬಗ್ಗೆ ಅರಿವು ಮೂಡಿಸುವ ಕಾರ್ಯ ಆಗಬೇಕು ಎಂದರು.

ದೇಶದ ಕೆಲವೇ ಸಂಸ್ಥೆಗಳು ಪರಂಪರೆಯ ಭಾಗವಾಗಿರುವ ಸಂಗೀತವನ್ನು ಪ್ರಚುರಪಡಿಸುತ್ತಿವೆ. ಇನ್ಫೋಸಿಸ್‌ ಫೌಂಡೇಶನ್‌ ಸಹಯೋಗದಲ್ಲಿ ಬಾಲೇಖಾನ್‌ ಮೆಮೋರಿಯಲ್‌ ಟ್ರಸ್ಟ್‌ ಸಂಗೀತಾಸಕ್ತರಿಗೆ ಇಂತಹ ವೇದಿಕೆ ಒದಗಿಸಿರುವುದು ಶ್ಲಾಘನೀಯ ಎಂದರು. 

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಂಡಿತ್‌ ಗಣಪತಿ ಭಟ್‌ ಹಾಸಣಗಿ, ನನ್ನ ಅಣ್ಣನಂತಹ ಬಾಲೇಖಾನ್‌ ಅವರ ಸ್ಮರಣಾರ್ಥ ಪ್ರಶಸ್ತಿ ಸ್ವೀಕರಿಸುತ್ತಿರುವುದು ಸಂತಸದ ವಿಷಯ ಎಂದರು. ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ, ಬಿಎನ್‌ಎಂ ಚಾರಿಟೀಸ್‌ ಟ್ರಸ್ಟ್‌ನ ಕಾರ್ಯದರ್ಶಿ ನಾರಾಯಣ ರಾವ್‌ ಆರ್‌.ಮಾನೆ, ಉಸ್ತಾದ್‌ ಬಾಲೆಖಾನ್‌ ಅವರ ಪುತ್ರ ಹಫೀಜ್‌ ಬಾಲೇಖಾನ್‌ ಸೇರಿದಂತೆ ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು.

ರೈಸ್‌ ಬಾಲೇಖಾನ್‌ ಮತ್ತು ಹಫೀಸ್‌ ಬಾಲೇಖಾನ್‌ ಅವರು ಹಾಡಿರುವ ಮತ್ತು ಉಸ್ತಾದ್‌ ರಫೀಕ್‌ ಖಾನ್‌ ಮತ್ತು ಪಂಡಿತ್‌ ಶ್ರೀನಿವಾಸ್‌ ಜೋಶಿ ಅವರು ಸಂಗೀತ ಸಂಯೋಜನೆ ಮಾಡಿರುವ ವಚನ ಸ್ವರಧಾರೆ ಸಿ.ಡಿ.ಯನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು. ಅಲ್ಲದೆ, ಎಂ.ಆರ್‌.ಕಲಾವತಿ ಅವರಿಗೆ ಸೌಭಾಗ್ಯಲಕ್ಷ್ಮೀ ವಸಂತರಾವ್‌ ಜಾಜೀ ಹಾಗೂ ಬಿ.ಕೆ.ಮಮತಾ ಅವರಿಗೆ ಹುಮೀದಾ ಬೇಗಂ ಬಾಲೇಖಾನ್‌ ಶಿಷ್ಯವೇತನ ನೀಡಿ ಗೌರಸಲಾಯಿತು. ನಂತರ ಗಣಪತಿ ಭಟ್‌ ಹಾಸಣಗಿ ಅವರ ಸಂಗೀತ ಕಛೇರಿಯೂ ನಡೆಯಿತು.

ಟಾಪ್ ನ್ಯೂಸ್

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.