ಗಾಂಧಿ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ‘ವೋಟಿ ರವಿ’ಗಿಲ್ಲ: ಬಿ.ವಿ.ಶ್ರೀನಿವಾಸ
Team Udayavani, Jun 24, 2022, 1:03 PM IST
ಬೆಂಗಳೂರು: ಗಾಂಧಿ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ವೋಟಿ ರವಿಗೆ (ಸಿ.ಟಿ.ರವಿ) ಇಲ್ಲ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ ಹೇಳಿದರು.
ಅಗ್ನಿಪಥ್ ಯೋಜನೆ ವಿರೋಧಿಸಿ ಯುವ ಕಾಂಗ್ರೆಸ್ ಹಮ್ಮಿಕೊಂಡಿದ್ದ ಆಕ್ರೋಶ್ ರಾಲಿಯಲ್ಲಿ ಮಾತನಾಡಿದರು. ಸಿ.ಟಿ ರವಿ ಆ್ಯಕ್ಸಿಡೆಂಟ್ ಗಿರಾಕಿ. ಈಗಾಗಲೇ ಎರಡ್ಮೂರು ಆ್ಯಕಿಡೆಂಟ್ ಮಾಡಿ ಜನರ ಜೀವ ತೆಗೆದಿದ್ದಾರೆ. ಅಂತಹವರಿಂದ ನಮಗೆ ನೀತಿಪಾಠ ಬೇಡ ಎಂದರು.
ಅಗ್ನಿಪಥ್ ಹೆಸರಿಗೆ ಮಸಿಬಳಿಯುವ ಕೆಲಸ ಬಿಜೆಪಿ ಮಾಡಿದೆ. ಭಾರತೀಯ ಸೇನೆಯನ್ನು ಖಾಸಗಿ ಪಾಲು ಮಾಡುವ ಹುನ್ನಾರ ನಡೆಸಿದ್ದಾರೆ. ದೇಶದ ಆಸ್ತಿಗಳನ್ನೇ ಮೋದಿ, ಅಮಿತ್ ಷಾ ಮಾರಾಟ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ:ರಾಷ್ಟ್ರಪತಿ ಹುದ್ದೆಯಲ್ಲಿ ಜಾತಿ ನೋಡಿ ಬಿಜೆಪಿ ಸಂವಿಧಾನಕ್ಕೆ ಅಗೌರವ ತೋರಿದೆ: ಮಹಾದೇವಪ್ಪ
ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲಪಾಡ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಅವರು ರಾಮ ರಾಜ್ಯ ಮಾಡುವ ಭರವಸೆ ನೀಡಿದ್ದರು. ಆದರೆ ಈಗ ರಾವಣ ರಾಜ್ಯ ನಿರ್ಮಾಣ ಮಾಡಿದ್ದಾರೆ ಎಂದು ದೂರಿದರು.
ಅಗ್ನಿಪಥ್ ಯೋಜನೆ ಯಾವುದೆ ಕಾರಣಕ್ಕೂ ಜಾರಿಗೆ ಅವಕಾಶ ನೋಡುವುದಿಲ್ಲ. ಯುವ ಕಾಂಗ್ರೆಸ್ ಇದರ ವಿರುದ್ದ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ