“ನೀರು ಕೊಡೋ ಮಗನೇ” ಎಂದು ಏಕವಚನದಲ್ಲಿ ಕೇಳಿದ್ದಕ್ಕೆ ಚೂರಿ ಇರಿದು ಕೊಲೆ
Team Udayavani, Sep 13, 2022, 1:02 PM IST
ಬೆಂಗಳೂರು: “ನೀರು ಕೊಡೋ ಮಗನೇ’ ಎಂದು ಏಕವಚನದಲ್ಲಿ ಕೇಳಿದ ವಿಚಾರಕ್ಕೆ ಇಬ್ಬರು ಆಟೋ ಚಾಲಕರ ನಡುವೆ ನಡೆದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಪೀಣ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆರ್.ಟಿ.ನಗರ ನಿವಾಸಿ ಸಿದ್ದಿಕ್ (23) ಕೊಲೆಯಾದ ಆಟೋ ಚಾಲಕ. ಈ ಸಂಬಂಧ ಅಜಯ್ ಎಂಬ ಆಟೋ ಚಾಲಕನನ್ನು ಬಂಧಿಸಲಾಗಿದೆ. ಜಾಲಹಳ್ಳಿ ಕ್ರಾಸ್ನಲ್ಲಿರುವ ಆಟೋ ನಿಲ್ದಾಣದಲ್ಲಿ ರಾತ್ರಿ 11.30ರ ಸುಮಾರಿಗೆ ಅಜಯ್ ಎಂಬಾತ ಆಟೋ ನಿಲ್ಲಿಸಿಕೊಂಡು ನಿಂತಿದ್ದ. ಅದೇ ವೇಳೆಯಲ್ಲಿ ಸಿದ್ದಿಕ್ ಆಟೋ ನಿಲ್ದಾಣಕ್ಕೆ ಬಂದಿದ್ದಾನೆ. ಆಗ “ಏನೋ ಮಗನೇ ನೀರಿದ್ದರೆ ಕೋಡೋ’ ಎಂದು ಏರುಧ್ವನಿಯಲ್ಲಿ ಸಿದ್ದಿಕ್ ಕೇಳಿದ್ದಾನೆ. ಅದಕ್ಕೆ ಕೋಪಗೊಂಡ ಅಜಯ್, “ಮಗನೇ’ ಎಂದು ಕರೆಯು ತ್ತಿಯಾ ಎಂದು ಜಗಳವಾಡಿದ್ದಾನೆ. ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಇದು ವಿಕೋಪಕ್ಕೆ ಹೋಗಿದ್ದು, ಆಕ್ರೋಶಗೊಂಡ ಅಜಯ್, ಚಾಕುವಿನಿಂದ ಸಿದ್ದಿಕ್ನ ಎದೆ, ಹೊಟ್ಟೆ ಹಾಗೂ ಇತರೆ ಭಾಗಗಳಿಗೆ ಇರಿದಿದ್ದಾನೆ. ರಕ್ತಸ್ರಾವದಲ್ಲಿ ಬಿದ್ದಿದ್ದ ಸಿದ್ದಿಕ್ನನ್ನು ಇತರೆ ಆಟೋ ಚಾಲಕರು ಕೂಡಲೇ ಸಮೀ ಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದರು.
ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!