ಎಚ್ಡಿಡಿ, ಎಚ್ಡಿಕೆ ಜತೆ ಕಾಣಿಸಿಕೊಂಡ ಜಮೀರ್
Team Udayavani, May 18, 2018, 12:03 PM IST
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತ ಹಾಕಿ ಜೆಡಿಎಸ್ನಿಂದ ಅಮಾನತುಗೊಂಡ ನಂತರ ಪರಸ್ಪರ ವಾಗ್ಧಾಳಿ ಮೂಲಕ ರಾಜಕೀಯವಾಗಿ ಸಮರ ಸಾರಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜಮೀರ್ ಅಹಮದ್ ಇದೀಗ ಮತ್ತೆ ಒಂದಾಗಿದ್ದಾರೆ.
ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಂತರ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಅಧಿಕಾರ ಹಿಡಿಯಲು ಕಸರತ್ತು ನಡೆಸುತ್ತಿರುವ ವಿದ್ಯಮಾನಗಳ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ- ಜಮೀರ್ ಅಹಮದ್ ನಡುವಿನ ದ್ವೇಷ ಕಳೆದು ಮತ್ತೆ ಸ್ನೇಹ ಚಿಗುರಿದೆ.
ಬುಧವಾರ ರಾತ್ರಿ ಈಗಲ್ಟನ್ ರೆಸಾರ್ಟ್ನಲ್ಲಿ ಎಂಟು ತಿಂಗಳ ನಂತರ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಎಚ್.ಡಿ.ಕುಮಾರಸ್ವಾಮಿ -ಜಮೀರ್ ಅಹಮದ್ ಉಭಯ ಕುಶಲೋಪರಿ ನಡೆಸಿದರು. ಇದು ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.
ಕಾಂಗ್ರೆಸ್ ಶಾಸಕರು ತಂಗಿದ್ದ ರೆಸಾರ್ಟ್ಗೆ ಕುಮಾರಸ್ವಾಮಿ ತೆರಳಿದ ವೇಳೆ ಕಾಂಗ್ರೆಸ್ನ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಜಮೀರ್ ಅಹಮದ್ ಅವರನ್ನು ಭೇಟಿಯಾದ ಕುಮಾರಸ್ವಾಮಿ ಸ್ವಲ್ಪ ಹೊತ್ತು ಮಾತುಕತೆ ನಡೆಸಿದರು.
ಸರ್ಕಾರ ರಚನೆಯ ಕಾರ್ಯತಂತ್ರಗಳ ಬಗ್ಗೆಯೂ ಚರ್ಚಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹಮದ್, ಕುಮಾರಸ್ವಾಮಿ ಅವರನ್ನು ಭೇಟಿಯಾಗದೆ ತಿಂಗಳುಗಳು ಆಗಿತ್ತು. ಸುದೀರ್ಘ ಅವಧಿಯ ನಂತರ ಇಬ್ಬರೂ ಮಾತುಕತೆ ನಡೆಸಿದ್ದೇವೆ ಎಂದರು.
ದೇವೇಗೌಡ-ಜಮೀರ್ ಮುಖಾಮುಖೀ: ಇದರ ಬೆನ್ನಲ್ಲೇ ಗುರುವಾರ ವಿಧಾನಸೌಧದ ಎದುರು ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕೂಡ ಅಲ್ಲಿ ಆಗಮಿಸಿದ್ದರು.
ಕಾಂಗ್ರೆಸ್ ಶಾಸಕರು ಮತ್ತು ಮುಖಂಡರೊಂದಿಗೆ ದೇವೇಗೌಡರು ಚರ್ಚಿಸುತ್ತಿದ್ದ ವೇಳೆ ಜಮೀರ್ ಅಹಮದ್ ಪಕ್ಕದಲ್ಲೇ ನಿಂತಿದ್ದರು. ಜಮೀರ್ ಹೆಗಲ ಮೇಲೆ ಕೈ ಇಟ್ಟು ದೇವೇಗೌಡರು ಮಾತನಾಡುತ್ತಿದ್ದರು. ನಂತರ ಜಮೀರ್ ಭುಜ ತಟ್ಟಿದ ದೇವೇಗೌಡರು ಅಲ್ಲಿಂದ ಮುಂದೆ ಸಾಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ