ಸದನಕ್ಕೆ ಬಂದ ಆನಂದ್‌ಸಿಂಗ್‌ಗೆ ಜಮೀರ್‌ ಸಾಥ್‌


Team Udayavani, Feb 7, 2019, 9:08 AM IST

blore-20.jpg

ಬೆಂಗಳೂರು: ಈಗಲ್‌ಟನ್‌ ರೆಸಾರ್ಟ್‌ ನಲ್ಲಿ ನಡೆದ ಹಲ್ಲೆಯಿಂದ ಗಾಯಗೊಂಡಿದ್ದ ಕಾಂಗ್ರೆಸ್‌ ಶಾಸಕ ಆನಂದ್‌ಸಿಂಗ್‌ ಅಧಿವೇಶನಕ್ಕೆ ಹಾಜರಾಗಿ ದ್ದರು. ನಂತರ ಅಸ್ವಸ್ಥಗೊಂಡಿದ್ದ ರಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬುಧವಾರ ಬೆಳಗ್ಗೆ ರಾಜ್ಯ ಪಾಲರ ಭಾಷಣ ಹಿನ್ನೆಲೆಯಲ್ಲಿ ಸಚಿವ ಜಮೀರ್‌ ಅಹಮದ್‌ ಅವರು ಆನಂದ್‌ಸಿಂಗ್‌ ಅವರನ್ನು ಸದನಕ್ಕೆ ಕರೆ ತಂದು ಜತೆಯಲ್ಲೇ ‘ಎಸ್ಕಾರ್ಟ್‌’ ನಂತಿದ್ದು ರಾಜ್ಯಪಾಲರ ಭಾಷಣದ ನಂತರ ಕರೆದೊಯ್ದರು. ಹಲ್ಲೆಯಲ್ಲಿ ಕಣ್ಣಿಗೆ ತೀವ್ರ ಗಾಯ ಆಗಿದ್ದರಿಂದ ಕಪ್ಪು ಕನ್ನಡಕ ಧರಿಸಿ ಬಂದ ಆನಂದ್‌ಸಿಂಗ್‌ ಅವರ ಆರೋಗ್ಯವನ್ನು ಮೂರೂ ಪಕ್ಷದ ಶಾಸಕರು ವಿಚಾರಿಸಿದರು. ತಮ್ಮ ಆರೋಗ್ಯ ವಿಚಾರಿಸಿದ ಶಾಸಕರು, ಪರಿಷತ್‌ ಸದಸ್ಯರಿಗೆ ಆನಂದ್‌ಸಿಂಗ್‌ ಕೃತಜ್ಞತೆ ಸಲ್ಲಿಸಿದರು. ಆನಂದ್‌ಸಿಂಗ್‌ ಅವರನ್ನು ತಮ್ಮ ಪಕ್ಕದಲ್ಲೇ ಕೂರಿಸಿಕೊಂ ಡಿದ್ದ ಜಮೀರ್‌ ಅಹಮದ್‌, ಬೇರೆಯವರ ಕೈಗೆ ಒಂಟಿಯಾಗಿ ಸಿಗದಂತೆ ನೋಡಿಕೊಂ ಡರು. ಸದನದಿಂದ ಕರೆದುಕೊಂಡು ಹೋಗುವಾಗ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆನಂದ್‌ಸಿಂಗ್‌ ಆರೋಗ್ಯ ವಿಚಾರಿಸಿದರು. ಸದನದಿಂದ ಹೋಗುತ್ತಿದ್ದಂತೆ ಮತ್ತೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ದ್ದರಿಂದ ಮತ್ತೆ ಆನಂದ್‌ಸಿಂಗ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಅತೃಪ್ತರತ್ತ ಚಿತ್ತ: ಅಧಿವೇಶನದಲ್ಲಿ ಕಾಂಗ್ರೆಸ್‌ ನಾಯಕರ ಚಿತ್ತ ಅತೃಪ್ತ ಶಾಸಕರತ್ತಲೇ ನೆಟ್ಟಿತ್ತು. ಭೀಮಾನಾಯಕ್‌, ಪ್ರತಾಪಗೌಡ ಪಾಟೀಲ್‌, ಬಸವರಾಜ ದದ್ದಲ್‌ ಅವರ ಮೇಲೆ ಕಣ್ಣಿಟ್ಟಿದ್ದರು. ಇತ್ತ ಮೊಗಸಾಲೆಯಲ್ಲೂ ಆಪರೇಷನ್‌ ಕಮಲ, ರಿವರ್ಸ್‌ ಆಪರೇಷನ್‌ನದ್ದೇ ಚರ್ಚೆ ನಡೆಯುತ್ತಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್‌ ಪ್ರತಿಪಕ್ಷ ಸದಸ್ಯರ ಮೊಗಸಾಲೆಯಲ್ಲಿ ಕುಳಿತು, ‘ಸರ್ಕಾರ ಎಷ್ಟು ದಿನ ಇರುತ್ತೋ ಬಾರಯ್ಯ’ ಎಂದು ತಮಾಷೆ ಮಾಡುತ್ತಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.