ವಿದೇಶದಿಂದ ಬಂದ 183 ಪ್ರಯಾಣಿಕರ ತಪಾಸಣೆ
Team Udayavani, Mar 21, 2020, 5:20 PM IST
ದೇವನಹಳ್ಳಿ: ವಿದೇಶಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 183 ವಿದೇಶಿ ಪ್ರಯಾಣಿಕರನ್ನು ಕೋವಿಡ್ 19 ಶಂಕೆ ಹಿನ್ನೆಲೆ ತಪಾಸಣೆ ನಡೆಸಲಾಗಿದೆ ಎಂದು ಡೀಸಿ ಪಿ.ಎನ್.ರವೀಂದ್ರ ತಿಳಿಸಿದರು.
ಗುರುವಾರ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 8 ಗಂಟೆಯವರೆಗೆ 183 ಜನರನ್ನು ತಪಾಸಣೆ ಮಾಡಲಾಗಿದೆ. ಎ-ವರ್ಗದಲ್ಲಿ 2, ಬಿ-ವರ್ಗದಲ್ಲಿ 15, ಸಿ-ವರ್ಗದಲ್ಲಿ 166 ಜನರನ್ನು ತಪಾಸಣೆ ಗೊಳಪಡಿಸಿ ಅವರವರ ಮನೆಗೆ ಕಳುಹಿಸಿ ಕೊಡಲಾಗಿದೆ. ಮನೆಯಲ್ಲಿಯೇ 14 ದಿನಗಳ ಕಾಲ ಪ್ರತ್ಯೇಕವಾಗಿರುವಂತೆ ಸಲಹೆ ಸೂಚನೆಗಳನ್ನು ನೀಡಲಾಗಿದೆ.
ವಿದೇಶಗಳಿಂದ ಬರುವ ಪ್ರಯಾಣಿಕರನ್ನು ಬಸ್ಗಳ ಮೂಲಕ ಆಕಾಶ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿದೆ.ವಿಮಾನ ನಿಲ್ದಾಣದಲ್ಲಿ ಥರ್ಮಮೀಟರ್ನಿಂದ ಒಂದು ಬಾರಿ ಪರಿಶೀಲನೆ ಮಾಡಿದ ನಂತರ ಮತ್ತೂಂದು ಬಾರಿ ಆಕಾಶ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸುತ್ತೇವೆ. ವಿಮಾನ ನಿಲ್ದಾಣದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ರಾತ್ರಿ-ಹಗಲು ಮೂರು ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ. ತಾಳ್ಮೆಯಿಂದ ಇದ್ದು, ಅಧಿಕಾರಿಗಳಿಗೆ ಸಹರಿಸುವಂತಾಗಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ