20 ಲಕ್ಷ ಕೋಟಿ ಪ್ಯಾಕೇಜ್ ದಿಟ್ಟ ನಿರ್ಧಾರ
Team Udayavani, May 14, 2020, 5:41 AM IST
ದೊಡ್ಡಬಳ್ಳಾಪುರ:ಪ್ರಧಾನಿ ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್, ದೇಶದ ಇತಿಹಾಸದಲ್ಲಿಯೇ ಮಹತ್ವದ ನಿರ್ಧಾರವಾಗಿದೆ. ಅವರ ದಿಟ್ಟ ನಿರ್ಧಾರ ಹಾಗೂ ಆರ್ಥಿಕ ಸದೃಢತೆಗೆ ಯೋಜನೆ ರೂಪಿಸುತ್ತಿರುವ ಕಾರ್ಯವೈಖರಿ ಭಿನಂದನೀಯ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
ನಗರದ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಬಿಜೆಪಿಯಿಂದ ನಡೆದ ಕಾರ್ಯಕ್ರಮದಲ್ಲಿ ದಿನಸಿ ಕಿಟ್ ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ಮೋದಿ ನಿರ್ಧಾರ ಸಮಯೋಚಿತವಾಗಿದ್ದು, ವಿರೋಧ ಪಕ್ಷದವರು ವಿನಾ ಕಾರಣ ಟೀಕಿಸುತ್ತಿದ್ದಾರೆ. ಬಡವರು, ಕೂಲಿ ಕಾರ್ಮಿಕರಿಗೆ 5 ಸಾವಿರ ಕಿಟ್ ವಿತರಿಸಲಾಗುತ್ತಿದೆ.
ಕೊರೊನಾ ವಿರುದದ ಕಾರ್ಯಾಚಾರಣೆಯಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಮಾತನಾಡಿ, ಪ್ರಧಾನಿ ಮೋದಿ ಪಂಚ ಸೂತ್ರಗಳನ್ನು ಎಲ್ಲರೂ ಪಾಲಿಸಬೇಕು. ಕೊರೊನೊ ತಡೆ ಮಾರ್ಗ ಸೂಚಿ ಎಲ್ಲರೂ ಪಾಲಿಸಬೇಕು ಎಂದರು. ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಎಂ.ಕೆ. ವತ್ಸಲ ಮಾತನಾಡಿದರು. ಬಿ ಜೆಪಿ ತಾಲೂಕು ಅಧ್ಯಕ್ಷ ಟಿ.ಎನ್. ನಾಗರಾಜ್,
ನಗರ ಅಧ್ಯಕ್ಷ ಎಚ. ಎಸ್. ಶಿವಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಾ ಶಿವಶಂಕರ್, ಕಾರ್ಯದರ್ಶಿ ಗೋಪಿ, ಶಿವಪ್ರಸಾದ್, ಮಂಜುನಾಥ್, ಮಾಜಿ ಜಿಲ್ಲಾಧ್ಯಕ್ಷ ಬಿ.ಸಿ.ನಾರಾಯಣ ಸ್ವಾಮಿ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಗಿರಿಜಾ, ನಗರಸಭೆ ಮಾಜಿ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ಹಿರಿಯ ಬಿಜೆಪಿ ಮುಖಂಡ ಮಹದೇವಯ್ಯ, ರಾಮು, ಅಶ್ವತ್ಥನಾರಾಯಣ್, ಕಾಂತರಾಜ್ ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಶಿವು ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್ ಸಮಸ್ಯೆ
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ