ಕರ್ಣಾಟಕ ಬ್ಯಾಂಕ್ನಿಂದ ಆದ್ಯತಾ ಕ್ಷೇತ್ರಕ್ಕೆ ಶೇ.43 ಸಾಲ
ಕರ್ಣಾಟಕ ಬ್ಯಾಂಕ್ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಚಂದ್ರಶೇಖರರಾವ್ ಅಭಿಮತ
Team Udayavani, Jul 5, 2019, 9:54 AM IST
ತಾಲೂಕಿನ ಕಾಡನೂರು ಗ್ರಾಮದಲ್ಲಿ ನೂತನ ಕಟ್ಟಡದಲ್ಲಿ ಪ್ರಾರಂಭವಾದ ಕರ್ಣಾಟಕ ಬ್ಯಾಂಕ್ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಬ್ಯಾಂಕ್ ಮಹಾ ಪ್ರಬಂಧಕ ಚಂದ್ರಶೇಖರರಾವ್, ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಕರ್ಣಾಟಕ ಬ್ಯಾಂಕ್ ಲಾಭ ಗಳಿಸುವುದಷ್ಟೇ ಸೀಮಿತವಾಗದೇ ಗ್ರಾಹಕ ಸ್ನೇಹಿಸಯಾಗಿದ್ದು, ಆದ್ಯತಾ ಕ್ಷೇತ್ರಕ್ಕೆ ಶೇ.43ರಷ್ಟು ಸಾಲ ನೀಡುವ ಮೂಲಕ ದೇಶದ ಆರ್ಥಿಕ ಪ್ರಗತಿಗೆ ಶ್ರಮಿಸುತ್ತಿದೆ ಎಂದು ಕರ್ಣಾಟಕ ಬ್ಯಾಂಕ್ ಮಹಾ ಪ್ರಬಂಧಕ ಚಂದ್ರಶೇಖರರಾವ್ ಹೇಳಿದರು.
ತಾಲೂಕಿನ ಕಾಡನೂರು ಗ್ರಾಮದಲ್ಲಿ ನೂತನ ಕಟ್ಟಡದಲ್ಲಿ ಪ್ರಾರಂಭವಾದ ಕರ್ಣಾಟಕ ಬ್ಯಾಂಕ್ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದಲ್ಲಿ 186 ಶಾಖೆ: ಕರ್ಣಾಟಕ ಬ್ಯಾಂಕ್ ಷೇರುದಾರರ ಹಣದಲ್ಲಿ ನಡೆಯುತ್ತಿರುವ ಬ್ಯಾಂಕ್ ಆಗಿದೆ. ಇದು ಲಾಭ ಮಾಡುವ ದೃಷ್ಟಿಯಿಂದ ಮಾತ್ರ ಕೆಲಸ ಮಾಡುತ್ತಿರುವ ಬ್ಯಾಂಕ್ ಅಲ್ಲ. ರಾಜ್ಯದಲ್ಲಿ 186 ಶಾಖೆಗಳನ್ನು ಗ್ರಾಮಾಂತರ ಪ್ರದೇಶದ ಹಳ್ಳಿಗಳಲ್ಲಿಯೇ ತೆರೆಯಲಾಗಿದೆ. ರೈತರು, ದುಡಿಯುವ ವರ್ಗದವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ಅವರ ಪ್ರಗತಿಯಲ್ಲಿ ಭಾಗಿಯಾಗಬೇಕು ಎನ್ನುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ ಎಂದರು.
ವಿಮಾ ಪರಿಹಾಕ್ಕೆ ಅವಕಾಶ: ರೈತರು ಬ್ಯಾಂಕಿನಲ್ಲಿ ಪಡೆಯುವ ಸಾಲ ಸೌಲಭ್ಯಗಳನ್ನು ನಿಗದಿತ ಉದ್ದೇಶಕ್ಕೆ ಬಳಸುವ ಮೂಲಕ ಸಕಾಲದಲ್ಲಿ ಸಾಲವನ್ನು ಮರುಪಾವತಿ ಮಾಡಿದರೆ ಇತರರು ಸಾಲ ಪಡೆಯಲು ಸಹಕಾರಿಯಾಗಲಿದೆ. ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿರುವ ಗ್ರಾಹಕರು 125 ರೂಪಾಯಿ ವಿಮಾ ಹಣ ಪಾವತಿ ಮಾಡಿದರೆ ಅಪಘಾತ ಸಂದರ್ಭದಲ್ಲಿ ಕುಟುಂಬದವರಿಗೆ 10 ಲಕ್ಷ ರೂಪಾಯಿಗಳವರೆಗೆ ವಿಮಾ ಪರಿಹಾರ ಪಡೆಯಲು ಅವಕಾಶವಿದೆ ಎಂದರು.
ಕೆರೆ ಅಭಿವೃದ್ಧಿಪಡಿಸುವ ಭರವಸೆ: ಬ್ಯಾಂಕಿನ ನೂತನ ಕಟ್ಟಡವನ್ನು ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ರೈತರು ಖಾಸಗಿಯವರಿಂದ ಸಾಲ ಪಡೆದು ಅಧಿಕ ಬಡ್ಡಿ ಪಾವತಿ ಮಾಡಿ ಸಂಕಷ್ಟಕ್ಕೆ ಸಿಲುಕುವುದನ್ನು ನಿಲ್ಲಿಸಬೇಕು. ಬ್ಯಾಂಕುಗಳಲ್ಲಿ ಬೆಳೆ ಸಾಲ ಮಾತ್ರವಲ್ಲದೆ ಕಡಿಮೆ ಬಡ್ಡಿದರದಲ್ಲಿ ಹಲವಾರು ರೀತಿಯ ಸಾಲ ಸೌಲಭ್ಯಗಳು ದೊರೆಯುತ್ತಿವೆ. ಇವುಗಳನ್ನು ರೈತರು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು. ಕರ್ಣಾಟಕ ಬ್ಯಾಂಕ್ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕೆರೆ ಅಭಿವೃದ್ದಿ ಕೆಲಸಕ್ಕೆ 10 ಲಕ್ಷ ರೂಪಾಯಿ ದೇಣಿಗೆ ನೀಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್ ಸಮಸ್ಯೆ
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ