ಕೇವಲ 20 ನಿಮಿಷದಲ್ಲಿ ಹೊಸಕೋಟೆ ತಲುಪಿ


Team Udayavani, May 27, 2023, 3:03 PM IST

ಕೇವಲ 20 ನಿಮಿಷದಲ್ಲಿ ಹೊಸಕೋಟೆ ತಲುಪಿ

ದೇವನಹಳ್ಳಿ: ತಾಲೂಕಿನ ಜಿಲ್ಲಾಡಳಿತ ಭವನದಿಂದ ಪಟ್ಟಣದ ಹೊರವಲಯದಲ್ಲಿ ಸಾಗಿ ಹೊಸಕೋಟೆ ನಗರಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 207ರ ಕಾಮಗಾರಿ ಬಹುತೇಕ ಪೂರ್ಣವಾಗಿದ್ದು, 37.6 ಕಿ.ಮೀ. ಆರು ಪಥ ಪೂರ್ಣಗೊಂಡು ಉದ್ಘಾಟನೆಗಾಗಿ ಕಾಯುತ್ತಿದೆ.

ಬೆಂಗಳೂರು ಮಹಾನಗರದ ಒಳಭಾಗದಿಂದ ಪಕ್ಕದ ರಾಜ್ಯಗಳಿಗೆ ಸಾಗುತ್ತಿದ್ದ ವಾಹನ ದಟ್ಟಣೆಯನ್ನು ಕಡಿಮೆಗೊಳಿಸಲು, ನೆಲಮಂಗಲದ ದಾಬಸ್‌ಪೇಟೆ ಯಿಂದ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋ ಟೆಯ ಮೂಲಕ ಹೈದ್ರಾಬಾದ್‌, ತಮಿಳುನಾಡಿಗೆ ಸಂಪರ್ಕ ಕಲ್ಪಿಸಲು “ಭಾರತ್‌ ಮಾಲ ಯೋಜನೆ’ಯಡಿ ಈ ಹೆದ್ದಾರಿಯನ್ನು ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿ ದೆ. ಇದರಿಂದ ಸರಕು ಸಾಗಣೆ ಕಾರ್ಯ ಚಟು ವಟಿಕೆಗಳು ಹೆಚ್ಚಾಗಲಿದ್ದು, ಸ್ಥಳೀಯವಾಗಿ ಆರ್ಥಿಕತೆ ಬಲಿಷ್ಠವಾಗಲಿದೆ.

ಆರ್ಥಿಕ ಕಾರಿಡಾರ್‌: ದೇವನಹಳ್ಳಿಯ ಜಿಲ್ಲಾಡಳಿತ ಭವನದಿಂದ ಹೊಸಕೋಟೆಯವರೆಗಿನ 37.6 ಕಿ.ಮೀ. ರಸ್ತೆ ನಿರ್ಮಾಣಕ್ಕೆ ಒಟ್ಟು 1278 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಅನೇಕ ವಿಶೇಷತೆಗಳನ್ನು ಈ ಹೆದ್ದಾರಿ ಹೊಂದಿದೆ. ಗ್ರಾಮೀಣ ಭಾಗದಿಂದ ಪಟ್ಟಣ, ಕೈಗಾರಿಕಾ ಪ್ರದೇಶದ ಮೂಲಕ ಹಾದು ಹೋಗಿ ನೆರೆಯ ರಾಜ್ಯಗಳ ರಾಜಧಾನಿಗೆ ನೇರ ಸಂಪರ್ಕ ಕಲ್ಪಿಸುವ ಈ ರಸ್ತೆಯೂ ಆರ್ಥಿಕ ಕಾರಿಡಾರ್‌ ಆಗಿ ಪರಿವರ್ತನೆಗೊಳ್ಳಲಿದೆ.

ಪೂರ್ಣ ಸೌರಶಕ್ತಿ ಬಳಕೆ: ಅಗತ್ಯವಿರುವ ಕಡೆಗಳಲ್ಲಿ ಸರ್ವಿಸ್‌ ರಸ್ತೆಗಳನ್ನು ಒದಗಿಸಲಾಗಿದೆ. ಸ್ಥಳೀಯವಾಗಿ ಲಭ್ಯವಾಗುವ ಕಚ್ಚಾ ವಸ್ತುಗಳನ್ನು ಬಳಸಿಕೊಂಡು ಈ ರಸ್ತೆ ನಿರ್ಮಾಣ ಮಾಡಿರುವುದು ವಿಶೇಷವಾಗಿದೆ. ರಸ್ತೆಯ ಬದಿಗಳಲ್ಲಿ ಅಳವಡಿಸಿರುವ ವಿದ್ಯುತ್‌ ದೀಪ ಗಳು ಸ್ವಯಂ ಚಾಲಿತವಾಗಿ ವಾತಾವರಣಕ್ಕೆ ತಕ್ಕಂತೆ ಕೆಲಸ ಮಾಡಲಿದ್ದು, ಎಲ್ಲವೂ ಸೌರಶಕ್ತಿಯ ಸಹಾಯ ದಿಂದ ಕೆಲಸ ಮಾಡುತ್ತವೆ ಎಂಬುದು ವಿಶೇಷ.

ಸಿಸಿ ಕ್ಯಾಮೆರಾ ಅಳವಡಿಕೆ: ಭದ್ರತಾ ದೃಷ್ಟಿಯಿಂದ ನಿಗದಿತ ದೂರಕ್ಕೆ ಅತೀ ಸೂಕ್ಷ್ಮ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಅವುಗಳೂ ಸೌರ ವಿದ್ಯುತ್‌ನಿಂದಲೇ ಕೆಲಸ ಮಾಡುತ್ತವೆ. ರಸ್ತೆ ಸುರಕ್ಷತೆಗಾಗಿ ಹಾಕಲಾಗಿರುವ ಎಲ್‌ಇಡಿ ಫ‌ಲಕಗಳಲ್ಲಿ ಕನ್ನಡ, ಇಂಗ್ಲಿಷ್‌, ಹಿಂದಿ ಭಾಷೆ ಪ್ರದರ್ಶನಗೊಳ್ಳಲಿದ್ದು, ಈಗಾಗಲೇ ಸಾಕಷ್ಟು ವಾಹನ ಸವಾರರು ಈ ರಸ್ತೆಯ ಮೂಲಕ ಸಂಚಾರ ಮಾಡುತ್ತಿದ್ದಾರೆ.

ಹೊಸಕೋಟೆಗೆ ಕೇವಲ 20 ನಿಮಿಷ: ಈ ಹಿಂದೆ ಇದ್ದ ರಸ್ತೆಯೂ 2 ಪಥದಾಗಿದ್ದು, ಹೊಸಕೋಟೆ ನಗರಕ್ಕೆ ಹೋಗಬೇಕಾದರೇ ಕನಿಷ್ಠ ಒಂದೂವರೆ ಗಂಟೆ ಬೇಕಿತ್ತು. ಈಗ 20 ನಿಮಿಷದಲ್ಲೇ ಹೊಸಕೋಟೆ ನಗರ ಹೊರವಲಯಕ್ಕೆ ಸೇರಿಕೊಳ್ಳಬಹುದಾಗಿದೆ.

ಸಂಚಾರ ದಟ್ಟಣೆ, ವಾಹನ ಸವಾರರಿಗಿಲ್ಲ ಕಿರಿಕಿರಿ ; ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್‌) ಸಮೀಪದಲ್ಲೇ ಇರುವ ಪಟ್ಟಣ ಮತ್ತು ತಾಲೂಕಿನ ಹಲವು ಹಳ್ಳಿಗಳ ಮಧ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 207ಈ ಹಿಂದೆ ಸಾರ್ವಜನಿಕರ ಸಂಚಾರಕ್ಕೆ ಸವಾಲಾಗಿತ್ತು. ವಾಹನ ಸವಾರರು ನಿತ್ಯ ಸಂಚಾರ ದಟ್ಟಣೆಯ ಕಿರಿಕಿರಿ ಅನುಭವಿಸುತ್ತಿದ್ದರು. ಇನ್ನು ಮುಂದೆ ಸುಗಮ ಮತ್ತು ಸುರಕ್ಷತೆಯ ಸಂಚಾರಕ್ಕೆ ಉತ್ತಮ ರಾಷ್ಟ್ರೀಯ ಹೆದ್ದಾರಿ ಪ್ರಾರಂಭವಾಗಿ ಬಹುತೇಕ ಟ್ರಾಫಿಕ್‌ ಸಮಸ್ಯೆಯಿಂದ ಹೊರಬೀಳುವಂತಾಗಿದೆ. ನಗರದಲ್ಲಿ ಹಾದು ಹೋಗುವ ರಸ್ತೆ ಅಗಲೀಕರಣ ವಾಗದೇ, ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ ಮತ್ತು ಸಂಜೆ ಗಂಟೆಗಟ್ಟಲೇ ಲಾರಿಗಳ ಸಂಚಾರ ನಡೆಯುತ್ತಲೇ ಇರುತ್ತಿತ್ತು. ಆಗ ಟ್ರಾಫಿಕ್‌ ಸಮಸ್ಯೆ ಎದುರಾಗಿ ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿತ್ತು. ಇದೀಗ 6 ಪಥದ ರಸ್ತೆ ನಿರ್ಮಾಣವಾಗಿರುವುದು ಟ್ರಾಫಿಕ್‌ ಸಮಸ್ಯೆ ಇಲ್ಲದೆ ವಾಹನ ಸವಾರರು ಮುಕ್ತವಾಗಿ ಸಂಚರಿಸಬಹುದು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.