ಘಾಟಿ ದೇಗುಲ ಹುಂಡಿಯಲ್ಲಿ 60.5 ಲಕ್ಷ ರೂ. ಸಂಗ್ರಹ
Team Udayavani, Dec 30, 2020, 12:19 PM IST
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಕ್ಷೇತ್ರದ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಗಿದ್ದು 60,56,478 ರೂ ಸಂಗ್ರಹವಾಗಿದೆ. ಕೋವಿಡ್-19 ನಂತರ ಎಣಿಕೆ ಮಾಡಿದ ಹೆಚ್ಚಿನ ಮೊತ್ತ ಇದಾಗಿದೆ.
ಈ ಬಾರಿ ಹುಂಡಿಯಲ್ಲಿ ಒಟ್ಟು 60,56,478 ರೂ. ದಾಖಲೆ ಮೊತ್ತ ಸಂಗ್ರಹವಾಗಿದೆ. ಇದರೊಂದಿಗೆ 77,500 ರೂ ಮೌಲ್ಯದ 2 ಕೆ.ಜಿ. 350 ಗ್ರಾಂ ಬೆಳ್ಳಿ, 4200 ರೂ ಮೌಲ್ಯದ 2 ಗ್ರಾಂ 500 ಮಿಲಿ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ. ಮಂಗಳವಾರ ನಡೆದ ಎಣಿಕೆ ಕಾರ್ಯದಲ್ಲಿ ಕಳೆದ ಹಲವು ತಿಂಗಳಿಂದ ಕಂಡುಬರುತ್ತಿದ್ದ ನಿಷೇಧಿತ ನೋಟು ಹಾಗೂ ವಿದೇಶಿ ನೋಟು ಪತ್ತೆಯಾಗಿಲ್ಲ..
ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು. ಮುಜರಾಯಿ ತಹಶೀಲ್ದಾರ್ ಜಿ.ಜೆ.ಹೇಮಾವತಿ, ಅಧೀಕ್ಷಕ ರಘುಉಚ್ಚಪ್ಪ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಕೃಷ್ಣಪ್ಪ, ಪ್ರಧಾನ ಅರ್ಚಕ ಗುರುರಾಜಶರ್ಮ,ಇಂಡಿಯನ್ ಓವರ್ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದ ಸಮ್ಮುಖದಲ್ಲಿ ಹುಂಡಿ ಹಣ ಎಣಿಸಲಾಯಿತು.
ಚಿನ್ನ ಕಳ್ಳತನ: ಆರೋಪಿಗಳ ಬಂಧನ :
ದೊಡ್ಡಬಳ್ಳಾಪುರ: ಕಪ್ಪು ಬಣ್ಣದ ಪಲ್ಸರ್ನಲ್ಲಿ ಬಂದು ಗ್ರಾಮೀಣ ಪ್ರದೇಶದ ಮಹಿಳೆಯರ ಗುರುಮಾಡಿ, ಅವರ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಿತ್ತು ಪರಾರಿಯಾಗುತ್ತಿದ್ದ ಸಹೋದರರನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ನೆಲಮಂಗಲ ಮಾರುತಿ ನಗರದ ನಿವಾಸಿಗಳಾದ ಅಶೋಕ್ ಸಿ. ಮತ್ತು ವಿನೋದ್ ಅಣ್ಣ- ತಮ್ಮಂದಿರಾಗಿದ್ದು, ಸರಗಳ್ಳತನದ ಕಾರ್ಯಕ್ಕೆ ಇಳಿದಿದ್ದರು. ಈ ಕುರಿತು ನಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ವಲಯದ ಐಜಿಪಿ ಸೀಮಂತ್ ಕುಮಾರ್ ಸಿಂಗ್, ಆರೋಪಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ತುಮಕೂರು, ರಾಮನಗರ, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಿವಿಧ ಪೊಲೀಸ್ ಠಾಣಸರಹದ್ದುಗಳಲ್ಲಿ ಒಂಟಿಯಾಗಿ ಓಡಾಡುವ, ದನ ಮೇಯಿಸುವ, ಹೊಲದಲ್ಲಿ ಕೆಲಸಮಾಡುವ ಮಹಿಳೆಯರು ವೃದ್ಧೆಯರ ಕತ್ತಿನಲ್ಲಿರುವ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಹೋಗುತ್ತಿದ್ದರು. ಒಟ್ಟು 26 ಪ್ರಕರಣಗಳನ್ನು ಪತ್ತೆ ಹಚ್ಚಿ 25 ಲಕ್ಷ ರೂ.ಮೌಲ್ಯದ 510 ಗ್ರಾಮ ತೂಕದ 23 ಚಿನ್ನದ ಸರ ಹಾಗೂ ಅರೋಪಿಗಳು ಕೃತ್ಯಕ್ಕೆ ಬಳಸಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಗಣೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಟಿ.ರಂಗಪ್ಪ ನೇತೃತ್ವದಲ್ಲಿ ನವೀನ್ ಕುಮಾರ್, ಗಜೇಂದ್ರ, ಬೇಬಿ ವಾಲೇಕರ್, ಶಂಕರಪ್ಪ, ಸೋಮಶೇಖರ್, ಮಂಜುನಾಥ್ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಲಾಕಾಡೌನ್ ವೇಳೆ ಮದ್ಯ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಅಧೀಕ್ಷಕ ರವಿ ಡಿ ಚನ್ನಣ್ಣನವರ್ ಕಳ್ಳರ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಿದ್ದರು. ದೊಡ್ಡಬಳ್ಳಾಪುರ ಪೊಲೀಸ್ ತಂಡ ನಾಗರಾಜ್, ಅಂಜಿ, ನವೀನ್ ಕುಮಾರ್, ಶಶಿಕುಮಾರ್ ಎಂಬುವರನ್ನ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 13 ಬಾಕ್ಸ್ ಮದ್ಯದ ಬಾಟಲಿ ವಶಕ್ಕೆ ಪಡೆಯಲಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444