![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
656 ಮಂದಿ ಸ್ವದೇಶಕ್ಕೆ, ಇಬ್ಬರಿಗೆ ಸೋಂಕು
Team Udayavani, May 24, 2020, 5:58 AM IST
![6656-reeturn](https://www.udayavani.com/wp-content/uploads/2020/05/6656-reeturn-620x284.jpg)
ದೇವನಹಳ್ಳಿ: ಲಾಕ್ಡೌನ್ ಪರಿಸ್ಥಿತಿಯಲ್ಲಿ ಜಕಾರ್ತ, ದೋಹಾ, ಕೌಲಾಲಂಪುರ, ಮಾಲೆ ದೇಶಗಳಿಂದ ಸುಮಾರು 656 ಪ್ರಯಾಣಿಕರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಇಬ್ಬರಿಗೆ ಸೋಂಕು ಕಂಡು ಬಂದಿದೆ. ಅವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ಕ್ವಾರಂಟೈನ್ಗೆ ಕಳುಹಿಸಲಾಗಿದೆ.
ಮಾಲ್ಡೀವ್ಸ್ನ ಮಾಲೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ವಿಮಾನ ನಿಲ್ದಾಣದಲ್ಲಿ ಗರ್ಭಿಣಿಯರು ಮಕ್ಕಳು ಸೇರಿ ದಂತೆ 152 ಮಂದಿ ಅನಿವಾಸಿ ಭಾರತೀ ಯರು ಬಂದಿದ್ದಾರೆ. 152 ಪ್ರಯಾಣಿಕರಲ್ಲಿ 2 ಗರ್ಭಿಣಿ ಯರು ಮತ್ತು 10 ವರ್ಷದ ಒಂದು ಮಗು ಸೇರಿದಂತೆ 132 ಪುರುಷರು ಮತ್ತು 20 ಮಹಿಳೆ ಯರು ಇದ್ದಾರೆ.
ತಜ್ಞ ವೈದ್ಯರು ಹಾಗೂ ಸಿಬ್ಬಂದಿ ಪ್ರಯಾಣಿಕರ ತಪಾಸಣೆ ನಡೆಸಿದ್ದು, ಅದರಲ್ಲಿ ಇಬ್ಬರಿಗೆ ಕೋವಿಡ್ 19 ಸೋಂಕು ಕಂಡು ಬಂದ ಹಿನ್ನೆಲೆ ಯಲ್ಲಿ ಅವರನ್ನು ಬೆಂಗಳೂರಿನ ರಾಜೀವ್ಗಾಂಧಿ ಆಸ್ಪತ್ರೆಗೆ ಕ್ವಾರಂಟೈನ್ಗೆ ಕಳಿಸಲಾಗಿದೆ. ಕತಾರ್ನ ದೋಹಾದಿಂದ 10ನೇ ಏರ್ ಇಂಡಿಯಾ ವಿಮಾನದಲ್ಲಿ ಗರ್ಭಿಣಿಯರು ಮಕ್ಕಳೂ ಸೇರಿದಂತೆ 182 ಅನಿವಾಸಿ ಭಾರತೀ ಯರು ಬಂದಿದ್ದಾರೆ.
ಒಟ್ಟು 182 ಪ್ರಯಾಣಿಕರಲ್ಲಿ 10 ವರ್ಷದ ಒಳಗಿನ ಮಕ್ಕಳು 16, 127ಪುರುಷರು ಮತ್ತು 39 ಮಹಿಳೆಯರು ಇದ್ದಾರೆ. ಪ್ರಯಾಣಿಕರಲ್ಲಿ ಕೋವಿಡ್ 19 ಸೋಂಕು ಲಕ್ಷಣಗಳು ಕಂಡು ಬಂದಿಲ್ಲ. ಮಲೇಷ್ಯಾದ ಕೌಲಾಲಂಪುರನಿಂದ 11ನೇ ವಿಮಾನದಲ್ಲಿ 108 ಮಂದಿ ಅನಿ ವಾಸಿ ಭಾರತೀಯರು ಬಂದಿದ್ದಾರೆ. ಒಟ್ಟು 108 ಪ್ರಯಾಣಿಕರಲ್ಲಿ ಒಬ್ಬ ಗರ್ಭಿಣಿ ಇಬ್ಬರು ಮಕ್ಕಳು ಸೇರಿದಂತೆ ಪುರುಷರು 80, 28 ಮಹಿಳೆಯರಿದ್ದಾರೆ.
ಇಂಡೋನೇಷ್ಯಾದ ಜಕಾರ್ತ ದಿಂದ 12ನೇ ವಿಮಾನದಲ್ಲಿ 214 ಅನಿವಾಸಿ ಭಾರತೀಯರು ಇದ್ದಾರೆ. ತಜ್ಞ ವೈದ್ಯರು ಮತ್ತು ಸಿಬ್ಬಂದಿ 214 ಪ್ರಯಾಣಿಕರ ಅರೋಗ್ಯ ತಪಾಸಣೆ ನಡೆಸಿದ್ದು, ಪ್ರಯಾಣಿಕ ರಲ್ಲಿ ಕೋವಿಡ್ 19 ಸೋಂಕು ಲಕ್ಷಣಗಳು ಕಂಡು ಬಂದಿರುವುದಿಲ್ಲ. ಡೀಸಿ ಪಿ.ಎನ್.ರವೀಂದ್ರ ಮಾತನಾಡಿ, 4 ದೇಶಗಳಿಂದ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 656 ಪ್ರಯಾ ಣಿಕರು ಬಂದಿದ್ದಾರೆ.
ಎಲ್ಲ ಪ್ರಯಾಣಿಕರು 14 ದಿನಗಳ ಕ್ವಾರಂಟೈನ್ಗೆ ಹೋಟೆಲ್ಗಳಿಗೆ ಕಳಿಸಿಕೊಡಲಾಗಿದೆ. ಸರ್ಕಾರದ ಆದೇಶದಂತೆ ಪ್ರತಿ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದರು. ಅಪರ ಜಿಲ್ಲಾಧಿ ಕಾರಿ ಜಗದೀಶ ಕೆ. ನಾಯ್ಕ, ತಹಶೀಲ್ದಾರ್ ಅಜಿತ್ ಕುಮಾರ್ ರೈ, ಪುರಸಭೆ ಮುಖ್ಯಾಧಿ ಕಾರಿ ಎ.ಎಚ್.ನಾಗ ರಾಜ್ ಮತ್ತಿತರರಿದ್ದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಕಾಂಗ್ರೆಸ್ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್ನಲ್ಲಿ ಉದ್ವಿಗ್ನ ಸ್ಥಿತಿ](https://www.udayavani.com/wp-content/uploads/2024/07/6-25-150x90.jpg)
Crime: ಕಾಂಗ್ರೆಸ್ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್ನಲ್ಲಿ ಉದ್ವಿಗ್ನ ಸ್ಥಿತಿ
![Ganja peddler: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್ಗೆ ಗುಂಡೇಟು; ಸೆರೆ](https://www.udayavani.com/wp-content/uploads/2024/07/Untitled-1-15-150x90.jpg)
Ganja peddler: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್ಗೆ ಗುಂಡೇಟು; ಸೆರೆ
![R.Ashok](https://www.udayavani.com/wp-content/uploads/2024/07/R.Ashok_-150x90.jpg)
Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್
![BRural](https://www.udayavani.com/wp-content/uploads/2024/06/BRural-150x90.jpg)
Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ
![Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್ ಅಡ್ಡೆಯಾದ ಹೆದ್ದಾರಿ!](https://www.udayavani.com/wp-content/uploads/2024/05/9-21-150x90.jpg)
Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್ ಅಡ್ಡೆಯಾದ ಹೆದ್ದಾರಿ!
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.