ಬಮೂಲ್‌ಗೆ 80 ಕೋಟಿ ರೂ. ನಷ್ಟ


Team Udayavani, Oct 28, 2020, 1:02 PM IST

br-tdy-1

ದೇವನಹಳ್ಳಿ: ಕೋವಿಡ್ ಹಿನ್ನೆಲೆಯಲ್ಲಿ ಬೆಂಗಳೂರು ಹಾಲು ಒಕ್ಕೂಟಕ್ಕೆ ಬರೋಬ್ಬರಿ 80 ಕೋಟಿ ರೂ. ನಷ್ಟವಾಗಿರುತ್ತದೆ. ಕೋವಿಡ್‌-19ರ ಸೋಂಕು ಎಲ್ಲಾ ಕ್ಷೇತ್ರಗಳಲ್ಲಿಯೂ ನಷ್ಟವನ್ನುಂಟು ಮಾಡಿದೆ ಎಂದು ಬೆಂಗಳೂರು ಹಾಲು ಒಕ್ಕೂಟದನಿರ್ದೇಶಕ ಬಿ.ಶ್ರೀನಿವಾಸ್‌ ತಿಳಿಸಿದರು.

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ಕಾರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 2019-20ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಸುಗಳಿಗೆ ಸಮತೋಲನ ಆಹಾರ ನೀಡಿದರೆ ಹಾಲಿನಲ್ಲಿ ಫ್ಯಾಟ್‌ ಅಂಶ ಹೆಚ್ಚಾಗುತ್ತದೆ ಎಂದರು.

ಸಹಕಾರ: ದಿನನಿತ್ಯ ಬೆಂಗಳೂರು ಹಾಲು ಒಕ್ಕೂಟಕ್ಕೆ 18 ಲಕ್ಷ ಲೀ.ಹಾಲು ಸಂಗ್ರಹಣೆಯಾಗುತ್ತಿದ್ದು, ಅದರಲ್ಲಿ 6-7ಲಕ್ಷ ಲೀ.ಹಾಲು ಮಾತ್ರ ಮಾರಾಟವಾಗುತ್ತಿದೆ.ನಗರ ಹಾಗೂ ಗ್ರಾಮೀಣ ಭಾಗದ ಹೋಟೆಲ್‌ಗ‌ಳಲ್ಲಿ ಶೇ.75ರಷ್ಟು ಹಾಲು ಖರೀದಿ ಕಡಿಮೆಯಾಗಿದೆ. ಆದರೂ ಸಹ ಹಾಲನ್ನು ಪುಡಿ, ಚೀಸ್‌, ಇತರೆ ಉತ್ಪನ್ನಗಳ ಬಳಕೆ ಮಾಡುತ್ತಿದ್ದರೂ ನಷ್ಟವಾಗುತ್ತಿದೆ. ಸಂಘದ ಅಭಿವೃದ್ಧಿಗೆ ಬಮೂಲ್‌ನಿಂದ ಸಿಗುವ ಎಲ್ಲಾ ರೀತಿಯ ಸಹಕಾರ  ನೀಡಲಾಗುವುದು ಎಂದು ತಿಳಿಸಿದರು.

ಬಮೂಲ್‌ನಿಂದ ಅನುಕೂಲ: ರೈತರು ರಾಸುಗಳಿಗೆ ಸಕಾಲದಲ್ಲಿ ಚಿಕಿತ್ಸೆ ಮತ್ತು ವೈದ್ಯರ ಸಲಹೆಯಂತೆ ನೋಡಿಕೊಳ್ಳಬೇಕು. ಇತರೆ ವೈದ್ಯರು ನೀಡುವ ಸಲಹೆಗಳನ್ನು ಕಡೆಗಣಿಸಬೇಕು. ಉತ್ತಮ ರಾಸುಗಳಿಗೆಆಹಾರ ಪದ್ಧತಿಯಲ್ಲಿ ಸಮತೋಲನ ಕಾಪಾಡಿಕೊಂಡರೆ, ಲಾಭ ಕಾಣಲು ಸಾಧ್ಯವಾಗುತ್ತದೆ. ಕೋವಿಡ್‌ ಇರುವುದರಿಂದಹಾಲಿನ ಉತ್ಪನ್ನಗಳ ಬೇಡಿಕೆ ಕಡಿಮೆಯಿದ್ದು, ರೈತರು ಅರ್ಥ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಬಮೂಲ್‌ನಿಂದ ಹೆಚ್ಚಿನ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.

326 ಸದಸ್ಯರು: ಕಾರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್‌ .ಭೈರೇಗೌಡ ಮಾತನಾಡಿ, ಸಂಘವು 1975ರಲ್ಲಿ ಪ್ರಾರಂಭವಾಗಿ ಇಲ್ಲಿಯವರೆಗೆ 326 ಸದಸ್ಯರನ್ನು ಹೊಂದಿದೆ. ಇದರಲ್ಲಿ 132 ಸಕ್ರಿಯ ಮತ್ತು 194 ಸಕ್ರಿಯರಲ್ಲದ ಸದಸ್ಯರು ಇದ್ದಾರೆ. 106 ಸದಸ್ಯರು ಹಾಲು ಪೂರೈಸುತ್ತಿದ್ದಾರೆ.

ಒಕ್ಕೂಟದ ನಿರ್ದೇಶಕರ ಅನುದಾನದಲ್ಲಿ ಒಂದು ಮಾದರಿ ದನದ ಕೊಟ್ಟಿಗೆ ನಿರ್ಮಾಣ ಮಾಡಲಾಗುತ್ತಿದೆ. ಒಕ್ಕೂಟದ ಸಹಕಾರದಿಂದ ರಾಸುಗಳ ಆರೋಗ್ಯ ತಪಾಸಣೆ, ಲಸಿಕೆ, ವಿಮಾ ಯೋಜನೆ, ಸಂಘದ ಸದಸ್ಯರಿಗೆ ಶುದ್ಧ ಹಾಗೂ ಗುಣಮಟ್ಟದ ಹಾಲು ಉತ್ಪಾದನೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ರಾಸುಗಳ ಆರೋಗ್ಯಕ್ಕೆ ತುರ್ತು ವೈದ್ಯಕೀಯ ಸೇವೆಯನ್ನು ಸಹ ನೀಡಲಾಗುತ್ತಿದೆ. ಸಂಘದ ಸದಸ್ಯರು ಸಂಘವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಗುಣಮಟ್ಟದ ಹಾಲು ಪೂರೈಕೆಗೆ ಒತ್ತು ನೀಡಬೇಕು ಎಂದು ಹೇಳಿದರು.

ನಿರ್ದೇಶಕರಾದ ಕೆ.ಲಕ್ಷ್ಮೀಗೌಡ, ಎಂ.ಮುನಿಕೃಷ್ಣಪ್ಪ, ಬಿ.ಎನ್‌.ಮುನೇಗೌಡ, ಕೆ.ಎಸ್‌.ಮುನೇಗೌಡ, ಕೆ.ಸುನೀಲ್‌, ಎಂ. ವೆಂಕಟೇಶ್‌, ಕಾಂತಮ್ಮ, ನಾಗರತ್ನ, ನಾರಾಯಣಮ್ಮ, ನಾರಾಯಣಸ್ವಾಮಿ, ದೇವನಹಳ್ಳಿ ಶಿಬಿರದ ಬಮೂಲ್‌ ವಿಸ್ತರಣಾಧಿಕಾರಿ ಹೆಚ್‌. ಎಂ.ಅನಿಲ್‌ಕುಮಾರ್‌, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್‌.ಮುನಿರಾಜು, ಹಾಲು ಪರೀಕ್ಷಕ ಶಶಿಕುಮಾರ ವಿ., ಸಹಾಯಕಮಂಜುನಾಥ್‌, ಗ್ರಾಪಂ ಮಾಜಿ ಅಧ್ಯಕ್ಷ ಎ.ದೇವರಾಜ್‌, ರಾಜೇಂದ್ರ, ತಾಪಂ ಮಾಜಿ ಉಪಾಧ್ಯಕ್ಷೆ ಮೀನಾಕ್ಷಿ ಮುನಿಕೃಷ್ಣಪ್ಪ, ಮುಖಂಡ ಮುನಿಕೃಷ್ಣ, ಸದಸ್ಯರು ಇದ್ದರು.

ಸಂಘವು ಒಕ್ಕೂಟ ಮತ್ತು ಗ್ರಾಮದ ವಿಎಸ್‌ಎಸ್‌ಎನ್‌, ಕೆಜಿಬಿ ಕಾರ್ಪೊರೇಷನ್‌ ಬ್ಯಾಂಕ್‌ ಗಳಲ್ಲಿ ಉಳಿತಾಯ ಖಾತೆ ಮತ್ತು ನಿಶ್ಚಿತ ಠೇವಣಿ ಹೊಂದಿದ್ದು,  ಸಂಘದ ಸದಸ್ಯರ, ಆಡಳಿತ ಮಂಡಳಿಯ, ಒಕ್ಕೂಟ ನಿರ್ದೇಶಕರು, ಅಧಿಕಾರಿ ಗಳ ಸಹಕಾರ ಮತ್ತು ಮಾರ್ಗ ದರ್ಶನದಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಎಸ್‌.ಭೈರೇಗೌಡ, ಅಧ್ಯಕ್ಷ ಕಾರಹಳ್ಳಿ ಡೇರಿ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.