Crime: ರಸ್ತೆ ವಿಚಾರಕ್ಕೆ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ


Team Udayavani, Sep 16, 2023, 10:14 AM IST

Crime: ರಸ್ತೆ ವಿಚಾರಕ್ಕೆ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

ವಿಜಯಪುರ: ಹೋಬಳಿಯ ಮಂಡಿಬೆಲೆ ಗ್ರಾಮದಲ್ಲಿ ರಸ್ತೆ ವಿಚಾರಕ್ಕೆ ನಡೆದ ಜಗಳದಲ್ಲಿ ಓರ್ವ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿದ್ದು, ಮೂವರು ತೀವ್ರ ಗಾಯಗೊಂಡಿದ್ದಾರೆ.

ಗಜೇಂದ್ರ (35) ಕೊಲೆಯಾದ ವ್ಯಕ್ತಿ. ಇತರೆ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಂತರ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ವರ್ಷದ ಹಿಂದೆ ಮನೆ ಮುಂದಿನ ರಸ್ತೆ ವಿಚಾರವಾಗಿ ಪಕ್ಕದ ಮನೆಯ ರಾಜಣ್ಣ ಹಾಗೂ ಗಜೇಂದ್ರ ನಡುವೆ ಗಲಾಟೆಯಾಗಿತ್ತು. ರಾಜಣ್ಣ ಮತ್ತು ಅವರ ಮಕ್ಕಳಾದ ಮೋಹನ್‌, ವಿಜಯ್‌ ಎಂಬುವವರ ಮೇಲೆ ಗಜೇಂದ್ರ ಅವರ ಕುಟುಂಬದವರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಅಂದಿನಿಂದ ರಾಜಣ್ಣ, ಮೋಹನ್‌, ವಿಜಯ್‌ ಹಾಗೂ ಗಜೇಂದ್ರ ಕುಟುಂಬದ ನಡುವೆ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಲು ಗುರುವಾರ ಗಜೇಂದ್ರ ಇದೇ ಗ್ರಾಮದ ಮೂರ್ತಿ ಹಾಗೂ ಪುರ ಗ್ರಾಮದ ಮಂಜುನಾಥ್‌, ಸುರೇಶ್‌ ಅವರನ್ನು ಕರೆಯಿಸಿಕೊಂಡಿದ್ದರು. ರಾತ್ರಿ ಮೋಹನ್‌ ಹಾಗೂ ಗಜೇಂದ್ರ ನಡುವೆ ಮತ್ತೆ ಜಗಳ ಶುರು ಆಗಿದೆ. ಜಗಳ ಪರಸ್ಪರ ಹೊಡೆದಾಟಕ್ಕೆ ತಿರುಗಿದೆ.

‘ನಾಗನಾಯಕನಹಳ್ಳಿಯಿಂದ ಕಾರಿನಲ್ಲಿ ರಾಜಣ್ಣ ಅವರ ಸಂಬಂಧಿಕರನ್ನು ಕರೆಯಿಸಿಕೊಂಡಿದ್ದರು. ಅವರು ಬಂದು ಕಾರಿನಲ್ಲೇ ಕುಳಿತಿದ್ದರು. ಮೋಹನ್‌, ವಿಜಯ್‌ ಎಂಬುವವರು ಗಜೇಂದ್ರನಿಗೆ ಹೊಡೆಯುವಾಗ ಕಾರಿನಲ್ಲಿದ್ದ ಶ್ರೀನಿವಾಸ್‌, ಮುಖೇಶ್‌, ಪ್ರದೀಪ್‌, ಲಿಖೀತ್‌, ಇತರರು ಮಾರಕಾಸ್ತ್ರಗಳನ್ನು ತೆಗೆದುಕೊಂಡು ಕಾರಿನಿಂದ ಇಳಿದು ಬಂದು ನನ್ನ ಮಗನ ಮೇಲೆ ಹಲ್ಲೆ ನಡೆಸಿದರು ಎಂದು ಮೃತ ಗಜೇಂದ್ರ ತಂದೆ ಕೃಷ್ಣಪ್ಪ ಮನವಿಯಲ್ಲಿ ತಿಳಿಸಿದ್ದಾರೆ.

ಗಜೇಂದ್ರನ ತಲೆಯ ಹಿಂಭಾಗಕ್ಕೆ ಬಲವಾಗಿ ಹೊಡೆದಿದ್ದಾರೆ. ಗಜೇಂದ್ರ ಕೂಗಿಕೊಂಡು ಕೆಳಗೆ ಬಿದ್ದಿದ್ದಾನೆ. ಆಗ ಮೂರ್ತಿ, ಮಂಜುನಾಥ್‌, ಸುರೇಶ್‌ ಅವರು ಜಗಳ ಬಿಡಿಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಜೇಂದ್ರನನ್ನು ವಿಜಯಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದೆವು. ಅಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ತೆರಳಿದಾಗ, ಅಲ್ಲಿನ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಗಜೇಂದ್ರ ಅವರ ತಂದೆ ಕೃಷ್ಣಪ್ಪ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.