ಸಬೂಬು ನೀಡದೆ ಕಾರ್ಯನಿರ್ವಹಿಸಿ: ಸಿಇಓ ತಾಕೀತು


Team Udayavani, Sep 15, 2019, 3:00 AM IST

saboobu

ದೊಡ್ಡಬಳ್ಳಾಪುರ: ಸರ್ಕಾರದ ಯೋಜನೆಗಳು ಪ್ರಗತಿಯಲ್ಲಿ ಹಿಂದುಳಿದಿದ್ದು, ಯೋಜನೆಗಳ ಯಶಸ್ವಿಗೆ ಅಧಿಕಾರಿಗಳ ಬೆಂಬಲ ಅಗತ್ಯ ಎಂದು ಜಿ.ಪಂ ಸಿಇಒ ಎನ್‌.ಎಂ.ನಾಗರಾಜ್‌ ಹೇಳಿದರು. ನಗರದ ತಾಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಯಾವುದೇ ಸಬೂಬು ನೀಡದೆ ನಿಗದಿತ ಸಮಯದ ಒಳಗಾಗಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಎಚ್ಚರಿಕೆ ನೀಡಿದರು.

ಜಲಾಮೃತ ಯಶಸ್ವಿಗೊಳಿಸಿ: ಯಾವುದೇ ಯೋಜನೆ ಅನುಷ್ಠಾನಕ್ಕೂ ಮುನ್ನ ನೀರಿನ ಉಳಿವಿಗೆ, ಅಂತರ್ಜಲ ಹೆಚ್ಚಳಕ್ಕೆ ಸಾಧ್ಯವಾಗುವಂತಹ ಕಾರ್ಯಕ್ರಮ ಕೈಗೊಳ್ಳಬೇಕಿದ್ದು, ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಗೋ ಕಟ್ಟೆ, ಕಲ್ಯಾಣಿ, ಕೆರೆ, ಕುಂಟೆಗಳ ಅಭಿವೃದ್ಧಿ ಕೃಷಿ ಹೊಂಡ ನಿರ್ಮಾಣ ಮಾಡಬೇಕು. ಸರ್ಕಾರಿ ಶಾಲೆ ಕಟ್ಟಡದ ಆವರಣದಲ್ಲಿ ಗಿಡ ನೆಟ್ಟು ಮಳೆ ನೀರು ಮಳೆ ಕೊಯ್ಲು ಪದ್ದತಿ ಅಳವಡಿಕೆಗೆ ಮುಂದಾಗಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳಿಂದ ತ್ಯಾಜ್ಯವಾಗಿ ಹರಿದು ಹೋಗುವ ನೀರನ್ನು ಇಂಗು ಗುಂಡಿ ಸ್ಥಾಪಿಸಿ ಜಲಾಮೃತ ಯೋಜನೆ ಯಶಸ್ವಿಗೊಳಿಸಬೇಕು ಎಂದು ಸಲಹೆ ನೀಡಿದರು.

ಶಾಲೆಗಳ ವ್ಯಾಪ್ತಿಯಲ್ಲಿ ತರಕಾರಿ ಬೆಳೆಸಿ: ಶಾಲಾ ಮಕ್ಕಳಿಗೆ ಅನ್ನಭಾಗ್ಯ ಯೋಜನೆ ಹಾಗೂ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ, ಬಾಣಂತಿಯರಿಗೆ ಮಾತೃ ಪೂರ್ಣ ಯೋಜನೆ ಮೂಲಕ ನೀಡಲಾಗುವ ಗುಣಮಟ್ಟದ ಆಹಾರಕ್ಕೆ ಸ್ಥಳೀಯವಾಗಿ ತರಕಾರಿ ಬೆಳೆಯಲು ಅವಕಾಶ ಕಲ್ಪಿಸಿ ಗುಣಮಟ್ಟದ ತರಕಾರಿಯಿಂದ ಶಾಲಾ ಮಟ್ಟದಲ್ಲಿಯೇ ಅಪೌಷ್ಟಿಕತೆ ದೂರಮಾಡಬೇಕಿದೆ ಎಂದರು.

ನಿರ್ಮಾಣವಾಗದ ಮನೆ: ತಾಲೂಕಿನ ಅನೇಕ ಗ್ರಾಮಗಳಲ್ಲಿ ವಸತಿ ಯೋಜನೆಗೆ ನೀಡಲಾದ ಸುಮಾರು 500 ಮನೆಗಳ ನಿರ್ಮಾಣ ಕಾರ್ಯರಾಂಭವಾಗಿಲ್ಲ. ಇದರಿಂದ ಯೋಜನೆ ಯಶಸ್ವಿಯಾಗಲು ಸಾಧ್ಯವಿಲ್ಲ. ಮನೆ ಇದ್ದರು ಸಹ ಮನೆ ಇಲ್ಲದವರ ಪಟ್ಟಿಯಲ್ಲಿ ಹೆಸರು ಸೇರಿಸಿರುವುದರಿಂದ ಯೋಜನೆಗೆ ಹಿನ್ನಡೆಯಾಗಿದೆ. ಈ ರೀತಿ ಉಂಟಾಗದಂತೆ ನಿಗಾವಹಿಸಬೇಕೆಂದರು.ಸಭೆಯಲ್ಲಿ ಉಪ ಕಾರ್ಯದರ್ಶಿ ಕರಿಯಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು,ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಜರಿದ್ದರು.

ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಹರಿದು ಹೋಗುವ ತ್ಯಾಜ್ಯ ನೀರನ್ನು ತಪಾಸಣೆಗೆ ಕಳಿಸಲಾಗಿದ್ದು, ವರದಿ ಬಂದ ನಂತರ ಹಿಂಗುಗುಂಡಿ ಸ್ಥಾಪನೆಗೆ ಕ್ರಮ ಗೈಗೊಳ್ಳಲಾಗುವುದು.
-ದ್ಯಾಮಪ್ಪ, ತಾಪಂ ಸಿಇಒ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.