ಗಂಗರಕಾಲದ ಸ್ಮಾರಕಗಳ ರಕ್ಷಣೆಗೆ ಕ್ರಮ


Team Udayavani, Oct 5, 2020, 2:56 PM IST

br-tdy-2

ತ್ಯಾಮಗೊಂಡ್ಲು ಹೋಬಳಿ ಮಣ್ಣೇ ಗ್ರಾಮಕ್ಕೆ ಪುರಾತತ್ವ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ನೆಲಮಂಗಲ: ಗಂಗರ ಕಾಲದ ‌ ಐತಿಹಾಸಿಕ ‌ ದೇವಾಲಯ ಹಾಗೂ ಶಾಸನಗಳು ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಮಣ್ಣೆ ಗ್ರಾಮಕ್ಕೆ ಪುರಾತತ್ವ ಇಲಾಖೆ ಅಧೀಕ್ಷಕ ‌ ಪುರಾತತ್ವ ತಜ್ಞ ಡಾ.ಶಿವಕಾಂತ್‌ ಭಾಜಪೇಯಿ ಮತ್ತು ರಾಜ್ಯ ಪುರಾತತ್ವ ಇಲಾಖೆ ಅಧಿಕಾರಿ ಡಾ.ಆರ್‌. ಗೋಪಾಲ್‌ ಸ್ಥಳ ಪರಿಶೀಲನೆ ನಡೆಸಿದರು.

ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ಮಣ್ಣೇ ಗ್ರಾಮಕ್ಕೆ ಪುರಾತತ್ವ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಇಲ್ಲಿಕೈಗೊಳ್ಳಬಹುದಾದಜೀರ್ಣೋದ್ಧಾರ ‌ಮಾಡುವ ಕುರಿತು ಚರ್ಚೆ ಮಾಡಿದರು. ಭಾರತ ಸರಕಾರದ ಪುರಾತತ್ವ ಇಲಾಖೆಯ ಅಧೀಕ್ಷಕ ಪುರಾತತ್ವ ತಜ್ಞ ಡಾ.ಶಿವಕಾಂತ್‌ ಭಾಜಪೇಯಿ ಮಾತನಾಡಿ, ಗ್ರಾಮದಲ್ಲಿ ಗಂಗರ ಕಾಲದ ಮಹತ್ವದ ಕುರುಹುಗಳಿವೆ. ಅದರೆ ಇದುವರೆಗೂ ಇದರ ಸಂರಕ್ಷಣೆ ಬಗ್ಗೆ ಯಾರೂ ಗಮನ ಹರಿಸದಿರುವುದು ಸೊಜಿಗದ ಸಂಗತಿಯಾಗಿದೆ. ನಮ್ಮ ಇಲಾಖೆ ವತಿಯಿಂದ ಮುಂದಿನ ದಿನಗಳಲ್ಲಿ ಇಲ್ಲಿನ ದೇವಲಾಯ, ಶಾಸನಗಳ ರಕ್ಷಣೆಯ ಜೊತೆಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಕೆಲವು ಪ್ರದೇಶದಲ್ಲಿ ಉತ್ಖನನ ಮಾಡುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಕೆಲಸ ಪ್ರಾರಂಭ ಮಾಡಲಾಗುತ್ತದೆ. ಅದ ಇಲ್ಲಿನ ಸ್ಥಳೀಯರು ಗಮನಹರಿಸಿ ಗ್ರಾಮದ ‌ ಇತಿಹಾಸವನ್ನು ರಕ್ಷಿಸುವಲ್ಲಿ ಆಸಕ್ತಿ ತೋರಿಸಬೇಕು ಎಂದರು.

ಇಲಾಖೆಯ ವತಿಯಿಂದ ಕೆಲಸಲ ಶುರು ಮಾಡಲು ಸ್ಥಳೀಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ದೇವಾಲಯಗಳ ಸುತ್ತಲಿನ ಪ್ರದೇಶ ಯಾವುದೇ ತಕಾರರು ಇಲ್ಲವೆಂದು ಪುರಾತತ್ವ ಇಲಾಖೆಗೆ ವರ್ಗಾಹಿಸಿದರೆ, ಅದ‌ಷ್ಟು ಬೇಗ ನಮ್ಮ ಕೆಲಸ ಆರಂಭಿಸಬಹದು. ಇಲ್ಲಿನ ಬಹುತೇಕ ಕಟ್ಟಡಗಳು ಶಿಥಿಲಗೊಂಡಿವೆ ಸ್ಥಳೀಯ ಅಧಿಕಾರಿಗಳು ಬೇಗ ಕಾರ್ಯಪ್ರವೃತರಾಗಬೇಕು ಎಂದರು.

ಛಾಯಚಿತ್ರ ಪ್ರದರ್ಶನ: ಕೇಂದ್ರ ಮತ್ತು ರಾಜ್ಯ ಸರಕಾರದ ‌ ಪುರಾತತ್ವ ಇಲಾಖೆಯ ಸಹಯೋಗದಲ್ಲಿ ಗಂಗರ ‌ ರಾಜಧಾನಿಯಾಗಿದ್ದ ಮಾನ್ಯಪುರ (ಮಣ್ಣೆ) ಗ್ರಾಮದಲ್ಲಿ ಲಭ್ಯವಿರುವ ದೇವಾಲಯಗಳು, ಶಾಸನಗಳು, ವೀರಗಲ್ಲುಗಳು ಮತ್ತು ವಿಗ್ರಹಗಳ ‌ ಪೋಟೊಗಳನ್ನು ಒಳಗೊಂಡತೆ ಒಂದು ದಿನದ ‌ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗುವುದು ಎಂದು ಭಾಜಪೇಯಿ ತಿಳಿಸಿದರು.

ಕಾನೂನು ಕ್ರಮ: ಮಣ್ಣೆ ಗ್ರಾಮದಲ್ಲಿದ್ದ ವಿಜಯನಗರ‌ ಸಾಮ್ರಾಜ್ಯದ ಮಾಹಿತಿ ಒಳಗೊಂಡಿರುವ ಎರಡು ಶಾಸನಗಳ ಶಿಲಾಶಾಸನವನ್ನು ರಸ್ತೆ ಮಾಡುವ ನೆಪದಲ್ಲಿ ಹೊಡೆದು ಹಾಕಿರುವ ವ್ಯಕ್ತಿಗಳ ವಿರುದ್ಧ ಸ್ಥಳೀಯ ಪೋಲಿಸ್‌ ಠಾಣೆಯಲ್ಲಿ ದೂರು ದಾಖಲಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ರಾಜ್ಯ ಪುರಾತತ್ವ ಇಲಾಖೆಯ ಡಾ.ಆರ್‌ ಗೋಪಾಲ್‌ ತಿಳಸಿದರು.

ಇತಿಹಾಸ ‌ ತಜ್ಞ ಡಾ.ಹೆಚ್‌.ಎಸ್‌ ಗೋಪಾಲ್‌ ರಾವ್‌ ಮಾತನಾಡಿ, ಇಲ್ಲಿನ ಸಂಪೂರ್ಣ ಇತಿಹಾಸ ಒಳಗೊಂಡ ಸುಮಾರು 250 ಪುಟಗಳ ‌ ಪುಸ್ತಕ ‌ಬರೆಯುತ್ತಿದ್ದೇನೆ. ಇಲ್ಲಿನ ಎಲ್ಲಾ ಐತಿಹಾಸಕ ಕಟ್ಟಡಗಳು ಸಂರಕ್ಷಿಸಬೇಕು ಮುಂದಿ® ‌ ಪೀಳಿಗೆಗೆ ಇತಿಹಾಸದ ಕುರುಹುಗಳನ್ನು ಉಳಿಸಬೇಕು ಎಂದರು.

ಗಂಗರ ಕಾಲದ ಕಪಿಲೇಶ್ವರ ದೇವಾಲಯ, ಅಕ್ಕ ತಂಗಿಯರ ಗುಡಿ ಮತ್ತು ಜಿನ ಬಸದಿ (ಸೂಳೆಯರ ಗುಡಿ) ಒಳ ಗೊಂಡಂತೆ ಇತರೆ ಐತಿಹಾಸಿಕಕಟ್ಟಡಗಳಿರುವ ಪ್ರದೇಶದಲ್ಲಿ ಸರ್ವೆ ಕಾರ್ಯ ಕೈಗೊಂಡು ಒತ್ತುವರಿಯಾಗಿದ್ದರೆ, ಜಾಗ ವಶಪಡಿಸಿಕೊಂಡು ಐತಿಹಾಸಿಕಕಟ್ಟಡಗಳ ಸಂರಕ್ಷಣೆಗೆ ಅಗತ್ಯವಾದಕ್ರಮಕೈಗೊಳ್ಳಲಾಗುತ್ತದೆ. ಶ್ರೀನಿವಾಸ್‌, ತಹಶೀಲ್ದಾರ್‌

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.