ಶನಿಮಹಾತ್ಮ ದೇಗುಲ ಪ್ರವೇಶ ನಿರ್ಬಂಧ
Team Udayavani, Jul 24, 2020, 7:30 AM IST
ದೊಡ್ಡಬಳ್ಳಾಪುರ: ಕೋವಿಡ್-19 ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಮಧುರೆ ಹೋಬಳಿ ಕನಸವಾಡಿಯ ಇತಿಹಾಸ ಪ್ರಸಿದ್ಧ ಶನಿಮಹಾತ್ಮ ಸ್ವಾಮಿ ದೇವಾಲಯಕ್ಕೆ ಈ ಬಾರಿ ಶ್ರಾವಣ ಶನಿವಾರಗಳಂದು ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಶ್ರಾವಣ ಮಾಸದ ಶನಿವಾರ ಹಾಗೂ ಭಾನುವಾರಗಳಂದು ಇಲ್ಲಿನ ಶನಿಮಹಾತ್ಮ ದೇವಾಲಯಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ದರ್ಶನಕ್ಕೆ ಆಗಮಿಸುತ್ತಿದ್ದರು. ಆದರೆ ಈ ಬಾರಿ ಕೋವಿಡ್-19 ಹಿನ್ನೆಲೆಯಲ್ಲಿ ದೇವಾಲಯಕ್ಕೆ ಜು.25ರಿಂದ ಆ.15ರವರೆಗೆ ಪ್ರತಿ ಶ್ರಾವಣ ಶನಿವಾರ, ಭಾನುವಾರ ಮಾತ್ರ ಭಕ್ತಾದಿಗಳು, ಸಾರ್ವಜನಿಕರಿಗೆ ಪ್ರವೇಶ, ದೇವರ ದರ್ಶನ. ಈ ದಿನಗಳಂದು ಜಾತ್ರೆ, ಉತ್ಸವ ರದ್ದುಪಡಿಸಿ, ಜಿಲ್ಲಾಧಿಕಾರಿಗಳು ಆದೇಶ ನೀಡಿರುವುದನ್ನು ಪಾಲಿಸಲಾಗುವುದು. ಆದರೆ ಶ್ರಾವಣ ಮಾಸದಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಎಂದಿನಂತೆ ಭಕ್ತಾದಿಗಳಿಗೆ ದರ್ಶನವಿದ್ದು, ಕೋವಿಡ್-19 ಮಾರ್ಗಸೂಚಿ ಪಾಲಿಸಿ, ದೇವರ ದರ್ಶನ ಪಡೆಯಬಹುದಾಗಿದೆ ಎಂದು ಶನಿಮಹಾತ್ಮಸ್ವಾಮಿ ದೇವಸ್ಥಾನ ಕಾರ್ಯಕಾರಿ ಸಮಿತಿ ಅಧ್ಯಕ್ಷ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ