ಆದಾಯ ಕ್ರೋಢೀಕರಣಕ್ಕೆ ಆದ್ಯತೆ ನೀಡಲು ಸಲಹೆ


Team Udayavani, Feb 13, 2021, 1:46 PM IST

ಆದಾಯ ಕ್ರೋಢೀಕರಣಕ್ಕೆ ಆದ್ಯತೆ ನೀಡಲು ಸಲಹೆ

ದೊಡ್ಡಬಳ್ಳಾಪುರ: ನಗರದಲ್ಲಿ ತುರ್ತಾಗಿ ಆಗಬೇಕಿರುವ ವಿದ್ಯುತ್‌ ಚಿತಾಗಾರ, ಮಳೆ ನೀರು ಸಂಗ್ರಹಣೆ, ಒಳಚರಂಡಿ ನೀರಿನ ಶುದ್ಧೀಕರಣ, ಕಸಾಯಿಖಾನೆ ಸ್ಥಳಾಂತರಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಬೇಕು ಎನ್ನುವ ಅಭಿಪ್ರಾಯ, ನಗರದ ಡಾ.ರಾಜ್‌ಕುಮಾರ್‌ ಕಲಾಮಂದಿರದಲ್ಲಿ ನಗರಸಭೆ ಪೌರಾಯುಕ್ತ ರಮೇಶ್‌ ಎಸ್‌.ಸುಣಗಾರ್‌ ಅಧ್ಯಕ್ಷತೆಯಲ್ಲಿ ನಡೆದ ಬಜೆಟ್‌ ಪೂರ್ವ ಸಾರ್ವಜನಿಕ ಸಮಾಲೋಚನೆ ಸಭೆಯಲ್ಲಿ ಕೇಳಿ ಬಂದವು.

ನಗರಸಭೆಗೆ ಆದಾಯ ತರುವ ಪ್ರಮುಖ ಮೂಲಗಳಾದ ವಾಣಿಜ್ಯ ಉದ್ಯಮ, ಪರವಾನಗಿ, ಆಸ್ತಿ ತೆರಿಗೆ, ಜಾಹೀರಾತು ಶುಲ್ಕಗಳ ಸಂಗ್ರಹದ ಕಡೆಗೆ ಆದ್ಯತೆ ನೀಡಿಬೇಕು ಎಂಬ ಅಭಿಪ್ರಾಯ ವ್ಯಕ್ತವಾದವು. ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು, ನಗರಸಭೆ ಮಾಜಿ ಸದಸ್ಯರು ಮಾತನಾಡಿ, ನಗರಸಭೆಯಲ್ಲಿ ಸ್ವತ್ಛತೆ ವಾಹನಗಳ ನಿರ್ವಹಣೆ, ಬಿಡಾಡಿ ರಾಸುಗಳ, ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಇವುಗಳ ನಿಯಂತ್ರಣಕ್ಕೆ ಬಜೆಟ್‌ನಲ್ಲಿ ಹಣ ಮೀಸಲಿಟ್ಟು ಕೆಲಸ ಮಾಡಬೇಕು. ಉದ್ದಿಮೆ ತೆರಿಗೆ ಕಡ್ಡಾಯಗೊಳಿಸಬೇಕು. ನಗರಸಭೆ ಸ್ವತ್ತು ಉಳಿಸಿಕೊಳ್ಳಲು ನಗರಸಭೆ ಜಾಗಗಳಲ್ಲಿ ವಾಣಿಜ್ಯ ಮಳಿಗೆ ನಿರ್ಮಿಸುವ ಮೂಲಕ ಆದಾಯ ಬರಲಿದೆ ಎಂದು ಸಲಹೆ ನೀಡಿದರು.

ಹೊಸ ಮಾರುಕಟ್ಟೆ ಸಂಕೀರ್ಣ ಪೂರ್ಣಗೊಳಿಸಿ: ನಗರದ ಪ್ರಮುಖ ವೃತ್ತಗಳಲ್ಲಿ ಸಿಸಿಟೀವಿ ಅಳವಡಿಕೆ, ನಾಗರಕೆರೆ ಅಭಿವೃದ್ಧಿ, ಉದ್ಯಾನವನ ಅಭಿವೃದ್ಧಿಗೆ ಹಣ ಮೀಸಲಿಡಬೇಕು. ಹೊಸ ಮಾರುಕಟ್ಟೆ ಸಂಕೀರ್ಣ ಪೂರ್ಣಗೊಳಿಸಬೇಕು. ನೀರು ಶುದ್ಧೀಕರಣಕ್ಕೆ ಯಾಂತ್ರಿಕ ವಿಧಾನ ಅಳವಡಿಸಬೇಕು. ಕೊಂಗಾಡಿಯಪ್ಪ ಅವರ ಹೆಸರಿನಲ್ಲಿ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ, ಕ್ರೀಡಾ ಹಾಗೂ ಸಾಂಸ್ಕೃತಿಕಕಾರ್ಯಕ್ರಮಗಳಿಗೆ ಅನುದಾನ, ಪ್ರಮುಖ ವೃತ್ತಗಳಲ್ಲಿ ಅಂಬೇಡ್ಕರ್‌, ಕೊಂಗಾಡಿಯಪ್ಪ ಮೊದಲಾದ ಮಹನೀಯರ ಪುತ್ಥಳಿ ಸ್ಥಾಪನೆ ಮಾಡಬೇಕು ಎನ್ನುವ ಅಭಿಪ್ರಾಯಗಳು ಕೇಳಿ ಬಂದವು.

ಉಳಿತಾಯದ ಬಜೆಟ್‌: ನಗರಸಭೆ ಮುಖ್ಯ ಲೆಕ್ಕಾಧಿಕಾರಿ ನಂದೀಶ್‌ ಬಜೆಟ್‌ ವಿವರ ಮಂಡಿಸಿ, ನಗರಸಭೆ ಪ್ರಸಕ್ತ ಸಾಲಿನ ಪರಿಷ್ಕೃತ ಅಂದಾಜು ಆಯವ್ಯಯದಲ್ಲಿ ಆದಾಯ 44.47 ಕೋಟಿ ರೂ ನಿರೀಕ್ಷಿಸಲಾಗಿದ್ದು, ಇದರಲ್ಲಿ ಖರ್ಚು 30.89 ಕೋಟಿ ರೂ.ಗಳಾಗಿದೆ. 13.58 ಕೋಟಿ ರೂ. ಉಳಿತಾಯ ನಿರೀಕ್ಷಿಸಲಾಗಿದೆ ಎಂದರು. ಹಿಂದಿನ ಸಾಲಿನ ವಾಸ್ತವಿಕ ಲೆಕ್ಕದಲ್ಲಿ ಆದಾಯ 40.89 ಕೋಟಿ ರೂ. ಇದರಲ್ಲಿ ಖರ್ಚು 23.01 ಕೋಟಿ ರೂ.ಗಳಾಗಿದೆ. 17.87 ಕೋಟಿ ರೂ. ಉಳಿತಾಯವಾಗಿದೆ. 2020ರ ಡಿಸೆಂಬರ್‌ಅಂತ್ಯದವರೆಗೆ 34.05 ಕೋಟಿ ರೂ. ಕ್ರೋಢೀಕರಣವಾಗಿದ್ದು, ಇದರಲ್ಲಿ ಖರ್ಚಾಗಿರುವುದು 17.01 ಕೋಟಿ ರೂ. ಆಗಿದೆ. ಡಿಸೆಂಬರ್‌ ಅಂತ್ಯಕ್ಕೆ ಉಳಿಕೆ 17.03 ಕೋಟಿ ರೂ. ಆಗಿದೆ ಎಂದು ತಿಳಿಸಿದರು.

ಪೌರಾಯುಕ್ತ ರಮೇಶ್‌ ಎಸ್‌.ಸುಣಗಾರ್‌ ಮಾತನಾಡಿ, ಸಾರ್ವಜನಿಕರ ಸಲಹೆ ಸೂಚನೆ ಪರಿಗಣಿಸಿ ಆದಷ್ಟು ಅನುಷ್ಠಾನಕ್ಕೆ ತರಲು ಕ್ರಮ ವಹಿಸಲಾಗುವುದು. ತೆರಿಗೆ ಸಂಗ್ರಹಕ್ಕೆ ನಿರ್ವಾಹಕರನ್ನು ನೇಮಿಸಿಕೊಂಡಿದ್ದು, 2 ತಿಂಗಳಲ್ಲಿ ಸಮಸ್ಯೆ ಬಗೆಹರಿಯಲಿದೆ. ಕಸ ನಿರ್ವಹಣೆ, ನೈರ್ಮಲ್ಯಕ್ಕೆ ಒತ್ತು ನೀಡಲಾಗುವುದು. ಬಜೆಟ್‌ ನಲ್ಲಿ ವ್ಯಕ್ತವಾದ ಸಲಹೆಗಳನ್ನು ಡೀಸಿಯೊಂದಿಗೆ ಚರ್ಚಿಸಲಾಗುವುದು ಎಂದರು.

ನಗರಸಭೆ ಎಇಇ ಶೇಖ್‌ ಫಿರೋಜ್‌ ಸೇರಿದಂತೆ ನಗರಸಭೆ ವಿವಿಧ ವಿಭಾಗದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಮಾಜಿ ನಗರಸಭಾ ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.