ಕೃಷಿ ಪದವೀಧರರು ಪಾರಂಪರಿಕ ಕೃಷಿ ಅರಿಯಲಿ


Team Udayavani, Aug 5, 2019, 3:00 AM IST

krushi-pada

ದೊಡ್ಡಬಳ್ಳಾಪುರ: ಪಾರಂಪರಿಕ ಕೃಷಿಯ ಜ್ಞಾನ ಹಾಗೂ ಅನುಭವ, ಸಮೃದ್ಧ ಫ‌ಸಲಿಗಾಗಿ ರೈತರು ಕೈಗೊಳ್ಳುವ ಕ್ರಮಗಳನ್ನು ಅರಿತುಕೊಳ್ಳಲಿ ಎಂಬ ಉದ್ದೇಶದಿಂದ ಕೃಷಿ ಪದವಿ ವಿದ್ಯಾರ್ಥಿಗಳಿಗೆ 4 ತಿಂಗಳ ಗ್ರಾಮ ವಾಸ್ತವ್ಯ ಶಿಬಿರ ಆಯೋಜಿಸಲಾಗುತ್ತದೆ. ಈ ಅನುಭವ ಜೀವನದುದ್ದಕ್ಕೂ ಉಪಯೋಗವಾಗುತ್ತದೆ ಎಂದು ರೈ ತಾಂತ್ರಿಕ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ.ಮುರಾರಿನಾಯ ಕ್‌ ಹೇಳಿದರು.

ತಾಲೂಕಿನ ನಾಗಸಂದ್ರ ಗ್ರಾಮದಲ್ಲಿ ರೈ ತಾಂತ್ರಿಕಾ ವಿಶ್ವವಿದ್ಯಾಲಯದ ಅಂತಿಮ ವರ್ಷದ ಕೃಷಿ ವಿಜ್ಞಾನ ಪದವಿ ವಿದ್ಯಾರ್ಥಿಗಳಿಂದ ನಡೆಯುತ್ತಿರುವ ನಾಲ್ಕು ತಿಂಗಳ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ರೈತರ ಸ್ಥಿತಿಗತಿ ಅರಿಯಲು ಸಹಕಾರಿ: ಗ್ರಾಮದಲ್ಲಿಯೇ ಇದ್ದು ರೈತರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಅರಿಯಲು ಸಹಕಾರಿಯಾಗಲಿದೆ. ರೈತರಲ್ಲಿ ಇರುವ ಪಾರಂಪರಿಕ ಕೃಷಿ ಜ್ಞಾನವನ್ನು ಕಲಿಯಬೇಕು. ಅಧುನಿಕ ಕೃಷಿಯೊಂದಿಗೆ ರೈತರ ಜ್ಞಾನವನ್ನು ಸಮ್ಮಿಲನಗೊಳಿಸಬೇಕು. ಹಸಿರು ಕ್ರಾಂತಿಯ ನಂತರ ದೇಶದಲ್ಲಿ ಆಹಾರದ ಕೊರತೆ ನೀಗಿದೆ. ಆದರೆ ಮಣ್ಣಿನ ಫಲವತ್ತತೆ, ನಾಟಿ ಬೀಜಗಳು ಕಣ್ಮರೆಯಾಗುತ್ತಿವೆ. ಹೀಗಾಗಿ ರೈತರು ಈಗ ಬೀಜಗಳಿಗಾಗಿ ಕಂಪನಿಗಳ ಮೇಲೆ ಅವಲಂಬಿತರಾಗುವಂತಾಗಿದೆ ಎಂದರು.

ಬೆಳೆ ಬೆಳೆಯುವ ವಿಧಾನ ತಿಳಿದುಕೊಳ್ಳಿ: ರೈ ತಾಂತ್ರಿಕಾ ವಿಶ್ವವಿದ್ಯಾಲಯದ ಹಿರಿಯ ವಿಜ್ಞಾನಿ ಡಾ.ಸ್ವಾಮಿ ಮಾತನಾಡಿ, ದೊಡ್ಡಬಳ್ಳಾಪುರ ತಾಲೂಕು ಭೌಗೋಳಿಕವಾಗಿ ಅತ್ಯಂತ ಆಯಕಟ್ಟಿನ ಸ್ಥಳದಲ್ಲಿದೆ. ಹೀಗಾಗಿಯೇ ಇಲ್ಲಿ ವೈವಿಧ್ಯಮಯ ಹಣ್ಣು, ತರಕಾರಿ ಹಾಗೂ ಆಹಾರ ಧಾನ್ಯಗಳನ್ನು ಬೆಳೆಯಲು ಉತ್ತಮ ವಾತಾವರಣ ಇದೆ. ಇದನ್ನು ಇಲ್ಲಿನ ರೈತರು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಉತ್ತಮ ಬೆಳೆಯನ್ನು ಬೆಳೆಯುತ್ತಿದ್ದಾರೆ. ಹನಿ ನೀರನ್ನು ವ್ಯರ್ಥ ಮಾಡದೆ ಬೆಳೆಗಳನ್ನು ಬೆಳೆಯುವ ವಿಧಾನಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.

ಹೋರಾಟದಿಂದ ಕೆಲ ಬದಲಾವಣೆ: ರಾಜ್ಯ ರೈತ ಸಂಘದ ಮುಖಂಡ ಪ್ರಸನ್ನ ಮಾತನಾಡಿ, ರೈತ ಸಂಘ ನಡೆಸಿರುವ ಹಲವಾರು ಹೋರಾಟಗಳ ಫಲವಾಗಿ ಇಂದು ಸರ್ಕಾರಗಳು ತಮ್ಮ ನೀತಿಗಳಲ್ಲಿ ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಿಕೊಂಡಿವೆ. ಆದರೆ ಜಾಗತೀಕರಣದ ನಂತರ ಬರುತ್ತಿರುವ ಬಹುತೇಕ ಕಾನೂನು, ನೀತಿಗಳು ರೈತರ ವಿರುದ್ಧವಾಗಿಯೇ ಇವೆ. ಬೆಂಬಲ ಬೆಲೆ ಘೋಷಣೆ ಬರೀ ರೈತರನ್ನು ಮೆಚ್ಚಿಸುವ ಸಲುವಾಗಿ ಇದೆಯೇ ಹೊರತು ಎಂದೂ ಸಹ ಬೆಂಬಲ ಬೆಲೆ ಯೋಜನೆಯಲ್ಲಿ ಸೂಕ್ತ ಸಮಯಕ್ಕೆ ಆಹಾರ ಧಾನ್ಯಗಳ ಖರೀದಿ ನಡೆದಿಲ್ಲ ಎಂದರು.

ದರ್ಗಾಜೋಗಹಳ್ಳಿ ಗ್ರಾಪಂ ಅಧ್ಯಕ್ಷ ನಾಗೇಶ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷಿ ಪದವೀಧರ ವಿದ್ಯಾರ್ಥಿಗಳು ಗ್ರಾಮ ವಾಸ್ತವ್ಯ ಇದ್ದು, ರೈತರ ಹೊಲಗಳಲ್ಲಿ ಕಲಿಯುವಂತೆ ಕಂದಾಯ, ನ್ಯಾಯಾಂಗ ಹಾಗೂ ಪೊಲೀಸ್‌ ಇಲಾಖೆಗೆ ಆಯ್ಕೆಯಾಗುವ ಅಧಿಕಾರಿಗಳು ಸಹ 6 ತಿಂಗಳ ಕಾಲ ಗ್ರಾಮಗಳಲ್ಲೇ ಇದ್ದು ಜನರ ಕಷ್ಟ-ಸುಖಗಳನ್ನು ಹತ್ತಿರದಿಂದ ನೋಡಿ ಅರಿತುಕೊಳ್ಳಬೇಕು ಎಂದರು.

ನಾಗಸಂದ್ರ ಎಂಪಿಸಿಎಸ್‌ ಅಧ್ಯಕ್ಷ ಎನ್‌.ಮಹೇಶ್‌, ಕಾರ್ಯನಿರ್ವಾಹಕ ಎಂ.ದೇವರಾಜ್, ಪ್ರಗತಿಪರ ರೈತರಾದ ಮಲ್ಲಪ್ಪ, ಎನ್‌.ಎಂ.ನಟರಾಜ್‌ ಹಾಗೂ ಗ್ರಾಮಸ್ಥರು ಇದ್ದರು. ವಿದ್ಯಾರ್ಥಿಗಳು ಬೀಜೋಪಚಾರದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.