ಇ-ಸ್ವತ್ತು ದಾಖಲೆ ರಹಿತ ನೋಂದಣಿ ಆರೋಪ  


Team Udayavani, Jun 9, 2023, 3:39 PM IST

ಇ-ಸ್ವತ್ತು ದಾಖಲೆ ರಹಿತ ನೋಂದಣಿ ಆರೋಪ  

ಚನ್ನರಾಯಪಟ್ಟಣ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದ ನಂತರ ಇಲ್ಲಿನ ಭೂಮಿಗೆ ಬಂಗಾರದ ಬೆಲೆ ಇದೆ. ಹೀಗಿರುವಾಗ ಅಧಿಕಾರಿ ಗಳು ಸಹ ತಮ್ಮ ಮೂಲ ಕರ್ತವ್ಯವನ್ನು ಮರೆತು, ಅಗತ್ಯ ದಾಖಲೆಗಳಿಲ್ಲದಿದ್ದರೂ ಉಳ್ಳವರ ಕೈಗೊಂಬೆಗಳಾಗಿ ವರ್ತಿಸುತ್ತಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ.

ದೇವನಹಳ್ಳಿ ತಾಲೂಕಿನ ಚನ್ನಹಳ್ಳಿ ಗ್ರಾಮದ ಟಿ.ಅಗ್ರಹಾರ ಗ್ರಾಮದಲ್ಲಿನ ಸರ್ವೆ ನಂ.50 ಜಮೀನಿಗೆ ಸಂಬಂಧಿಸಿದಂತೆ, ಒಟ್ಟು 3 ಎಕರೆಯಷ್ಟು ಜಾಗವನ್ನು 2004-05ರಲ್ಲಿ ವಾಸದ ಉದ್ದೇಶಕ್ಕೆಂದು ಖಾಸಗಿಯವರು ಭೂಪರಿವರ್ತನೆ ಮಾಡಿಸಿಕೊಂಡಿರುತ್ತಾರೆ. ಗ್ರಾಪಂ ವ್ಯಾಪ್ತಿಗೆ ಒಳಪಡುವುದರಿಂದ ಸ್ಥಳೀಯವಾಗಿ ಗ್ರಾಪಂನಲ್ಲಿ ಇ-ಖಾತೆ ಮಾಡಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹುಂಡಿ ಖಾತೆಯನ್ನು 2022ರಲ್ಲಿ ಮಾಡಿರುವುದು ಸರಿಯಷ್ಟೇ. ಆದರೆ, ಭೂ ಪರಿವರ್ತನೆಯಾದ ಭೂಮಿ ಯನ್ನು ಸಕ್ಷಮ ಪ್ರಾಧಿಕಾರದಿಂದ ಯಾವುದೇ ಅನುಮೋದನೆಯನ್ನು ಪಡೆ ಯದೆಯೇ ಆಗಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಅಧ್ಯಕ್ಷರು ಪಂಚಾಯಿತಿಯಲ್ಲಿ ಜಮೀನಿಗೆ ನಕ್ಷೆ ಅನು ಮೋದನೆ ಮಾಡಿಕೊಟ್ಟಿರುತ್ತಾರೆ.

ವಾಸಕ್ಕಾಗಿ ಭೂಪರಿವರ್ತನೆಯಾದ ಭೂಮಿಯನ್ನು ಬಡಾವಣೆ ಯನ್ನಾಗಿ ನಿರ್ಮಾಣ ಮಾಡಲು ಅಕ್ರಮವಾಗಿ ಸಾಮಾನ್ಯ ರಶೀದಿಯನ್ನು ಪಡೆದು ಉಳ್ಳವರು ಬಡಾವಣೆ ನಿರ್ಮಾಣಕ್ಕೆ ಕಾಮಗಾರಿಯನ್ನು ಕೈಗೆತ್ತಿ ಕೊಂಡಿರುತ್ತಾರೆ. ಇದನ್ನು ಪ್ರಶ್ನಿಸಿ, ದಲಿತ ಸಂಘರ್ಷ ಸಮಿತಿ (ಭೀಮ ಶಕ್ತಿ‰) ಸಂಘಟನೆಯು ಚನ್ನಹಳ್ಳಿ ಗ್ರಾಪಂ ಪಿಡಿಒಗೆ ಫೆ.27, 2023ರಂದು ಅನಧಿ ಕೃತವಾಗಿ ನಿರ್ಮಾಣವಾಗುತ್ತಿರುವ ಬಡಾವಣೆ ಯನ್ನು ನಿಲ್ಲಿಸಲು ಅರ್ಜಿ ಸಲ್ಲಿಸಿದ್ದಾರೆ.

ಆದರೆ, ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾಗಲೀ, ಅಧ್ಯಕ್ಷರಾಗಲೀ ಕ್ರಮಕ್ಕೆ ಮುಂದಾಗದೆ, ಅರ್ಜಿಗೆ ಯಾವುದೇ ದಾಖಲಾತಿ, ಅನುಮತಿ ದಾಖಲಾತಿಗಳನ್ನು ನೀಡಿರುವುದಿಲ್ಲವೆಂದು ಹಿಂಬರಹದ ಮೂಲಕ ಸಮಜಾಯಿಷಿ ನೀಡಿರುತ್ತಾರೆ. ಇದರ ಭಾಗವಾಗಿ ತಾಪಂ ಕಾರ್ಯನಿರ್ವ ಹಣಾಧಿಕಾರಿಗಳ ಗಮನಕ್ಕೆ ತಂದು, ಅನಧಿಕೃತ ಬಡಾವಣೆಯನ್ನು ತೆರವು ಗೊಳಿಸುವಂತೆ ಏ.1, 2023ರಂದು ಅರ್ಜಿ ಸಲ್ಲಿಸಿದಾಗ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು ಚನ್ನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒಗೆ ಪತ್ರ ವ್ಯವಹಾರದ ಮೂಲಕ ಅನಧಿಕೃತ ಬಡಾ ವಣೆಯ ಕಾಮಗಾರಿಯನ್ನು ತಕ್ಷಣವೇ ನಿಲ್ಲಿಸಲು ಸೂಚಿಸಿರುತ್ತಾರೆ. ಆದರೆ, ಮೇಲಾಧಿಕಾರಿಗಳ ಆದೇಶವನ್ನು ಗಾಳಿಗೆ ತೂರಿ, ಯಾವುದೇ ಕ್ರಮ ಜರುಗಿಸದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಡಿಎಸ್‌ಎಸ್‌ (ಭೀಮಸೇನೆ) ಸಂಘಟನೆ ಆಕ್ರೋಶ : ಕಾನೂನಿನಡಿಯಲ್ಲಿ ಇ-ಸ್ವತ್ತು ಇಲ್ಲದೆ, ನೊಂದಣಿ ಮಾಡಲು ಬರುವುದಿಲ್ಲವಾದರೂ, ಸಬ್‌ರಿಜಿಸ್ಟ್ರಾರ್‌ನ ಅಧಿಕಾರಿಗಳು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಲ್ಲದೆ, ಡಿಎಸ್‌ಎಸ್‌ ಸಂಘಟನೆ ಸಲ್ಲಿಸಿದ ಅರ್ಜಿಗೆ ಹಿಂಬರಹ ನೀಡುವುದರ ಮೂಲಕ ಜಾರಿಕೊಳ್ಳುತ್ತಿದ್ದಾರೆ. ಹುಂಡಿ ಖಾತೆಯ ದಾಖಲೆ ಯನ್ನು ಬಳಸಿಕೊಂಡು ಇಸ್ವತ್ತು ದಾಖಲೆ ರಹಿತ ಬಡಾವಣೆಯ ನಿವೇಶನಗಳ ನೊಂದಣಿ ಕಾರ್ಯವನ್ನು ಮುಂದುವರೆಸಿದ್ದು, ಈಗಾಗಲೇ ಅಕ್ರಮವಾಗಿ 62 ನಿವೇಶನಗಳ ನೊಂದಣಿ ಮಾಡುವುದರ ಮೂಲಕ ಸಂಘಟನೆ ಸಲ್ಲಿಸಿದ ಅರ್ಜಿಗೆ ಹಿಂಬರಹದಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಳ್ಳುವಂತೆ ಸಮಜಾಯಿಷಿ ದೃಢೀಕೃತ ನೀಡಿರುವು ಸರಿಯಾದ ಕ್ರಮವಲ್ಲ ವೆಂದು ದಲಿತ ಸಂಘರ್ಷ ಸಮಿತಿ (ಭೀಮಶಕ್ತಿ) ಖಂಡಿಸುತ್ತಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.