ಆಧಾರ್‌ ತಿದ್ದುಪಡಿಗೆ ಮುಗಿಬಿದ್ದ ಜನ


Team Udayavani, Jun 8, 2023, 2:53 PM IST

ಆಧಾರ್‌ ತಿದ್ದುಪಡಿಗೆ ಮುಗಿಬಿದ್ದ ಜನ

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದಂತೆ ಗೃಹ ಜ್ಯೋತಿ, ಗೃಹಲಕ್ಷ್ಮೀ, ಅನ್ನ ಭಾಗ್ಯ,ಯುವ ನಿಧಿ ಹಾಗೂ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಗ್ಯಾರಂಟಿ ಯೋಜನೆಗಳನ್ನು ಒಂದೊಂದೇ ಜಾರಿಗೆ ತರಲು ಸಿದ್ಧತೆ ನಡೆಸುತ್ತಿದೆ.

ಈ ನಡುವೆ ಗ್ಯಾರೆಂಟಿ ಭಾಗ್ಯಗಳಿಗೆ ಅಗತ್ಯ ದಾಖಲೆಗಳನ್ನು ನೀಡಲು ನಾಗರಿಕರು ಆಧಾರ್‌ ಕಾರ್ಡ್‌, ಕುಟುಂಬ ಪಡಿತರ ಚೀಟಿ, ಪಾನ್‌ ಕಾರ್ಡ್‌ ಮೊದಲಾದ ಅಗತ್ಯ ದಾಖಲೆಗಳನ್ನು ಸಿದ್ಧ ಪಡಿಸಿ ಕೊಳ್ಳಲು ಹಾತೊರೆಯುತ್ತಿರುವ ದೃಶ್ಯಗಳು ಸಾಮಾನ್ಯ ವಾಗಿವೆ.

ಸರ್ಕಾರದ ಎಲ್ಲಾ ಯೋಜನೆಗಳಿಗೆ ಮುಖ್ಯ ವಾಗಿ ಬೇಕಾಗಿರುವ ಆಧಾರ್‌ ಕಾರ್ಡ್‌ನಲ್ಲಿ ಮೊಬೈಲ್‌ ಸಂಖ್ಯೆ ಜೋಡಣೆ, ಸರಿಯಾದ ವಿಳಾಸ ಮೊದಲಾದ ದಾಖಲಾತಿಗಳು ಸರಿಯಾಗಿರಬೇಕು. ಈ ಹಿನ್ನೆಲೆಯಲ್ಲಿ ನವೀಕೃತ ಆಧಾರ್‌ ಕಾರ್ಡ್‌ ಪಡೆದು ಕೊಳ್ಳಲು ಬ್ಯಾಂಕ್‌ಗಳು ಹಾಗೂ ಸೈಬರ್‌ ಸೆಂಟರ್‌ಗಳಲ್ಲಿ ಜನರು ಮುಗಿ ಬೀಳುತ್ತಿರುವುದು ಕಂಡು ಬರುತ್ತಿದೆ. ನಗರದ ಬ್ಯಾಂಕ್‌ ಆಫ್‌ ಬರೋಡದಲ್ಲಿ ಮಂಗಳವಾರ ಬೆಳಗಿ ನಿಂದಲೇ ಜನ ಕಾದು ನಿಂತು ಬ್ಯಾಂಕ್‌ ತೆರೆಯುವ ವೇಳೆಗೆ ಟೋಕನ್‌ ಪಡೆದು ತಮ್ಮ ಆಧಾರ್‌ ಕಾರ್ಡ್‌ ಗಳನ್ನು ನವೀಕರಿಸಿಕೊಳ್ಳುತ್ತಿದ್ದ ದೃಶ್ಯ ಕಂಡು ಬಂದಿತು.

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಹೆಚ್ಚಳ: ಇನ್ನು ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗಳಿಗೆ ಬಿಪಿಎಲ್‌ ಅಥವಾ ಎಪಿಎಲ್‌ ಪಡಿತರ ಚೀಟಿ ಅಗತ್ಯವಾಗಿ ರುವುದರಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿ ಗಳನ್ನು ಸಲ್ಲಿಸುವುದು ಹೆಚ್ಚಾಗಿದೆ. ಗೃಹ ಜ್ಯೋತಿ ಯೋಜನೆಗೆ ಪ್ರತಿ ಫಲಾನುಭವಿಯು ತನ್ನ ಕಸ್ಟಮರ್‌ ಐಡಿ ಅಥವಾ ಅಕೌಂಟ್‌ ಐಡಿ ಅನ್ನು ಆಧಾರ್‌ಗೆ ಕಡ್ಡಾಯವಾಗಿ ಜೋಡಣೆ ಮಾಡಬೇಕಿದ್ದು, ಈ ಪ್ರಕ್ರಿಯೆ ಮಾಡಿಸಲು ಅಲೆದಾಟ ಶುರುವಾಗಿದೆ. ಇನ್ನು ಯುವ ನಿಧಿಗಾಗಿ ಪಡೆಯುವ ನಿರುದ್ಯೋಗ ಭತ್ಯೆ ಪಡೆಯಲು ಪದವಿ ವ್ಯಾಸಂಗ ಪತ್ರ, ಆಧಾರ್‌, ವಾಸ ದೃಢೀಕರಣ ಮೊದಲಾದ ದಾಖಲೆಗಳನ್ನು ಹವಣಿಸಿಟ್ಟುಕೊಳ್ಳಬೇಕಿದೆ. ಶಕ್ತಿ ಯೋಜನೆ ಯಡಿಯಲ್ಲಿ ಮಹಿಳೆಯರು ಉಚಿತ ಪ್ರಯಾಣ ಸೌಲಭ್ಯ ಪಡೆಯಲು ಪೂರಕವಾಗುವ ಶಕ್ತಿ ಸ್ಮಾರ್ಟ್‌ ಕಾರ್ಡ್‌ ಗಳನ್ನು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬೇಕಿದೆ.

ಅಂತಹವರೆಗೆ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿ ನೀಡಬೇಕಾಗುತ್ತದೆ. ಜೂನ್‌ 15ರಿಂದ ಜಾರಿಯಾಗ ಲಿರುವ ಗೃಹಲಕ್ಷ್ಮೀ ಯೋಜನೆಗೆ ಕುಟುಂಬದ ಯಜಮಾಣಿಗೆ 2 ಸಾವಿರ ರೂ ನೀಡಲಾಗುವುದು ಎನ್ನುವ ಗ್ಯಾರಂಟಿಗೆ ಮನೆ ಯಜಮಾನರು ಯಾರು ಎನ್ನುವ ಚರ್ಚೆ ಎಲ್ಲೆಡೆ ಕಂಡು ಬರುತ್ತಿದೆ. ಅವಿಭಕ್ತ ಕುಟುಂಬಗಳಲ್ಲಿ ಅತ್ತೆ ಸೊಸೆಯರ ನಡುವೆ ಫಲಾ ನುಭವಿಗಳು ಯಾರು ಎನ್ನುವ ತಿಕ್ಕಾಟಗಳೂ ಸಹ ನಡೆ ಯುತ್ತಿವೆ. ಮಹಿಳೆ ಯರಿಗೆ ಉಚಿತ ಬಸ್‌ ಪ್ರಯಾಣ ಎಂದು ಹೇಳಿರುವುದರಿಂದ ಬೆಂಗಳೂರಿನಲ್ಲಿರುವ ತನ್ನ ತವರು ಮನೆಗೆ ಹೋಗಲು ನಿಮ್ಮಿಂದ ಹಣ ಪಡೆಯ ಬೇಕಿಲ್ಲ.

ಇನ್ನು ಅಂದುಕೊಂಡಾಗ ಹೋಗಿ ಬರುತ್ತೇನೆ ಎಂದು ಪತ್ನಿ ಎಚ್ಚರಿಕೆ ನೀಡಿದ್ದನ್ನು ನಗರದ ಪತಿ ಮಹಾಶಯರೊಬ್ಬರು ಹೇಳಿ ಕೊಂಡಿದ್ದಾರೆ. ಒಟ್ಟಿನಲ್ಲಿ ಸರ್ಕಾರದ ಈ ಭಾಗ್ಯಗಳು ಜನಸಾಮಾನ್ಯರಿಗೆ ಸದ್ಬಳಕೆ ಯಾಗಲಿವೆಯಾ ಅಥವಾ ದುರ್ಬಳಕೆಯಾಗಿ ಸಂಸಾರ ಹಾಗೂ ಸರ್ಕಾರಕ್ಕೆ ಹೊರೆಯಾಗಲಿದೆಯಾ ಎನ್ನುವ ಪ್ರಶ್ನೆಗೆ ಕಾಲವೇ ಉತ್ತರಿಸಬೇಕಿದೆ.

ಯಾರು ಫಲಾನುಭವಿಗಳು ಎನ್ನುವ ಚರ್ಚೆ ? : ಜುಲೈ 1ರಿಂದ ಜಾರಿಯಾಗಲಿರುವ ಗೃಹ ಜ್ಯೋತಿ ಯೋಜನೆಗೆ 200 ಯೂನಿಟ್‌ಗಳ ವರೆಗೆ ವಿದ್ಯುತ್‌ ಉಚಿತವಾಗಿ ಪಡೆಯಲು ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸ ಬೇಕು. ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದರೆ, ಒಂದು ಆರ್‌ಆರ್‌ ಸಂಖ್ಯೆಗೆ ಮಾತ್ರ ಸೌಲಭ್ಯ ಕಲ್ಪಿಸುವುದಾಗಿ ಹೇಳಿರುವುದರಿಂದ ಬಾಡಿಗೆ ಮನೆಯಲ್ಲಿರು ವವರು ಈ ಸೌಲಭ್ಯಗಳಿಂದ ವಂಚಿತರಾಗುವ ಸಂಭವವಿದ್ದು, ಮನೆ ಮಾಲೀಕರು ಹಾಗೂ ಬಾಡಿಗೆದಾರರ ನಡುವೆ ಚರ್ಚೆ ಆರಂಭವಾಗಿದೆ. ಸರ್ಕಾರ ಬಾಡಿಗೆದಾರರಿಗೂ ಯೋಜನೆ ಅನ್ವಯಿಸುತ್ತದೆ ಎನ್ನುವ ಹೇಳಿಕೆ ನೀಡಿದ್ದರೂ ಮಾಪಕಗಳ ಗೊಂದಲಗಳಿಂದ ಸೌಲಭ್ಯಗಳು ಕೈ ತಪ್ಪುವ ಆತಂಕ ಎದುರಾಗಿದೆ.

ಗ್ಯಾರಂಟಿ ಯೋಜನೆಗೆ ಸಜ್ಜು : ಗೃಹ ಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್‌ಗಳ ವರೆಗೆ ಉಚಿತ ಎನ್ನುವ ಘೋಷಣೆಯಿಂದಾಗಿ ಯೋಜನೆಯ ಸ್ವರೂಪ ತಿಳಿಯದೇ ಇರುವ ಬಹಳಷ್ಟು ಮಂದಿ ತಾವು ತಿಂಗಳಲ್ಲಿ ಬಳ ಸುತ್ತಿದ್ದ 50 ಯೂನಿಟ್‌ ಬದಲಾಗಿ 200 ಯೂನಿಟ್‌ ಬಳಸಬಹುದೆಂದು ಎಲೆಕ್ಟ್ರಿಕಲ್‌ ವಸ್ತುಗಳನ್ನು ಕೊಳ್ಳುವ ದೃಶ್ಯಗಳೂ ಕಂಡು ಬರುತ್ತಿವೆ. ಅಡಿಗೆ ಅನಿಲ ದುಬಾರಿ ಎಂದು ಎಲೆಕ್ಟ್ರಿಕ್‌ ಸ್ಟೋವ್‌, ನೀರು ಕಾಯಿಸಲು ವಾಟರ್‌ ಹೀಟರ್‌, ಫ್ಯಾನ್‌ ಮೊದಲಾದ ವಸ್ತುಗಳ ಖರೀದಿಯೂ ಜೋರಾಗಿದೆ. – ಡಿ.ಶ್ರೀಕಾಂತ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.