ಕೆಎಂಎಫ್ ನಿರ್ದೇಶಕರಾಗಿ ಆನಂದ್ ಕುಮಾರ್ ಆಯ್ಕೆ
Team Udayavani, Jun 15, 2019, 12:58 PM IST
ಕೆಎಂಎಫ್ ನೂತನ ನಿರ್ದೇಶಕರಾದ ದೊಡ್ಡಬಳ್ಳಾಪುರದ ಬಿ.ಸಿ.ಆನಂದ್ ಕುಮಾರ್ ಅವರನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅಭಿನಂದಿಸಿದರು.
ದೊಡ್ಡಬಳ್ಳಾಪುರ: ತಾಲೂಕಿನ ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಅವರು ಕರ್ನಾಟಕ ಸಹಕಾರ ಹಾಲು ಮಹಾ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾ ವಣೆಯಲ್ಲಿ 14 ನಿರ್ದೇಶಕರ ಪೈಕಿ 8 ಮತಗಳನ್ನು ಪಡೆಯುವ ಮೂಲಕ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಕೆಎಂಎಫ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಮಾಡುವ ಮೂಲಕ ಜವಾಬ್ದಾರಿ ಹೆಚ್ಚಾಗಿದೆ. ಮಹಾ ಮಂಡಳಿಯಿಂದ ರೈತರಿಗೆ ಹಾಗೂ ಬೆಂಗಳೂರು ಹಾಲು ಒಕ್ಕೂಟಕ್ಕೆ ದೊರೆಯುವ ಸೌಲಭ್ಯಗಳನ್ನು ತರುವ ಮೂಲಕ ಜಿಲ್ಲೆಯಲ್ಲಿ ಹೈನು ಗಾರಿಕೆ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಕೆ.ಎಂ.ಎಫ್ ನೂತನ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಹೇಳಿದರು.
ಕೆಎಂಎಫ್ ನೂತನ ನಿರ್ದೇಶಕರನ್ನು ಸಚಿವ ಡಿ.ಕೆ.ಶಿವಕುಮಾರ್, ಶಾಸಕ ಟಿ.ವೆಂಕಟರಮಣಯ್ಯ, ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಕೆಪಿಸಿಸಿ ಸದಸ್ಯರಾದ ಎಂ.ಜಿ.ಶ್ರೀನಿವಾಸ್, ಜಿ.ಲಕ್ಷ್ಮೀ ಪತಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಚುಂಚೇಗೌಡ, ತಾಲೂಕು ಪಂಚಾಯ್ತಿ ಅಧ್ಯಕ್ಷ ಎಚ್.ವಿ.ಶ್ರೀವತ್ಸ, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಎಂ.ಬೈರೇಗೌಡ, ನಗರ ಬ್ಲಾಕ್ ಅಧ್ಯಕ್ಷ ಕೆ.ಜಿ.ಅಶೋಕ್, ಕಸಬಾ ಬ್ಲಾಕ್ ಅಧ್ಯಕ್ಷ ವೆಂಕಟೇಶ್, ತೂಬಗೆರೆ ಬ್ಲಾಕ್ ಅಧ್ಯಕ್ಷ ಎನ್.ರಂಗಪ್ಪ, ಎಪಿಎಂಸಿ ನಿರ್ದೇಶಕ ಮಂಜುನಾಥ್, ಟಿಎಪಿಎಂಸಿಎಸ್ ನಿರ್ದೇಶಕ ಎಂ.ಗೋವಿಂದರಾಜು, ಮುಖಂಡರಾದ ಆರ್.ವಿ.ಗೌಡ, ಆರ್.ಸಿ. ರಾಲಿಂಗಯ್ಯ, ಅರಳುಮಲ್ಲಿಗೆ ವೆಂಕಟೇಶ್ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್ ಸಮಸ್ಯೆ
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ