ಜಿಲ್ಲೆಅಂಗನವಾಡಿ ಕಟ್ಟಡಗಳಿಗೆ “ಗ್ರಹಣ’

ಜಿಲ್ಲೆಯಲ್ಲಿ 120 ಅಂಗನವಾಡಿ ಕೇಂದ್ರ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಣೆ , 60 ಸ್ವಂತ ನಿವೇಶನ

Team Udayavani, Mar 15, 2021, 11:59 AM IST

ಜಿಲ್ಲೆಅಂಗನವಾಡಿ ಕಟ್ಟಡಗಳಿಗೆ “ಗ್ರಹಣ’

ದೇವನಹಳ್ಳಿ: ಜಿಲ್ಲೆಯಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ನಿವೇಶನ ಗಳ ಕೊರತೆ ಎದುರಾಗಿದ್ದು ಜಿಲ್ಲೆಯಲ್ಲಿ ಸುಮಾರು 120 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯನಿರ್ವಹಿಸುತ್ತಿದೆ. ಬಾಡಿಗೆಯಲ್ಲಿರುವ ಅಂಗನವಾಡಿ ಕಟ್ಟಡಗಳು ಪ್ರತಿ ತಿಂಗಳು ಖಾಸಗಿ ವ್ಯಕ್ತಿಗಳಿಗೆ ಬಾಡಿಗೆ ಪಾವತಿಸಬೇಕಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಹೆಚ್ಚಿನ ಹೊರೆಯಾಗುತ್ತಿದೆ.

ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ನಿವೇಶನದ ಕೊರತೆ ಎದುರಾಗಿದೆ. ಜಿಲ್ಲೆಯಲ್ಲಿ ರಿಯಲ್‌ ಎಸ್ಟೇಟ್‌, ಭೂಮಿಗೆ ಹೆಚ್ಚಿನ ಬೆಲೆಬಂದಿರುವುದರಿಂದ ಅಂಗನವಾಡಿ ಕಟ್ಟಡಗಳಿಗೆ ನಿವೇಶನ ಖರೀದಿ ದುಬಾರಿಯಾಗುತ್ತಿದೆ. ಅಲ್ಲದೆ, ಜಿಲ್ಲೆಯಲ್ಲಿ ಸರ್ಕಾರಿ ಜಾಗದ ಲಭ್ಯತೆಕೊರತೆ ಇದ್ದು ಅನಿವಾರ್ಯ ವಾಗಿ ಶಾಲೆ, ಸಮುದಾಯ ಭವನ,ಪಂಚಾಯ್ತಿ ಕಟ್ಟಡ, ಸೇರಿ ವಿವಿಧ ಜಾಗಗಳಲ್ಲಿ ಅಂಗನವಾಡಿ ಕೇಂದ್ರಗಳುಕಾರ್ಯನಿರ್ವಹಿಸುತ್ತಿದೆ. ಅಂಗನ ವಾಡಿ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಕೆಲ ನಿಯಮಗಳು ಅಡ್ಡಿಯಾಗುತ್ತಿದೆ. ಇಂತಿಷ್ಟು ದೂರದಲ್ಲಿಕಟ್ಟಡವಿರಬೇಕು. ಒಂದೇ ಪ್ರದೇಶದ ಸುತ್ತಳತೆ ಯಲ್ಲಿ ಮತ್ತೂಂದು ಅಂಗನವಾಡಿ ಇರಬಾರದು. ಹೀಗೆ ಹಲವಾರು ನಿಯಮಗಳನ್ನು ಪಾಲಿಸ ಬೇಕಾಗಿರುವುದರಿಂದ ಸರ್ಕಾರಿ ಜಾಗವಿದ್ದರೂ, ಅಂಗನವಾಡಿ ಕಟ್ಟ ಭಾಗ್ಯ ಲಭಿಸುತ್ತಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ.

60 ಕಡೆ ಸ್ವಂತ ನಿವೇಶನ ಇರುವುದರಿಂದ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ವಿವಿಧ ಯೋಜನೆಗಳಲ್ಲಿ ಅನುದಾನ ಬಿಡುಗಡೆಗೊಳಿಸಿ, ಜಿಪಂ, ನರೇಗಾ, ಶಾಸಕರ ಅನುದಾನ, ಸಿಎಸ್‌ಆರ್‌, ಎಸ್‌ಟಿಪಿ, ಹೀಗೆ ಅನುದಾನ ಬಳಸಿಕೊಳ್ಳಬೇಕಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯ ನಿರ್ವಹಣೆಗೆ ಬಾಡಿಗೆ ಕಟ್ಟಡಗಳ ಆಸರೆಯ ಅನಿವಾರ್ಯತೆಬಂದೊದಗಿದೆ. ಸೂಕ್ತ ಜಾಗಗಳನ್ನು ನೀಡಿದರೆ, ಉತ್ತಮ ಅಂಗನವಾಡಿ ಕಟ್ಟಡಗಳನ್ನು ಸಿಎಸ್‌ಆರ್‌ ಅನುದಾನದಲ್ಲಿ ಕಂಪನಿಗಳು ನಿರ್ಮಿಸಿಕೊಡಲಿವೆ. ದೇವನ ಹಳ್ಳಿ ತಾಲೂಕಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಪ್ರಾರಂಭಗೊಂಡ ಮೇಲೆ ಭೂಮಿ ಬೆಲೆ ಹೆಚ್ಚಾಗಿರುವುದರಿಂದ ಒಂದು ಇಂಚು ಭೂಮಿ ಖರೀದಿಸಲು ದುಬಾರಿ ಬೆಲೆ ತೆತ್ತಬೇಕಾಗುತ್ತದೆ.

ಜಿಲ್ಲೆಯಲ್ಲಿ 1230 ಅಂಗನವಾಡಿ ಕೇಂದ್ರಗಳಿವೆ. ಸುಮಾರು 245 ಅಂಗನವಾಡಿಗಳಿಗೆ ಸ್ವಂತ ಕಟ್ಟಡವಾಗಬೇಕಿದೆ. ಜಿಲ್ಲೆಯಲ್ಲಿ ಬಾಡಿಗೆಯಲ್ಲಿರುವ ಅಂಗನವಾಡಿ ಕಟ್ಟಡಗಳ ತಾಲೂಕು ವಾರು ಅಂಕಿ ಅಂಶ.

ದೇವನಹಳ್ಳಿ          11

ದೊಡ್ಡಬಳ್ಳಾಪುರ  43

ಹೊಸಕೋಟೆ        20

ನೆಲಮಂಗಲ        46

ಒಟ್ಟು                  120

 

ಶಾಲೆ ಕಟ್ಟಡದಲ್ಲಿರುವ ಅಂಗನವಾಡಿ ಕಟ್ಟಡಗಳು :

ದೇವನಹಳ್ಳಿ           13

ದೊಡ್ಡಬಳ್ಳಾಪುರ   11

ಹೊಸಕೋಟೆ          21

ನೆಲಮಂಗಲ          13

ಒಟ್ಟು                     58

ಸಮುದಾಯ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿಗಳು :

ದೇವನಹಳ್ಳಿ          30

ದೊಡ್ಡಬಳ್ಳಾಪುರ  20

ಹೊಸಕೋಟೆ         5

ನೆಲಮಂಗಲ         9

ಒಟ್ಟು                  64

ಗ್ರಾಪಂ ಕಟ್ಟಡದಲ್ಲಿರುವ ಅಂಗನವಾಡಿಗಳು :

ದೇವನಹಳ್ಳಿ      1

ಹೊಸಕೋಟೆ    2

ಒಟ್ಟು            3

ಸ್ವಂತ ಕಟ್ಟಡ ಹೊಂದಿರುವ ಅಂಗನವಾಡಿಗಳು :

ದೇವನಹಳ್ಳಿ             209

ದೊಡ್ಡಬಳ್ಳಾಪುರ     295

ಹೊಸಕೋಟೆ           262

ನೆಲಮಂಗಲ           219

ಒಟ್ಟು ಕಟ್ಟಡ         985

ಜಿಲ್ಲೆಯಲ್ಲಿ 60 ಸ್ವಂತ ನಿವೇಶನ ಹೊಂದಿದೆ.  :

ದೇವನಹಳ್ಳಿ          6

ದೊಡ್ಡಬಳ್ಳಾಪುರ  22

ಹೊಸಕೋಟೆ       13

ನೆಲಮಂಗಲ       19

ಒಟ್ಟು ಕೇಂದ್ರ      60

ಮುಂದಿನ ದಿನಗಳಲ್ಲಿ ಎಲ್ಲಾ ಅಂಗನವಾಡಿಗಳು ಸ್ವಂತ ಕಟ್ಟಡದಲ್ಲ ಕಾರ್ಯ ನಿರ್ವಹಿಸಲು ಆದ್ಯತೆ ನೀಡಲಾಗುತ್ತದೆ. ಸಾಧ್ಯವಿರುವ ಕಡೆಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಎಲ್ಲಿ ಸರ್ಕಾರಿ ಜಾಗ ಇರುತ್ತದೆಯೋಅಲ್ಲಿ ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರ್ತಿಸುವ ಕೆಲಸ ನಡೆಯುತ್ತಿದೆ. – ಪುಷ್ಪಲತಾ ರಾಯ್ಕರ್‌, ಉಪನಿರ್ದೇಶಕಿ, ಜಿಲ್ಲಾ ಮಹಿಳಾಮತ್ತು ಮಕ್ಕಳ ಕಲ್ಯಾಣ ಇಲಾಖೆ

ಜಿಲ್ಲೆಯಲ್ಲಿ ಎಲ್ಲೆಲ್ಲಿ ಸರ್ಕಾರಿಜಾಗಗಳಿವೆ. ಅಂಗನವಾಡಿಕಟ್ಟಡನಿರ್ಮಾಣಕ್ಕೆ ಜಾಗಗುರ್ತಿಸಲುಕ್ರಮ ವಹಿಸಲಾಗುವುದು.ಸರ್ಕಾರಿ ಜಾಗದ ಕೊರತೆಕಂಡುಬರುತ್ತಿದೆ. ಜಿಲ್ಲೆಯಲ್ಲಿ ಅಂಗನವಾಡಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಿಅಂಗನವಾಡಿಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. – ಕೆ.ಶ್ರೀನಿವಾಸ್‌ ,ಜಿಲ್ಲಾಧಿಕಾರಿ

 

-ಎಸ್‌.ಮಹೇಶ್‌

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.