ಕೋವಿಡ್‌ 19 ಸೋಂಕಿಗೆ ಮತ್ತೊಂದು ಬಲಿ


Team Udayavani, Jun 24, 2020, 7:09 AM IST

gramantara

ಹೊಸಕೋಟೆ: ನಗರದಲ್ಲಿ ಕೋವಿಡ್‌ 19 ಸೋಂಕಿನಿಂದ 80 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಜತೆಗೆ ಒಂದೇ ದಿನ ಒಟ್ಟು 8 ಪ್ರಕರಣ ದೃಢಪಟ್ಟಿದ್ದು, ಹೊಸಕೋಟೆಯಲ್ಲಿ ಒಂದು ಹಾಗೂ ನೆಲಮಂಗಲದಲ್ಲಿ 7 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ  ಸಂಖ್ಯೆ 38ಕ್ಕೇರಿದೆ.

ಜೂ.19ರಂದು ನಗರದ 19ನೇ ವಾರ್ಡ್‌ನ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿತ್ತು. ಸೋಂಕಿತ  ಮಹಿಳೆಯನ್ನು ಬೆಂಗಳೂರಿನ ರಾಜೀವ್‌ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. 18ನೇ ವಾರ್ಡ್‌ನಲ್ಲಿ ವಾಸಿಸುತ್ತಿರುವ 49 ವರ್ಷ ವಯಸ್ಸಿನ ವೈದ್ಯರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಜೂ.20ರಂದು ಮೊದಲ ಬಾರಿಗೆ ನಗರದ 28ನೇ  ವಾರ್ಡಿನಲ್ಲಿ 60 ವರ್ಷದ ಮಹಿಳೆ ಮೃತಪಟ್ಟಿದ್ದು, ಈಕೆಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ತಪಾಸಣೆಗೆ ಒಳಪಡಿಸಲಾಗಿದೆ.

ಮಂಗಳವಾರ ಮೃತಪಟ್ಟಿರುವ ಮಹಿಳೆ ಪುತ್ರ, ಸೊಸೆ, ಇಬ್ಬರು ಮೊಮ್ಮಕ್ಕಳನ್ನು ತಪಾಸಣೆ ನಡೆಸಿದ್ದು, ವರದಿಯ ಫ‌ಲಿತಾಂಶ ನಿರೀಕ್ಷಿಸಲಾಗುತ್ತಿದೆ. ಇದರೊಂದಿಗೆ ರೋಗ ಲಕ್ಷಣಗಳಿರುವ ಸಂಬಂಧಿತ 70 ವರ್ಷದ ವ್ಯಕ್ತಿಯನ್ನು ತಪಾಸಣೆ ಮಾಡಲಾಗಿದೆ. ನಗರದಲ್ಲಿ ಇದುವರೆಗೂ 6 ತಾಲೂಕಿನಲ್ಲಿ ಜಡಿಗೇನಹಳ್ಳಿ, ಆಲಪ್ಪನಹಳ್ಳಿ ಸೇರಿದಂತೆ  ಒಟ್ಟು 8 ಕಂಟೈನ್‌ಮೆಂಟ್‌ ವಲಯಗಳಾಗಿವೆ. ಸೋಂಕಿತರ ಸಂಖ್ಯೆ ದಿನೆ ದಿನೇ ಏರಿಕೆಯಾಗುತ್ತಿದ್ದು, ನಿವಾಸಿಗಳಲ್ಲಿ ತೀವ್ರ ಆತಂಕವನ್ನುಂಟು ಮಾಡಿದೆ.

ಒಂದೇ ದಿನ 7 ಕೋವಿಡ್‌ 19 ಪಾಸಿಟಿವ್‌
ನೆಲಮಂಗಲ: ಲಾಕ್‌ಡೌನ್‌ ಆರಂಭ ದಿಂದ ಮುಕ್ತಾಯದವರೆಗೂ ಕೋವಿಡ್‌ 19 ಸಮಸ್ಯೆಯಿಲ್ಲದ ನಗರಕ್ಕೆ ದಿನೆ ದಿನೆ ಪಾಸಿಟಿವ್‌ ಪ್ರಕರಗಣಗಳು ಹೆಚ್ಚಾಗುತ್ತಿದ್ದು, ಮತ್ತೆ ಲಾಕ್‌ಡೌನ್‌ಗೆ ತಿರ್ಮಾನಿಸಲಾಗಿದೆ ಎಂದು ಶಾಸಕ  ಡಾ.ಕೆ.ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ. ಮಂಗಳವಾರ ನಗರದ ಸುಭಾಷ್‌ ನಗರದ 52 ವರ್ಷ, 22 ವರ್ಷದ  ವ್ಯಕ್ತಿಗಳಿಗೆ ಹಾಗೂ 14 ವರ್ಷದ ಬಾಲಕಿಗೆ ಕೋವಿಡ್‌ 19 ಸೋಂಕು ತಗುಲಿದ್ದರೆ,

ಮೊದಲಕೋಟೆ 38 ವರ್ಷದ ಮಹಿಳೆ ಹಾಗೂ10 ವರ್ಷದ ಬಾಲಕ, ಅರಿಶಿನಕುಂಟೆಯ ಮಹಿಳೆ ಯೊಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ತಹ ಶೀಲ್ದಾರ್‌ ತಿಳಿಸಿದ್ದಾರೆ. ಅದರ ಜತೆ ಲೋಹಿತ್‌ ನಗರದ  ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವ್ಯಕ್ತಿಗೆ ತುಮಕೂರಿನ ಸರಕಾರಿ  ಆಸ್ಪತ್ರೆ  ಯಲ್ಲಿ ಕೋವಿಡ್‌ 19 ಪಾಸಿಟಿವ್‌ ಬಂದಿದ್ದು, ಸರಕಾರ ಬಿಡುಗಡೆ ಮಾಡಿರುವ ಹೆಲ್ತ್‌ ಬುಲೆಟಿನ್‌ನಲ್ಲಿ ಮಾಹಿತಿ ಸಂಖ್ಯೆ ನಮೂದಿಸಿಲ್ಲ.

ಲಾಕ್‌ಡೌನ್‌ ಸುಳಿವು: ಕೋವಿಡ್‌ 19 ಪಾಸಿಟಿವ್‌ ಪ್ರಕರಣಗಳು ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರವ ನ್ನು ಲಾಕ್‌ಡೌನ್‌ ಮಾಡುವುದು. ಪಾಸಿಟಿವ್‌ ಪ್ರಕರಣವಿರುವ ಬಡವಾಣೆ  ಸೀಲ್‌ಡೌನ್‌ ಮಾಡಲಾಗುತ್ತದೆ ಎಂದು  ಶಾಸಕರು ತಿಳಿಸಿದ್ದಾರೆ. ಜೂ.25ರಂದು ಮಧ್ಯಾಹ್ನ 12ಕ್ಕೆ ತಹಶೀಲ್ದಾರ್‌ ಎಸ್‌ಎಲ್‌ಆರ್‌ ಕಲ್ಯಾಣ ಮಂಟಪದಲ್ಲಿ ಸಂಘ ಸಂಸ್ಥೆಗಳು, ಅಧಿಕಾರಿಗಳನ್ನು ಸಭೆ ಕರೆದಿದ್ದು, ಲಾಕ್‌ಡೌನ್‌ ಮಾಡುವ ತೀರ್ಮಾನ ಮಾಡಲಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.