ಮರಸೂರಿನಲ್ಲಿ ಪಂಚಾಯ್ತಿ ಊಟದ ಮನೆ ಆರಂಭ


Team Udayavani, Feb 1, 2018, 1:04 PM IST

blore-g-2.jpg

ಆನೇಕಲ್‌: ರಾಜ್ಯದಲ್ಲೇ ಮೊದಲ ಬಾರಿಗೆ ತಾಲೂಕಿನ ಮರಸೂರಿನಲ್ಲಿ ಪಂಚಾಯತಿ ವತಿಯಿಂದ ಪಂಚಾಯ್ತಿ ಊಟದ ಮನೆಯನ್ನು ಇಂದಿರಾ ಕ್ಯಾಂಟಿನ್‌ ಮಾದರಿಯಲ್ಲಿ ಮಾಡಿರು ವುದು ಶ್ಲಾಘನಿಯ ಎಂದು ಶಾಸಕ ಬಿ.ಶಿವಣ್ಣ ಹೇಳಿದರು.

ಮರಸೂರಿನಲ್ಲಿ ಪಂಚಾಯ್ತಿ ವತಿಯಿಂದ ನಿರ್ಮಾಣ ಮಾಡಲಾಗಿರುವ ಪಂಚಾಯ್ತಿ ಊಟದ ಮನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲೇ ಇಂಥ ವಿಭಿನ್ನ ಕಾರ್ಯಕ್ರಮಕ್ಕೆ ಕೈಹಾಕಿರುವ ಪಂಚಾಯ್ತಿ ಅಧ್ಯಕ್ಷ ಪುರುಷೋತ್ತ ಮರವರ ಕಾರ್ಯ ಮೆಚ್ಚುವಂತದ್ದು ಎಂದು ಶ್ಲಾಸಿದರು. 

34 ಲಕ್ಷ ರೂ. ಮರಸೂರು ಭಾಗದಲ್ಲಿ ಸಾಲ 
ಮನ್ನಾ: ಸ್ತ್ರೀ ಶಕ್ತಿ ಸಂಘಗಳಿಗೆ ಸುತ್ತು ನಿಧಿ ನೀಡಿ, ಮಹಿಳೆಯರು ಸಮಾಜದಲ್ಲಿ ಮುಖ್ಯವಾಹಿನಿಗೆ ಬರುವಂತೆ ಮಾಡಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ, 8,165 ಕೋಟಿ ರೂ.ಗಳ ಸಹಕಾರ ಸಂಘದ ಸಾಲವನ್ನು ಮನ್ನಾ ಮಾಡಿದ್ದಾರೆ. ಬರಗಾಲದ ನಡುವೆಯೂ ಸಾಲ ಮನ್ನಾ ಮಾಡುವ ಮೂಲಕ ತಾಲೂಕಿನ ಮರಸೂರಿನಲ್ಲಿ 34 ಲಕ್ಷ ರೂ.ಗಳು ಮರಸೂರು ಭಾಗದಲ್ಲಿ ಸಾಲ ಮನ್ನಾ ಆಗಿದೆ ಎಂದು ತಿಳಿಸಿದರು.

ಮೂಲ ಸೌಕರ್ಯ ಕಲ್ಪನೆಗೆ ಆದ್ಯತೆ: ಜಿಪಂ ಸದಸ್ಯ ಬಂಡಾಪುರ ರಾಮಚಂದ್ರ ಮಾತನಾಡಿ, ಬಡ ಜನರು ಪ್ರತಿ ದಿನ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಅವರಿಗೆ ಪಂಚಾಯತಿಯಲ್ಲಿ ಊಟದ ಮನೆ ಮಾಡಿರುವುದು ಶ್ಲಾಘನೀಯ. ಮರಸೂರು ಭಾಗದಲ್ಲಿ ಈಗಾಗಲೇ ಶುದ್ಧ ಕುಡಿಯುವ ನೀರಿನ ಮೂರು ಘಟಕ ನಿರ್ಮಿಸಲಾಗಿದೆ. ಮರಣ ಹೊಂದಿದರ ಕುಟುಂಬದವರಿಗೆ 10 ಸಾವಿರ ರೂ. ಗಳನ್ನು ನೀಡುವುದು, ಶಾಲಾ ಮಕ್ಕಳಿಗೆ ಶಿಕ್ಷಣಕ್ಕೆ ಸಹಕಾರ ಪಂಚಾಯತಿಯಿಂದ ಮಾಡಲಾಗುತ್ತಿದೆ. ರಸ್ತೆ, ಕುಡಿಯುವ ನೀರು ಮಾತ್ರವಲ್ಲದೇ ಜನರಿಗೆ ಬೇಕಾದ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.

ಗ್ರಾಪಂ ಅಧ್ಯಕ್ಷ ಪುರುಷೋತ್ತಮ ರೆಡ್ಡಿ ಮಾತನಾಡಿ, ಊಟದ ಮನೆಯಲ್ಲಿ ಪ್ರತಿ ಊಟಕ್ಕೆ 10 ರೂ.ನಂತೆ ನೀಡಲಾಗುತ್ತದೆ. ಬೆಳಗ್ಗೆ ಮತ್ತು ಮಧ್ಯಾಹ್ನ ನೂರು ಜನಕ್ಕೆ ಊಟ ನೀಡಲಾಗುತ್ತದೆ. ರಾಜ್ಯದಲ್ಲೇ ಪಂಚಾಯ್ತಿ ವ್ಯಾಪ್ತಿಯಲ್ಲಿ ಇದೇ ಮೊದಲ ಬಾರಿಗೆ ಕ್ಯಾಂಟಿನ್‌ ಮಾಡಲಾಗಿದೆ. ಪಂಚಾಯ್ತಿ ವ್ಯಾಪ್ತಿಯಲ್ಲಿ ಬಡವರು, ಕಷ್ಟ ಪಡುವ ಕೂಲಿ ಕಾರ್ಮಿಕರು ಸಮಯಕ್ಕೆ ಸರಿಯಾಗಿ ಊಟ ಮಾಡಬೇಕು ಎನ್ನುವುದು ಎಂದರು.

ಕಾರ್ಯಕ್ರಮದಲ್ಲಿ ಪಿಡಿಒ ಶಶಿಕುಮಾರ್‌, ತಾಪಂ ಕಾರ್ಯನಿರ್ವಾಹಣಾಧಿಕಾರಿ ಟಿ.ಕೆ. ರಮೇಶ್‌, ರಾಷ್ಟ್ರ ಪ್ರಶಸ್ತಿ ವಿಜೇತ ಚಿನ್ನಪ್ಪ ವೈ. ಚಿಕ್ಕಹಾಗಡೆ, ಗ್ರಾಪಂ ಮಾಜಿ ಅಧ್ಯಕ್ಷ ಸೋಮಶೇಖರರೆಡ್ಡಿ, ಉಪಾಧ್ಯಕ್ಷೆ ಪ್ರೇಮಾ ಕಾವೇರಪ್ಪ, ಸದಸ್ಯರಾದ ಪ್ರಭಾಕರ್‌, ರಾಧಾಮ್ಮ, ಮನು, ಕೃಷ್ಣ, ಆನಂದ್‌, ದೊಡ್ಡಹಾಗಡೆ ಹರೀಶ್‌ ಗೌಡ ಮತ್ತಿತರರಿದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.