ಸಹಕಾರ ಸಂಸ್ಥೆಯಿಂದ ರೈತರಿಗೆ ನೆರವು
Team Udayavani, Jun 29, 2021, 10:22 AM IST
ದೊಡ್ಡಬಳ್ಳಾಪುರ:ಈಗ ಮುಂಗಾರು ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ನೀಡಲಾಗುತ್ತಿರುವ ಸಾಲವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಬ್ಯಾಂಕಿನ ತಾಲೂಕು ಘಟಕದ ಮೇಲುಸ್ತುವಾರಿ ಅಧಿಕಾರಿ ರಾಘವೇಂದ್ರ ಹೇಳಿದರು.
ತಾಲೂಕಿನ ಕಂಟನಕುಂಟೆ ವ್ಯವಸಾಯ ಸೇವಾ ಸಹಕಾರ ಸಂಘದಿಂದ 180 ರೈತರಿಗೆ 1 ಕೋಟಿಸಾಲವಿತರಣೆಕಾರ್ಯಕ್ರಮದಲ್ಲಿ ಮಾತನಾಡಿ, ಕೃಷಿಕರ ನೆರವಿಗಾಗಿ ಸಹಕಾರ ಸಂಘಗಳ ಮೂಲಕ ನೀಡುವ ಸಾಲವನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡಿಕೊಂಡಾಗ ಮಾತ್ರ ರೈತರು ಖಾಸಗಿ ವ್ಯಕ್ತಿಗಳಲ್ಲಿ ಸಾಲ ಪಡೆಯುವುದು ತಪ್ಪಲಿದೆ ಎಂದರು.
ನಿಗದಿತ ಸಮಯಕ್ಕೆ ಸಾಲ ಪಾವತಿಸಿ: ನಿಗದಿತ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಿದಾಗ ಮಾತ್ರ ಸಂಘವು ಆರ್ಥಿಕ ಸದೃಢ ಹಾಗೂ ಗ್ರಾಮದ ಇತರೆ ರೈತರಿಗೂ ಸಾಲ ಸೌಲಭ್ಯಗಳು ನೀಡಲು ಸಹಕಾರಿಯಾಗಲಿದೆ. ಗ್ರಾಮ ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಸೇವಾ ಸಹಕಾರ ಸಂಘಗ ಳು ಇತರೆ ಬ್ಯಾಂಕಿಗ್ ವ್ಯವಸ್ಥೆಗಿಂತಲು ರೈತರಿಗೆ ಹತ್ತಿರ ಇರುವ ಸಂಸ್ಥೆಯಾಗಿದೆ. ಆಡಳಿತ ಮಂಡಳಿಗೆ ರೈತರೇ ಆಯ್ಕೆಯಾಗುವುದು ವಿಶೇಷ ವಾಗಿದೆ ಎಂದು ಹೇಳಿದರು.
ಕಂಟನಕುಂಟೆ ವಿಎಸ್ಎಸ್ಎನ್ಗೆ 1 ಕೋಟಿ ರೂ. ಸಾಲ ಮಂಜೂರು ಮಾಡಿಸಿದ ಬಿಡಿಸಿಸಿ ಬ್ಯಾಂಕ್ ಜಿಲ್ಲಾ ನಿರ್ದೇಶಕ ಜಿ. ಚುಂಚೇಗೌಡ ಅವರನ್ನು ಅಭಿನಂದಿಸಲಾಯಿತು.ಸಮಾರಂಭದಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ.ಆರ್.ಜಯಚಂದ್ರ ವಹಿಸಿದ್ದರು. ಉಪಾಧ್ಯಕ್ಷ ಟಿ.ನಾಗರಾಜ, ಕಂಟನಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ರಾಜಗೋಪಾಲ್,
ಜೆಡಿಎಸ್ ನಗರ ಘಟಕದ ಅಧ್ಯಕ್ಷ ವಡ್ಡರಹಳ್ಳಿ ರವಿ, ಮುಖಂಡರಾದ ಕೆ.ಎಂ. ಕೃಷ್ಣಮೂರ್ತಿ, ವಿ.ಎಸ್.ರಮೇಶ್, ಆನಂದ್ ಕುಮಾರ್, ವಿ.ಎಸ್.ಸುರೇಶ್, ಶ್ರೀನಿವಾಸ್, ರಮೇಶ್ ಶೆಣೈ, ನಾಗರಾಜ್, ರಾಜಗೋಪಾಲ್ ಸಂಘದ ಸಿಇಒ ರಾಮಮೂರ್ತಿ, ಕಾರ್ಯದರ್ಶಿ ರಂಗನಾಥ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್ ಸಮಸ್ಯೆ
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ