ಆಯುಷ್ಮಾನ್ ಭಾರತ್ ಬಡವರ ಪಾಲಿನ ಸಂಜೀವಿನಿ: ನಾಗೇಶ್
Team Udayavani, Sep 27, 2019, 3:14 PM IST
ಆನೇಕಲ್: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯು ಬಡವರ ಪಾಲಿನ ಸಂಜೀವಿನಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಗುಡ್ಡಹಟ್ಟಿ ನಾಗೇಶ್ ರೆಡ್ಡಿ ತಿಳಿಸಿದರು. ತಾಲೂಕಿನ ನೆರಳೂರು ಗ್ರಾಮದಲ್ಲಿ ಅರ್ಹ ಪಲಾನುಭಗಳಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಆರೋಗ್ಯ ಕಾರ್ಡ್ ಗಳನ್ನು ವಿತರಿಸಿ ಮಾತನಾಡಿದರು.
ಈ ಯೋಜನೆಯಲ್ಲಿ ಪ್ರತಿ ವರ್ಷ ಬಿಪಿಎಲ್ ಕುಟುಂಬಗಳಿಗೆ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ಹಾಗೂ ಎಪಿಎಲ್ ಕುಟುಂಬಗಳಿಗೆ ಸರ್ಕಾರಿ ಪ್ಯಾಕೇಜ್ ದರದಲ್ಲಿ ಶೇ 30 ರಷ್ಟು ವೆಚ್ಚ ಲಭ್ಯವಿದೆ ಎಂದರು. ಈ ಯೋಜನೆಯಲ್ಲಿ ಕಾರ್ಡ್ ಪಡೆದರು ನಿಗದಿತಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯ ಬಹುದಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ನೆರಳೂರು ಮಲ್ಲಿಕಾರ್ಜುನ್, ನೆರಳೂರು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಶಶಿ ಮತ್ತಿತರು ಇದ್ದರು.