ತಾಯಿ ಆನೆ ಹೊಟ್ಟೆಯೊಳಗೆ ಮರಿ ಸಾವು


Team Udayavani, Apr 21, 2023, 12:39 PM IST

tdy-10

ಆನೇಕಲ್‌: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ತಾಯಿ ಆನೆ ತನ್ನ ಆರೋಗ್ಯದಲ್ಲಾದ ಏರುಪೇರಿನಿಂದ ಹೊಟ್ಟೆಯೊಳಗೆ ಮರಿ ಮೃತಪಟ್ಟಿದೆ.

ಉದ್ಯಾನದಲ್ಲಿ ಹತ್ತನೇ ಮರಿಗೆ ಜನ್ಮ ನೀಡಬೇಕಾಗಿದ್ದ ಹಿರಿಯ ಆನೆ ಸುವರ್ಣ ಎರಡು ದಿನಗಳಿಂದ ಹೆರಿಗೆ ನೋವು ಅನುಭವಿಸುತ್ತಿತ್ತು. ಇದನ್ನು ಕಂಡ ವೈದ್ಯರ ತಂಡ ಆನೆಯನ್ನು ಒಂದೆಡೆ ಕಟ್ಟಿಹಾಕಿ ದೇಹದಲ್ಲಿನ ಬದಲಾವಣೆಗಳನ್ನು ಗಮನಿಸಿದ್ದಾರೆ. ಹೊಟ್ಟೆಯೊಳಗಿನ ಮರಿಗೆ ಜನ್ಮ ನೀಡಲು ಹಿಂಸೆ ಪಡುತ್ತಿದ್ದನ್ನು ಕಂಡ ಸಿಬ್ಬಂದಿ ಕೂಡಲೇ ಹಿರಿಯ ಪಶುವೈದ್ಯಾಧಿಕಾರಿಗಳನ್ನು ಕರೆಯಿಸಿ ಸಲಹೆ ಪಡೆದಿದ್ದಾರೆ. ಆಗ ಹೊಟ್ಟೆಯೊಳಗೆ ಮರಿ ಮೃತಪಟ್ಟಿರುವುದು ತಿಳಿದು ಬಂದಿದೆ. ಮೃತಪಟ್ಟ ಮರಿ ಆನೆಯನ್ನು ಹೊರ ತೆಗೆಯಲು ವೈದ್ಯರು ಸಾಕಷ್ಟು ಹರಸಾಹಸಪಟ್ಟರು.

ಮೊದಲಿಗೆ ವೈದ್ಯರ ತಂಡ ಆನೆಗೆ ಅರವಳಿಕೆ ಇಂಜಕ್ಷನ್‌ ನೀಡಿತು. ಬಳಿಕ ತಾಯಿ ಆನೆಯ ಗುದದ್ವಾರದ ಭಾಗದಲ್ಲಿ ಕತ್ತರಿಸಿ ಮರಿಯನ್ನು ಹೊರ ತೆಗೆಯಿತು. ಕತ್ತರಿಸಿದ ಭಾಗದಲ್ಲಿ ಹೊಲಿಗೆ ಹಾಕಿ ಚಿಕಿತ್ಸೆ ನೀಡಲಾಗಿದೆ. ಮೃತಪಟ್ಟ ಮರಿ ಆನೆಯ ತೂಕ 150 ಕೆ.ಜಿ. ಇತ್ತು. ಇದನ್ನು ಹೊರ ತೆಗೆದಿದ್ದರಿಂದ ತಾಯಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ ಎಂದು ವೈದ್ಯರ ತಂಡ ತಿಳಿಸಿದೆ.

ಸುವರ್ಣ ಆನೆ ಸುಮಾರು 48 ವರ್ಷ ವಯಸ್ಸಾಗಿದ್ದು, ಇಲ್ಲಿವರೆಗೂ 9 ಮರಿಗಗಳಿಗೆ ಸಹಜವಾಗಿ ಜನ್ಮ ನೀಡಿದೆ. ಈ ಬಾರಿ ಹತ್ತನೇ ಮರಿಗೆ ಜನ್ಮ ನೀಡಬೇಕಿತ್ತು. ಹೊಟ್ಟೆಯೊಳಗೆ 23ರಿಂದ 24 ತಿಂಗಳ ಗರ್ಭ ಬೆಳವಣಿಗೆ ಆಗಿತ್ತು. ಕಳೆದ ಮೂರು ದಿನಗಳಿಂದ ಹೆರಿಗೆ ಲಕ್ಷಣ ಕಾಣಿಸಿಕೊಂಡಿತ್ತು. ಹೊಟ್ಟೆಯೊಳಗೆ ಮರಿ ಸುತ್ತಲು ಆವರಿಸಿರುವ ನೀರಿನ ಪೊದರ ಒಡೆದು ಹೋಗಿತ್ತು. ಹಾಗೂ ಮರಿ ಇದ್ದ ಚಿತ್ರಣ ಸಹಜ ಹೆರಿಗೆಗೆ ವಿರುದ್ಧವಾಗಿತ್ತು ಇದರಿಂದ ಹೊಟ್ಟೆಯೊಳಗೆ ಮರಿ ಮೃತಪಟ್ಟಿದೆ ಎಂದು ಇಲ್ಲಿನ ವೈದ್ಯಕೀಯ ತಂಡ ತಿಳಿಸಿದೆ.

ಆನೆಗಳಲ್ಲಿ ಇಂತಹ ಘಟನೆಗಳು ಅಪರೂಪ, ಇಂತಹ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ನೀಡಲು ಕಷ್ಟವಾಗುತ್ತದೆ. ಅದರೂ ನಮ್ಮ ವೈದ್ಯರ ತಂಡ ಹೊಟ್ಟೆಯೊಳಗಿದ್ದ ಮರಿಯನ್ನು ಹೊರ ತೆಗೆದು ತಾಯಿ ಆನೆ ಆರೋಗ್ಯ ಸುರಕ್ಷಿತವಾಗಿರುವಂತೆ ನೋಡಿಕೊಂಡಿದ್ದಾರೆ ಎಂದು ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಸುನಿಲ್‌ ಪನ್ವಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.