ಚಿಕ್ಕಬಳ್ಳಾಪುರದಲ್ಲಿ ಇತಿಹಾಸ ಸೃಷ್ಟಿಸಿದ ಬಚ್ಚೇಗೌಡ


Team Udayavani, May 25, 2019, 1:38 PM IST

br-tdy-4

ದೇವನಹಳ್ಳಿ: ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್‌.ಬಚ್ಚೇಗೌಡ ಗೆಲ್ಲುವುದರ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕುಗಳಾದ ದೇವನಹಳ್ಳಿ, ಹೊಸಕೋಟೆ, ದೆಡ್ಡಬಳ್ಳಾಪುರ, ನೆಲಮಂಗಲ ಹೊಂದಿದ್ದು, ಈ ತಾಲೂಕುಗಳಲ್ಲೂ ಬಿಜೆಪಿಗೆ ಹೆಚ್ಚಿನ ಮತಗಳು ಬರುವಂತಾಗಿದೆ. ದೇವನಹಳ್ಳಿಯಲ್ಲಿ ಬಿಜೆಪಿಗೆ 83,966, ಕಾಂಗ್ರೆಸ್‌ಗೆ 73,382 ಮತಗಳು ಲಭಿಸಿದ್ದು,10,584 ಅಂತರ ಬಿಜೆಪಿಗೆ ಬಂದಿದೆ.

ದೊಡ್ಡಬಳ್ಳಾಪುರ ಬಿಜೆಪಿ ಅಭ್ಯರ್ಥಿಗೆ 87,967, ಕಾಂಗ್ರೆಸ್‌ ಅಭ್ಯರ್ಥಿಗೆ 67,403 ಮತಗಳು ಲಭಿಸಿವೆ. 20 ಸಾವಿರ ಅಂತರದಲ್ಲಿ ಬಿಜೆಪಿ ಮುನ್ನಡೆಯಾಗಿದೆ. ನೆಲಮಂಗಲದಲ್ಲಿ ಬಿಜೆಪಿಗೆ 83,529, ಕಾಂಗ್ರೆಸ್‌ಗೆ 63,983 ಮತಗಳು ಲಭಿಸಿದ್ದು, 19,546 ಅಂತರ ದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಹೊಸಕೋಟೆಯಲ್ಲಿ ಬಿಜೆಪಿಗೆ 95,702 ಮತಗಳು ಬಂದಿದ್ದು, ಕಾಂಗ್ರೆಸ್‌ಗೆ 85,552 ಮತಗಳು ಬಂದಿದೆ. 10,150 ಮತಗಳ ಅಂತರದಲ್ಲಿ ಮತ್ತೆ ಬಿಜೆಪಿ ಮುನ್ನಡೆಯಲ್ಲಿದೆ.

ಮೋದಿ ಅಲೆ: ಕಳೆದ ಬಾರಿ ಬಿ.ಎನ್‌. ಬಚ್ಚೇಗೌಡ 10ಸಾವಿರ ಅಂತರದಲ್ಲಿ ಸೋಲು ಕಂಡಿದ್ದರು. ಕಳೆದ ಚುನಾವಣೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪರ್ಧಿಸಿದ್ದರಿಂದ ಮತಗಳು ವಿಭಜನೆಯಾಗಿ ಸೋಲು ಕಂಡಿದ್ದರು. ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವುದರ ಮೂಲಕ ವಿಜಯದ ಬಾವುಟ ಹಾರಿಸಿದೆ. ವೀರಪ್ಪ ಮೊಯ್ಲಿಯವರು ಕಳೆದ ಹತ್ತು ವರ್ಷಗಳಿಂದ ಗೆಲ್ಲುತ್ತಲೇ ಬರುತ್ತಿದ್ದರು. ಹ್ಯಾಟ್ರಿಕ್‌ ಆಸೆ ಇಟ್ಟು ಕೊಂಡಿದ್ದರು. ಬಚ್ಚೇಗೌಡರು ಕಳೆದ ಬಾರಿ ಸೋತಿರುವ ಅನುಕಂಪದ ಅಲೆ ಮತ್ತು ನರೇಂದ್ರ ಮೋದಿಯವರ ಅಲೆ ಯಿಂದ ಈ ಬಾರಿ ಗೆಲುವು ಸಾಧಿಸಿದ್ದಾರೆ.

ಮೊದಲ ಗೆಲುವು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸತತವಾಗಿ ಕಾಂಗ್ರೆಸ್‌ ಗೆಲ್ಲುತ್ತಲೇ ಬರುತ್ತಿದೆ. ಕೃಷ್ಣ ರಾವ್‌ ಮತ್ತು ಆರ್‌.ಎಲ್‌.ಜಾಲಪ್ಪ ಗೆದ್ದಿದ್ದರು. ತದನಂತರ ವೀರಪ್ಪ ಮೊಯ್ಲಿ ಎರಡು ಬಾರಿ ಗೆದ್ದಿದ್ದರು. ಬಿಜೆಪಿ ಇಲ್ಲಿ ಗೆದ್ದಿರುವ ಉದಾಹರಣೆಯೇ ಇರಲಿಲ್ಲ. ಇದೇ ಮೊದಲ ಬಾರಿಗೆ ಒಕ್ಕಲಿಗ ಸಮುದಾಯದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಒಕ್ಕಲಿಗ ಮತಗಳು ನಿರ್ಣಾಯಕವಾಗಿದ್ದವು. ಒಕ್ಕಲಿಗ ಮತಗಳು ಸಹ ಲಭಿಸಿದೆ. ಎಸ್‌ಸಿ, ಎಸ್‌ಟಿ ಹಾಗೂ ಇತರೆ ಮತಗಳು ಸಹ ಬಂದಿರುವುದು ಗೆಲುವಿಗೆ ಕಾರಣವಾಗಿದೆ. ಕ್ಷೇತ್ರದಲ್ಲಿ ಜೆಡಿಎಸ್‌ ಮತಗಳ ಬಲವೂ ಬಿ.ಎನ್‌. ಬಚ್ಚೇಗೌಡರಿಗೆ ಲಬಿಸಿರುವುದರಿಂದ ಗೆಲುವು ಇನ್ನಷ್ಟು ಸುಲಭವಾಗಿದೆ.

ಖಾತೆ ತೆರೆದ ಬಿಜೆಪಿ: ಜನರು ಈ ಬಾರಿ ಕಳೆದ ಹತ್ತು ವರ್ಷಗಳಿಂದ ವೀರಪ್ಪ ಮೊಯ್ಲಿ ಅವರನ್ನು ಗೆಲ್ಲಿಸಿ ಕೊಂಡು ಬರುತ್ತಿದ್ದರು. ಈ ಬಾರಿ ಬದಲಾವಣೆ ಬಯಸಿದ್ದರು. ಜಿಲ್ಲೆಯ ಎಲ್ಲಾ ಕ್ಷೇತ್ರ ಗಳಲ್ಲೂ ಬಿಜೆಪಿಗೆ ಲೀಡ್‌ ದೊರೆತಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಐದು ಶಾಸಕರು, ಜೆಡಿಎಸ್‌ ಇಬ್ಬರು ಶಾಸಕರು, ಕೇವಲ ಬಿಜೆಪಿ ಶಾಸಕರು ಒಬ್ಬರೇ ಇದ್ದಾರೆ. ಆದರೆ 1.81ಲಕ್ಷ ಮತಗಳಅಂತರದಲ್ಲಿ ಗೆಲುವು ಸಾಧಿಸಿರುವುದು ಇತಿಹಾಸ ಸೃಷ್ಟಿಯಾದಂತಾಗಿದೆ. ಇದೀಗ ಬಿಜೆಪಿ ಖಾತೆ ತೆರೆದಿದೆ. ಹೊಸಕೋಟೆವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿಹಾಗೂ ಅವರ ಪುತ್ರ ಸೋತಿದ್ದರು.

ಕಳೆದ ಲೋಕಸಭಾ ಚುನಾವಣೆಯಲ್ಲೂಸಹ ಸೋಲನ್ನು ಅನುಭವಿಸಿದ್ದರು. ಈ ಬಾರಿ ಜನರು ಕೈಹಿಡಿದಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಆಶೀರ್ವಾದದಿಂದ ಗೆದ್ದಿದ್ದೇನೆ. ದೇಶಕ್ಕಾಗಿ ಮೋದಿ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನಾನು ಎಂಬ ಘೋಷಣೆಯಡಿ ಜನರಲ್ಲಿ ಮತಯಾಚನೆ ಮಾಡಿದ್ದೆ. ಅದೇ ರೀತಿ, ಜನರು ಇಲ್ಲಿ ನನ್ನನ್ನು ಗೆಲ್ಲಿಸುವುದರ ಮೂಲಕ ದೇಶದಲ್ಲಿ ನಮ್ಮ ಲೆಕ್ಕಾಚಾರಕ್ಕೂ ಮೀರಿ ಹೆಚ್ಚಿನ ಮತ ನೀಡಿದ್ದಾರೆ. ಎಲ್ಲಾ ಮತದಾರರಿಗೂ ನನ್ನ ಕೃತಜ್ಞತೆಸಲ್ಲಿಸುತ್ತೇನೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಮೊದಲ ಆದ್ಯತೆಯಾಗಿ ಕುಡಿವ ನೀರು, ಮೂಲಭೂತ ಸೌಕರ್ಯಕ್ಕೆಹೆಚ್ಚಿನ ಒತ್ತು ಕೊಡಲಾಗುವುದು ಎಂದು ನೂತನ ಸಂಸದ ಬಿ.ಎನ್‌.ಬಚ್ಚೇಗೌಡ ಹೇಳಿದರು.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.