ತಡರಾತ್ರಿ ಪುಂಡರ ಹಾವಳಿ: ಕಾಲೇಜೊಂದರ ಆವರಣದಲ್ಲಿ ಸಿಸಿ ಕ್ಯಾಮೆರಾ, ನೋಟಿಸ್ ಬೋರ್ಡ್ ಗೆ ಹಾನಿ


Team Udayavani, Nov 18, 2022, 9:37 AM IST

3

ಬೆಂ.ಗ್ರಾಮಂತರ: ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಬೆಳಗ್ಗೆ ಸುಮಾರು 8:15 ಗೆ ಕಾಲೇಜಿನ ಬಳಿ ಬರುತ್ತಿದ್ದಂತೆ ಅಲ್ಲಿ ಕಟ್ಟಿದ್ದ ಬ್ಯಾನರ್ ಕಿತ್ತು ಹಾಕಿದ ದೃಶ್ಯ ಕಂಡು ಬಂದಿತು. ನಂತರ ಹೂವಿನ ಕುಂಡಗಳು ಚೆಲ್ಲಾ ಪಿಲ್ಲಿಯಾಗಿ ಬಿದ್ದಿದ್ದವು. ಕಾಲೇಜಿನ ಬಳಿ ಹೋದಾಗ ಅನೇಕ ವಸ್ತುಗಳು ಹಾನಿಯಾಗಿದ್ದು ಗಮನಕ್ಕೆ ಬಂದು ಕಾಲೇಜಿನ ಆವರಣದ ಪರಿಸ್ಥಿತಿ ನೋಡಿ ಒಂದು ರೀತಿಯ ಗಾಬರಿಯಾಯಿತು ಎಂದು ವಿಜಯಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಲ್. ಎನ್. ಶಶಿಕುಮಾರ್ ತಿಳಿಸಿದರು.

ವಿಜಯಪುರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತಡರಾತ್ರಿ ನಡೆದ ಘಟನೆ ಬಗ್ಗೆ ಪೊಲೀಸರ ಬಳಿ ವಿವರ ಹೇಳುವ ಸಂದರ್ಭದಲ್ಲಿ ಮಾತನಾಡಿ, ನಿನ್ನೆ ಬುಧವಾರ ರಾತ್ರಿ ಕಿಡಿಗೇಡಿಗಳು ಕಾಲೇಜಿನ ಆವರಣದ ಮುಂದೆ ಇದ್ದ ಎರಡು ಸಿಸಿ ಕ್ಯಾಮೆರಾ ಗಳನ್ನು ಒಡೆದಿದ್ದಾರೆ. ನೋಟಿಸ್ ಬೋರ್ಡ್ ಗಾಜನ್ನು ಒಡೆದಿದ್ದಾರೆ. ಗೇಟ್ ಬಳಿ ಇದ್ದ ಹೂವಿನ ಕುಂಡಗಳನ್ನು ಛಿದ್ರಗೊಳಿಸಿದ್ದಾರೆ. ನೀರಿನ ಸಿಮೆಂಟ್ ತೊಟ್ಟಿ ಒಡೆದಿದ್ದಾರೆ. ಆವರಣದಲ್ಲಿ ಬೆಳೆಸಿದ್ದ ಗಿಡಗಳನ್ನು ಹಾನಿಗೊಳಿಸಿದ್ದಾರೆ.

ಗೋಡೆಗಳಿಗೆ ಕಲ್ಲಿನಿಂದ ಹೊಡೆದಿದ್ದಾರೆ. ಗುಟ್ಕಾ ಅಗಿದು ಗೋಡೆಗಳಲ್ಲಿ ಉಗುಳಲಾಗಿದೆ. ಕಾಲೇಜು ಆವರಣದ ಕಟ್ಟೆಗೆ ರಕ್ತದ ಕಲೆ ಅಂಟಿದೆ.  ತುಳಸಿ ಕಟ್ಟೆಯನ್ನು ಹೊಡೆದು ಹಾಕಿದ್ದಾರೆ. ಈ ದುಷ್ಕೃತ್ಯ ಮಾಡಿದವರು ಯಾರು ಎಂದು ತಿಳಿದು ಬಂದಿಲ್ಲ. ಸಿಸಿ ಕ್ಯಾಮೆರಾ ವೀಕ್ಷಿಸಿದಾಗ ಸಿಸಿ ಕ್ಯಾಮೆರಾಗೆ ಫೋಮ್ ಸ್ಪ್ರೇ ಸಿಂಪಡಿಸಿ ಆದಷ್ಟು ಮಬ್ಬು ಮಾಡಿ ಕೋಲಿನಿಂದ ಕ್ಯಾಮೆರಾ ಒಡೆದಿರುವುದು ಕಂಡು ಬಂದಿದೆ ಎಂದು ತಿಳಿಸಿದರು.

ಈ ಬಗ್ಗೆ ವಿಜಯಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಸಿಬಿಸಿ ಉಪಾಧ್ಯಕ್ಷರ ಗಮನಕ್ಕೂ ಈ ವಿಚಾರ ತಿಳಿಸಲಾಗಿದೆ. ಕಾಲೇಜಿನಲ್ಲಿ ಅನೇಕ ದಾಖಲೆಗಳು, ಕಡತಗಳು ಇರುವುದರಿಂದ ಕಾಲೇಜಿಗೆ ರಕ್ಷಣೆ ಬೇಕಿದೆ. ಭಯದ ವಾತಾವರಣ ಹೋಗಬೇಕಿದೆ ಎಂದು ತಿಳಿಸಿದರು.

ಮೇ ತಿಂಗಳಲ್ಲೂ ನಡೆದಿತ್ತು ಕಳ್ಳತನ: ಮೇ ತಿಂಗಳಲ್ಲಿಯೂ ಕೆಲವು ಕಿಡಿಗೇಡಿಗಳು ಸಂಪ್ ಮೋಟರ್ ಕಳವು ಮಾಡಿದ್ದರು. ಕಡಿಯುವಕಲ್ಲು ಮುರಿಯಲಾಗಿತ್ತು. ಪೈಪ್ ಲೈನ್ ಗಳನ್ನು ಕಿತ್ತು ಹಾಕಲಾಗಿತ್ತು. ಇದೆಲ್ಲಾ ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು. ಕೃತ್ಯ ಮಾಡಿದವರ ಚಹರೆಯು ಕಾಣುತ್ತಿತ್ತು. ಈ ಬಗ್ಗೆ ವಿಜಯಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಕಿಡಿಗೇಡಿಗಳು ಮತ್ತೆ ಇಂತಹ ದುಸ್ಸಾಹಸಕ್ಕೆ ಕೈ ಹಾಕಿ, ಕಾಲೇಜಿಗೆ ಸಂಬಂಧಿಸಿದ ಅನೇಕ ವಸ್ತುಗಳನ್ನು ನಾಶಪಡಿಸಿದ್ದಾರೆ ಎನ್ನಲಾಗುತ್ತಿದೆ.

ಸ್ಥಳಕ್ಕೆ ಪಿಎಸ್ ಐ ಈರಮ್ಮ, ಸಿಪಿಐ ವೀರೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

Supreme Court

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-17

ಬೆಂಗಳೂರು ಗ್ರಾಮಾಂತರ: ಕಮಲ ಅಭ್ಯರ್ಥಿಗಳ ಆಯ್ಕೆ ಕುತೂಹಲ

“10 ಕೋ. ರೂ. ವೆಚ್ಚದಲ್ಲಿ “ಶ್ರಮಿಕ ನಿವಾಸ’

“10 ಕೋ. ರೂ. ವೆಚ್ಚದಲ್ಲಿ “ಶ್ರಮಿಕ ನಿವಾಸ’

Untitled-1

ಬಿಜೆಪಿಯಿಂದ ಸ್ಪರ್ಧೆ ಖಚಿತ

TDY-8

ವಿಶ್ವ ರಂಗಭೂಮಿ ದಿನಾಚರಣೆ: ನಶಿಸುತ್ತಿರುವ ರಂಗಕಲೆಗೆ ಪ್ರೋತ್ಸಾಹ ಅಗತ್ಯ

tdy-12

ನೆಲಮಂಗಲ ಪೊಲೀಸರ ಭರ್ಜರಿ ಬೇಟೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.