ಫಲಾನುಭವಿಗೆ ಸೌಲಭ್ಯ ಕಲ್ಪಿಸಲು ಬ್ಯಾಂಕ್‌ ಸಿಬ್ಬಂದಿ ಹಿಂದೇಟು


Team Udayavani, Jan 25, 2019, 6:44 AM IST

pala.jpg

ದೊಡ್ಡಬಳ್ಳಾಪುರ: ಸರಕಾರದ ವಿವಿಧ ಇಲಾಖೆ ಗಳ ಸೌಲಭ್ಯಗಳನ್ನು ಅರ್ಹ ಫಲಾನುಭ ವಿಗಳಿಗೆ ತಲುಪಿಸಲು ಬ್ಯಾಂಕ್‌ ಸಿಬ್ಬಂದಿ ಸ್ಪಂದಿಸು ತ್ತಿಲ್ಲ ಎಂದು ತಾಪಂ ಸದಸ್ಯರಾದ ಶಂಕರಪ್ಪ, ಹಸನ್‌ಘಟ್ಟ ರವಿ ಮತ್ತು ಶಶಿಧರ್‌ ಆರೋಪಿಸಿದರು.

ನಗರದ ತಾಪಂ ಸಭಾಂಗಣದಲ್ಲಿ ಗುರುವಾರ ನಡೆದ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆಯಿಂದ ಆಯ್ಕೆಯಾಗುವ ಫಲಾನುಭವಿಗಳಿಗೆ ಬ್ಯಾಂಕ್‌ನ ಮುಲಾಜಿರದೇ ನೇರವಾಗಿ ಅವರ ಖಾತೆಗೆ ಹಣ ಜಮಾ ಮಾಡುವ ವ್ಯವಸ್ಥೆ ಜಾರಿಗೊಳಿಸಲು ಸರಕಾರಕ್ಕೆ ಸೂಚನೆ ನೀಡಬೇಕೆಂದು ಒತ್ತಾಯಿಸಿದರು.

ರಾಷ್ಟ್ರಧ‌್ವಜ ಸರಿಯಾಗಿ ಹಾರಿಸಲ್ಲ: ನ್ಯಾಯಾಲ ಯದ ಆದೇಶದ ಅನ್ವಯ ರಾಷ್ಟ್ರಧ‌್ವಜದ ನೀತಿ ಸಂಹಿತೆ ಅಡಿ ರಾಷ್ಟ್ರಧ‌್ವಜವನ್ನು ಹಾರಿಸಬೇಕು. ಆದರೆ, ತಾಲೂಕಿನ ಅನೇಕ ಗ್ರಾಪಂಗಳಲ್ಲಿ ಅವಿದ್ಯಾ ವಂತ ವಾಟರ್‌ವೆುನ್‌ಗಳಿಗೆ ಈ ಕಾರ್ಯ ಒಪ್ಪಿಸಿ ರುವುದರಿಂದ ರಾಷ್ಟ್ರಧ‌್ವಜದ ಮಹತ್ವ ಅರಿಯದೇ ಬೇಕಾಬಿಟ್ಟಿಯಾಗಿ ಹಾರಿಸುತ್ತಿದ್ದಾರೆ. ಈ ಕುರಿತು ತಾಲೂಕಿನ ಗ್ರಾಪಂ ಒಂದರ ವಿರುದ್ಧ ದೊಡ್ಡ ಬೆಳವಂಗಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಶಶಿಧರ್‌ ಮತ್ತು ಸುನಿಲ್‌ಕುಮಾರ್‌ ಹೇಳಿದರು.

ಸದಸ್ಯ ಸುನಿಲ್‌ಕುಮಾರ್‌ ಮಾತನಾಡಿ, ತೂಬಗೆರೆ ಪ್ರೌಢಶಾಲೆಯ ಕೆಲ ಶಿಕ್ಷಕರು ಮಕ್ಕಳಲ್ಲಿ ಮೌಡ್ಯತೆ ಬಿತ್ತುವ ಮೂಲಕ ಬಲವಂತವಾಗಿ ಹಣ ಸುಲಿಗೆ ಮಾಡುತ್ತಿದ್ದು, ಶಿಕ್ಷಣ ಇಲಾಖೆ ಅಧಿಕಾರಿ ಗಳು ಅಂತಹ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳ ಬೇಕೆಂದು ಆಗ್ರಹಿಸಿದರು.

ಸದಸ್ಯರಾದ ಮುತ್ತುಲಕ್ಷ್ಮೀ ವೆಂಕಟೇಶ್‌ ಹಾಗೂ ಪದ್ಮಾವತಿ ಅಣ್ಣಯಪ್ಪ ಮಾತನಾಡಿ, ಹೊಸಹಳ್ಳಿ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ, ಬನವತಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಳಾಂತರ ಮುಂತಾದ ಸಮಸ್ಯೆಗಳ ಬಗ್ಗೆ ಸಾಕಷ್ಟು ಬಾರಿ ಹೇಳಿದರೂ ಪ್ರಯೋಜನವಾಗಿಲ್ಲ. ಮುಂದಿನ ಸಭೆಯೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಸಭೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು.

ಕ್ರಮಕ್ಕೆ ಸೂಚನೆ: ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯಿತಿ ಅಧ್ಯಕ್ಷ ಶ್ರೀವತ್ಸ ಮಾತನಾಡಿ, ರಾಷ್ಟ್ರಧ‌್ವಜಕ್ಕೆ ಅಗೌರವ ತೋರಿದರೆ ಸಹಿಸಲು ಅಸಾಧ್ಯ. ಇಂತಹ ಘಟನೆ ಮರುಕಳಿಸಿದರೆ ಪಿಡಿಒ ರನ್ನು ನೇರ ಹೊಣೆಗಾರರನ್ನಾಗಿಸಿ ಶಿಸ್ತುಕ್ರಮ ಕೈಗೊಳ್ಳಲಾಗುವುದು. ತೂಬಗೆರೆ ಶಾಲೆಯಲ್ಲಿ ಪಾಠ ಮಾಡುವುದ ಬಿಟ್ಟು ವ್ಯಾಪಾರ ಮಾಡುತ್ತಿರುವ ಶಿಕ್ಷಕರ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ನಕಲಿ ವೈದ್ಯರ ಹಾವಳಿ ತಡೆಯಲು ವಿಫಲರಾದ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿಯನ್ನು ವರ್ಗಾಯಿಸುವುದು. ಬರಗಾಲದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುಂಜಾಗ್ರತೆಗೆ ಕ್ರಮ, ತಾಯಿ, ಮಗು ಆಸ್ಪತ್ರೆಗೆ ರಸ್ತೆ ಕಾಮಗಾರಿ ಹಾಗೂ ಬಸ್‌ ವ್ಯವಸ್ಥೆ, ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಜಮೀನು ನೀಡಲು ಮನವಿ.

ಗ್ರಾಮ ವಿಕಾಸ ಯೋಜನೆಯ ತ್ವರಿತ ಅನುಷ್ಠಾನ, ಕಾಲು ಬಾಯಿ ರೋಗ ತಡೆಗೆ ವ್ಯಾಪಕ ಪ್ರಚಾರದ ಮೂಲಕ 15ನೇ ಸುತ್ತಿನ ಅಭಿಯಾನಕ್ಕೆ ಚಾಲನೆ ನೀಡಲು ಸೂಚನೆ, ಮೇವಿನ ಕೊರತೆ ಉಂಟಾ ಗದಂತೆ ನಿಗಾವಹಿ ಸುವುದು, ಹೆಗ್ಗಡಿಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣಕ್ಕೆ ಒತ್ತಾಯ ಸೇರಿದಂತೆ ವಿವಿಧ ಇಲಾಖೆ ಯೋಜನೆಗಳ ಚರ್ಚೆ ನಡೆಯಿತು.

ಇಒ ದ್ಯಾಮಪ್ಪ, ಉಪಾಧ್ಯಕ್ಷೆ ಮೀನಾಕ್ಷಿ ಕೆಂಪಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಮೋಹನ್‌,ಸಹಾಯಕ ಕೃಷಿ ನಿರ್ದೇಶಕ ಪಿ.ಎಸ್‌.ನಾರಾಯಣಸ್ವಾಮಿ ಸೇರಿದಂತೆ ತಾಪಂ ಸದಸ್ಯರು ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.