ಚಿಗರೇನಹಳ್ಳಿ ಬಳಿ ಕೊಳೆಯುತ್ತಿರುವ ಬಿಬಿಎಂಪಿ ಕಸ

ಗ್ರಾಮಗಳಿಗೆ ಹರಿದಕೊಳಚೆ ನೀರು,ಗ್ರಾಮಸ್ಥರಿಗೆ ನರಕ ದರ್ಶನ ; ಈಡೇರದ ಸಿಎಂ ನೀಡಿದ್ದ ಭರವಸೆ

Team Udayavani, Aug 24, 2021, 3:04 PM IST

ಚಿಗರೇನಹಳ್ಳಿ ಬಳಿ ಕೊಳೆಯುತ್ತಿರುವ ಬಿಬಿಎಂಪಿ ಕಸ

ದೊಡ್ಡಬಳ್ಳಾಪುರ: ತಾಲೂಕಿನ ಚಿಗರೇನಹಳ್ಳಿ ಸಮೀಪದ ಬಿಬಿಎಂಪಿಯ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕದಲ್ಲಿನ ಕಸದ ರಾಶಿಯಿಂದ ಹೊರ ಬರುತ್ತಿರುವ ಕೊಳಚೆ ನೀರು ಸುತ್ತಮುತ್ತಲ ಗ್ರಾಮಗಳ ಮೂಲಕ ಹರಿಯುತ್ತಿದ್ದು, ಇದರಿಂದ ದುರ್ವಾಸನೆಯಿಂದ ಗ್ರಾಮಸ್ಥರು ಮೂಗು
ಮುಚ್ಚಿಕೊಂಡು ಬದುಕುವ ದುಸ್ಥಿತಿ ಉಂಟಾಗಿದೆ. ಕಸದಿಂದ ಬರುವ ಕೆಟ್ಟ ಗಾಳಿ ಮತ್ತು ನೊಣಗಳ ಹಾವಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ‌ ನರಕ ದರ್ಶನವಾಗಿದೆ.

ಮಳೆಗಾಲದಲ್ಲಿ ಎಂಎಸ್‌ಜೆಪಿ ಘಟಕದಲ್ಲಿನ ಕಸದ ರಾಶಿಯಿಂದ ಬರುವ ವಿಷಯುಕ್ತ ನೀರನ್ನು ತಡೆಯುವ ಕಾರಣಕ್ಕೆ ಮಣ್ಣಿನಿಂದ ಕಟ್ಟೆ
ಕಟ್ಟಲಾಗಿದೆ. ಆದರೆ, ಕಳೆದೆರಡು ದಿನದಿಂದ ಸುರಿಯುತ್ತಿರುವ ಮಳೆಯಿಂದ ಕಟ್ಟೆ ಒಡೆದು ನೀರು ಕೆರೆಗೆ ಹರಿಯುತ್ತಿದೆ. ಎಂಎಸ್‌ಜಿಪಿ ಘಟಕದಿಂದ ಕೂಗಳತೆಯ ದೂರದಲ್ಲಿರುವ ತಣ್ಣೀರಹಳ್ಳಿ ಸುತ್ತಲು ಹರಿಯುವ ಕಾಲುವೆಗೆ ಬಂದಿದೆ.

ವಿಷಯುಕ್ತ ನೀರು: ಈ ವಿಷಯುಕ್ತ ನೀರು ಹರಿಯುವುದರಿಂದ ಕೆಟ್ಟ ವಾಸನೆ ಗ್ರಾಮದ ಸುತ್ತಲೂ ಆವರಿಸಿದೆ. ವಿಷದ ನೀರು ಅಂತರ್ಜಲ ಸೇರುತ್ತಿದೆ. ಇದೇ ನೀರನ್ನು ಸುತ್ತಮುತ್ತಲಿನ ಗ್ರಾಮಸ್ಥರು ಕುಡಿಯುತ್ತಿದ್ದಾರೆ. ಜಾನುವಾರುಗಳು ಸಹ ಇದೇ ನೀರು ಕುಡಿಯಬೇಕು. ವಿಷಯುಕ್ತ
ನೀರು ಕುಡಿಯುವುದರಿಂದ ಜನರು ಮತ್ತು ಜಾನುವಾರುಗಳು ಅನಾರೋಗ್ಯಕ್ಕೆ ತುತ್ತಾಗಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಎರಡು ದಿನಗಳಿಂದ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಕಸದ ರಾಶಿಯಿಂದ ಕೊಳಚೆ ನೀರು ಹೊರಬರಲು ಆರಂಭವಾಗಿದೆ. ಕಸದ ರಾಶಿಯ ಸುತ್ತಲು ಮಣ್ಣಿನಲ್ಲಿ ಹಾಕಲಾಗಿದ್ದ ಕಟ್ಟೆ ಕೊಳಚೆ ನೀರಿನ ಹರಿವು ಹೆಚ್ಚಾಗಿದ್ದರಿಂದ ಹೊಡೆದು ಹೋಗಿದೆ. ಹೀಗಾಗಿ ತಣ್ಣೀರನಹಳ್ಳಿ ಗ್ರಾಮದ
ಸಮೀಪದಲ್ಲಿನ ಹಳ್ಳದ ಮೂಲಕ ಕೊಳಚೆ ನೀರು ಮಾವತ್ತೂರು ಕೆರೆಯಕಡೆಗೆ ಹರಿಯ ತೊಡಗಿದೆ.

ಇದನ್ನೂ ಓದಿ:ಕಾಂಗ್ರೆಸ್‍ನಲ್ಲಿ ಪ್ರಮೋಷನ್ ಸಿಗಬೇಕೆಂದರೆ ಜೈಲಿಗೆ ಹೋಗಬೇಕು: ಸಿ.ಟಿ.ರವಿ ವ್ಯಂಗ್ಯ

ಈಡೇರದ ಭರವಸೆ: ಹಳ್ಳದ ಸಾಲಿನಲ್ಲಿ ಜಮೀನುಗಳಲ್ಲಿ ರೈತರು ಬೆಳೆದಿದ್ದ ಅಡಕೆ, ತೆಂಗು ಸೇರಿದಂತೆ ಮರಗಳು ಒಣಗಲು ಆರಂಭಿಸಿವೆ.
ಎಂಎಸ್‌ಜಿಪಿ ಘಟಕದಲ್ಲಿನ ಬಿಬಿಎಂಪಿ ಕಸದ ಹಾವಳಿಯನ್ನು ತಪ್ಪಿಸುವಂತೆ ಈ ಭಾಗದ ಹತ್ತಾರು ಗ್ರಾಮಗಳ ಜನರು ಪಕ್ಷಾತೀತವಾಗಿ ಏಳುದಿನಗಳ ಕಾಲ ನಡೆಸಿದ್ದ ನಿರಂತರ ಧರಣಿ ಸಂದರ್ಭದಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಧರಣಿ ನಿರತರು ಹಾಗೂ
ಜನಪ್ರತಿನಿಧಿಗಳೊಂದಿಗೆ ವಿಧಾನ ಸೌಧದಲ್ಲಿ ಸಭೆ ನಡೆಸಿದ್ದರು. ಕೊಳಚೆ ನೀರು ಹಳ್ಳದ ಕಡೆಗೆ ಹರಿದು ಬರದಂತೆ ತಡೆಗೋಡೆ ನಿರ್ಮಿಸುವ ಹಾಗೂ ಬಿಬಿಎಂಪಿ ವ್ಯಾಪ್ತಿಯಿಂದ ನೂರಾರು ಸಂಖ್ಯೆಯಲ್ಲಿ ಕಸ ತುಂಬಿಕೊಂಡು ಬರುತ್ತಿರುವ ಲಾರಿಗಳ ಸಂಖ್ಯೆಯನ್ನು ಕಡಿಮೆ ಮಾಡಿ ಬೇರೆಡೆಗೂಹೋಗುವಂತೆ ಮಾಡುವ ಭರವಸೆ ನೀಡಿದ್ದರು. ಆದರೆ ಸಭೆ ನಡೆಸಿ ಒಂದುವರೆ ವರ್ಷ ಕಳೆದಿದ್ದರು ಯಾವುದೇ ಭರವಸೆಯು ಈಡೇರಿಲ್ಲ.

ಯೋಗ್ಯವಲ್ಲ: ಹಳ್ಳದಲ್ಲಿ ಕೊಳಚೆ ನೀರು ಹರಿದು ಬರುವುದು ತಪ್ಪಿಲ್ಲ. ನಮ್ಮೂರಿನ ಸುತ್ತಲಿನ ಕೊಳವೆ ಬಾವಿಗಳಲ್ಲಿ ಬರುವ ನೀರು ಕುಡಿಯಲು
ಯೋಗ್ಯವೇ ಇಲ್ಲ ಎನ್ನುವ ವರದಿ ಬಂದು ವರ್ಷಗಳೇ ಕಳೆದಿವೆ. ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟರೆ ದೂರುದ ಗ್ರಾಮಗಳಿಂದ ಕ್ಯಾನ್‌ಗಳಲ್ಲಿ ನೀರು ತಂದು ಕುಡಿಯುವ ಸ್ಥಿತಿ ಇದೆ. ಮಳೆಗಾಲ ಹೊರತು ಬೇಸಿಗೆಯಲ್ಲಿ ಸಂಪೂರ್ಣವಾಗಿ ಕೊಳವೆ ಬಾವಿ ನೀರನ್ನೇ ಬಳಸಿ ತರಕಾರಿ ಮತ್ತಿತರೆ ಬೆಳೆಯನ್ನು ಬೆಳೆಯುವುದೇ ಕಷ್ಟವಾಗಿದೆ ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ ಅಧಿಕಾರಿಗಳು ಸಹ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ತಣ್ಣೀರನಹಳ್ಳಿ ಗ್ರಾಮದ ರೈತ ರಾಜಣ್ಣ ದೂರಿದ್ದಾರೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.